ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆ ಸಿಬ್ಬಂದಿಯ ಭೀಕರ ಕೊಲೆ|ನಡುರಸ್ತೆಯಲ್ಲಿ ಮೃತದೇಹ ಪತ್ತೆ|Murder
ಶಿವಮೊಗ್ಗ ನಗರದ ಜೈಲ್ ರಸ್ತೆಯ ಇಡ್ಲಿ ಹೌಸ್ ಪಕ್ಕದ ತಿರುವಿನ ವೆಂಕಟೇಶ ನಗರ ತಿರುವಿನ ಆರಂಭದ ಮನೆಯೊಂದರ ಮುಂದೆ ಇಂದು ಮುಂಜಾನೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಆತನ ಹೊಟ್ಟೆಗೆ ಚಾಕುವಿನಿಂದ ತಿವಿದಿದ್ದಾರೆ. ಮೃತ ವ್ಯಕ್ತಿಯನ್ನು ಗಾಂಧಿನಗರದ ನಿವಾಸಿ ಹಾಗೂ ಶಿವಮೊಗ್ಗ ನಗರದ ಭಾರತ್ ನ್ಯೂರೋ ಕ್ಲಿನಿಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ್ ಎಂ.ವಿ.ಎಂದು ಹೇಳಲಾಗುತ್ತಿದೆ. ಆತನಿಗೆ ಸುಮಾರು 34 ವರ್ಷ ವಯಸ್ಸು ಎನ್ನಲಾಗಿದೆ. ಗಾಂಧಿನಗರದ ನಿವಾಸಿಯಾದ ಆತನಿಗೆ ನಿನ್ನೆ ರಾತ್ರಿ ಎರಡು ಮೂವತ್ತರ ಹೊತ್ತಿಗೆ ಆಸ್ಪತ್ರೆಯಿಂದ ಫೋನ್…