ಮತಾಂತರ ಆರೋಪ – ಪಾದ್ರಿ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರು|protest

ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆಗೆ ಬಜರಂಗ ದಳ ಮುತ್ತಿಗೆ ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಪ್ರಾರ್ಥನೆ ನಡೆಸುತ್ತಿದ್ದ ಮನೆಯಲ್ಲಿ ಬಜರಂಗ ದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಮನೆಯೊಂದರಲ್ಲಿ ಪ್ರತಿ ಭಾನುವಾರ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪಾದ್ರಿ ಮಣಿಕಂಠ ಮತ್ತವರ ತಂಡದವರು ಪ್ರತಿ ಭಾನುವಾರ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜನೆ ಮಾಡುತ್ತಿದ್ದರು. ಪ್ರಾರ್ಥನೆ ಆಯೋಜಿಸುತ್ತಿದ್ದವರ ವಿರುದ್ಧ…

Read More

ಜೀವನದಲ್ಲಿ ಜಿಗುಪ್ಸೆಗೊಂಡ ರಿಪ್ಪನ್‌ಪೇಟೆಯ ಆಟೋ ಚಾಲಕ ಕಳೆನಾಶಕ ಸೇವಿಸಿ ಸಾವು|crime news

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದಲ್ಲಿ ನಡೆದಿದೆ. ಬೆಳಕೋಡು ನಿವಾಸಿ ಬಿನೋಯ್ ಸ್ಕರಿಯಾ(52) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.  ರಿಪ್ಪನ್‌ಪೇಟೆ ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಆಟೋ ಚಾಲಕನಾಗಿದ್ದ ಬಿನೋಯ್ ಸ್ಕರಿಯಾ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.ಆಟೋ ಓಡಿಸುವುದನ್ನು ಒಂದು ವರ್ಷದಿಂದ ನಿಲ್ಲಿಸಿದ್ದರು.ಅವರು ನಿನ್ನೆ ರಾತ್ರಿ ಬೆಳಕೋಡು ಗ್ರಾಮದಲ್ಲಿರುವ ಮನೆಯಲ್ಲಿ ಕಳೆನಾಶಕ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.  ಈ ವೇಳೆ…

Read More

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್|Azaan

ಡಿಸಿ ಕಚೇರಿಯ ಮುಂದೆ ಆಜಾನ್ ಕೂಗಿದ ಯುವಕ-ವಿಡಿಯೋ ವೈರಲ್ ಶಿವಮೊಗ್ಗ : ಈಶ್ವರಪ್ಪನವರು ಆಜಾನ್ ವಿಚಾರದಲ್ಲಿ ಲಘುವಾಗಿ ಮಾತನಾಡಿರುವುದನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ  ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಯುವಕನೋರ್ವ ಆಜಾನ್ ಕೂಗಿದ್ದು ಈ ವಿಡಿಯೋ ವೈರಲ್ ಆಗಿದೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ನಡೆದಿದ್ದ ಘಟನೆಯಲ್ಲಿ ಆಜಾನ್ ಕೂಗಿದ ವಿಡಿಯೋ ವೈರಲ್ ಆಗಿದೆ. ಸ್ಥಳೀಯರ ಮೊಬೈಲ್ ನಲ್ಲಿ ಆಜಾನ್ ಕೂಗಿದ ದೃಶ್ಯ ಸೆರೆಯಾಗಿದ್ದು, ಫೇಸ್ ಬುಕ್ ಪೇಜ್ ಒಂದರಲ್ಲಿ ಈ ವಿಡಿಯೋ ವೈರಲ್…

Read More

ಹಂದಿ ಅಣ್ಣಿ ಕೊಲೆ ಆರೋಪಿ ಆಂಜನೇಯ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಈ ಸುದ್ದಿ ನೋಡಿ|crime news

ಚೀಲೂರಿನ ಗೋವಿನ ಕೋವಿಯ ಬಳಿಯಲ್ಲಿ ನಡೆದಿದ್ದ ಡಬ್ಬಲ್ ಅಟ್ಯಾಕ್ ಸಂಬಂಧ ದಾವಣಗೆರೆ ಪೊಲೀಸರು ಆಂಧ್ರದ ಗುಂಟೂರಿನ ರೈಲ್ವೆ ಸ್ಟೇಷನ್​ನಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ ಎಂಬ ಸುದ್ದಿ ಬೆಂಗಳೂರಿನ ಮೂಲಗಳಿಂದಲೇ ಲಭ್ಯವಾಗಿತ್ತು.  ಆದರೆ , ಈ ಪ್ರಕರಣ ಇದೀಗ ರೋಚಕ ಟ್ವಿಸ್ಟ್ ಗಳನ್ನು ಪಡೆದುಕೊಳ್ಳುತ್ತಿದೆ.  ಪೊಲೀಸ್ ಹಾಗೂ ಭೂಗತ ಲೋಕದ ನಡುವಿನ ಮೈಂಡ್ ಗೇಮ್ ಆಗಿ ಬದಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ  ದಾವಣೆಗೆರೆ ಪೊಲೀಸ್ ಮೂಲಗಳಿಂದ ಮಾಹಿತಿಯೊಂದು ಲಭ್ಯವಾಗಿದ್ದು, ಡಬ್ಬಲ್​ ಅಟ್ಯಾಕ್​ನ ಮಾಸ್ಟರ್ ಮೈಂಡ್ ತಮಿಳ್ ರಮೇಶ್​ ಅರೆಸ್ಟ್ ಆಗಿಲ್ಲ…

Read More

ಸಾಗರ : ಹಾಸ್ಟೆಲ್ ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಸಾಗರ ತಾಲೂಕಿನ ಜೋಗದಲ್ಲಿನ ಶಾಲೆಯೊಂದರ 25ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು, ಊಟ ಸೇವಿಸಿದ ನಂತ್ರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಾಗರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಸಾಗರದ ಜೋಗದ ಬಳಿಯ ಕ್ರಿಸ್ತ ಪ್ರಕಾಶ್ ಹಿರಿಯ ಪ್ರಾಥಮಿಕ ಶಾಲೆಯ ಹಾಸ್ಟೆಲ್ ವಿದ್ಯಾರ್ಥಿಗಳು ಇಂದು ರಾತ್ರಿ ನೀಡಿದಂತ ಊಟವನ್ನು ಸೇವಿಸಿದ್ದಾರೆ. ಈ ಬಳಿಕ ತಕ್ಷಣ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಸಾಗರದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಸಿದ್ದಾರೆ….

Read More

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime

ರಿಪ್ಪನ್‌ಪೇಟೆ :  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ…

Read More

ನಾಳೆ(19-03-2023) ರಿಪ್ಪನ್‌ಪೇಟೆಯಲ್ಲಿ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ವಾಣಿಜ್ಯ ಗೋದಾಮು ಉದ್ಘಾಟನೆ

ರಿಪ್ಪನ್‌ಪೇಟೆ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಮಾ.19ರಂದು ಬೆಳಿಗ್ಗೆ 10.30ಕ್ಕೆ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ಬಹುಸೇವಾ ವಾಣಿಜ್ಯ ಗೋದಾಮು ಉದ್ಘಾಟನೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಹೊಸನಗರ ತಾಲೂಕು ಶಾಖೆ ವತಿಯಿಂದ ಜಿಲ್ಲಾ ಮಟ್ಟದ ನಾಲ್ಕನೇ ಜಾನಪದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ತಾಲೂಕ್ ಜಾನಪದ ಪರಿಷತ್ತು ಅಧ್ಯಕ್ಷ ಎಂ.ಎಂ. ಪರಮೇಶ್ ತಿಳಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷಿಗೂ ಮತ್ತು…

Read More

ತುಂಗಾ ಸೇತುವೆಯಿಂದ ಹೊಳೆಗೆ ಹಾರಲು‌ ಮುಂದಾದ ಯುವ ಜೋಡಿ – ಯುವತಿ ಬಚಾವ್ ,ಯುವಕ ಗಂಭೀರ|tunga

ಶಿವಮೊಗ್ಗ ನಗರದ ಹಳೆ ಸೇತುವೆಯ ಬಳಿಯಲ್ಲಿ ಯುವ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನೂ ಈ ವೇಳೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ.  ಯುವ ಜೋಡಿಗಳು ಹಳೆಸೇತುವೆ ಬಳಿ ಬಂದು ಕೆಲ ಹೊತ್ತು ಮಾತನಾಡ್ತಿದ್ದ ಜೋಡಿ ಬಳಿಕ ಬ್ರಿಡ್ಜ್​ನಿಂದ ನದಿಗೆ ಹಾರಲು ಮುಂದಾಗಿದ್ದನ್ನ ಅಲ್ಲಿದ್ದವರು ಗಮನಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಯುವಕ ನದಿಗೆ ಹಾರಿದ್ದಾನೆ. ಯುವತಿಯನ್ನು ಅಲ್ಲಿದ್ದವರು ಹಿಡಿದು ರಕ್ಷಿಸಿದ್ದಾರೆ.  ಇನ್ನೂ ನದಿಗೆ ಹಾರಿದ ಯುವಕ ನೇರವಾಗಿ ಹೊಳೆಯ ಬಂಡೆಯ ಮೇಲೆ ಬಿದ್ದಿದ್ದ….

Read More

ಶಿವಮೊಗ್ಗ : ಲೇಡೀಸ್ ನೈಟ್ ಪಾರ್ಟಿ ತಡೆದ ಭಜರಂಗದಳದ ಕಾರ್ಯಕರ್ತರು|Ladies party

ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ…

Read More

ರಿಪ್ಪನ್‌ಪೇಟೆ : ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಯಾರು ಇಲ್ಲದ ದೇವಸ್ಥಾನದಲ್ಲಿ ತಾಳಿ ಕಟ್ಟಿದ ಯುವಕ – ಪೋಕ್ಸೋ ಪ್ರಕರಣ ದಾಖಲು|pocso

ರಿಪ್ಪನ್‌ಪೇಟೆ : ಇತ್ತೀಚೆಗೆ ಶಿವಮೊಗ್ಗ ಜಿಲ್ಲಾದ್ಯಂತ ಪೋಕ್ಸೋ ಪ್ರಕರಣಗಳು ಹೆಚ್ಚುತಿದ್ದು ಅದರಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷದಲ್ಲಿ ಹಲವಾರು ಪೋಕ್ಸೋ ಪ್ರಕರಣ ದಾಖಲಾಗುತ್ತಿರುವುದು ಆತಂಕಕಾರಿಯಾದ ಬೆಳವಣಿಗೆಯಾಗಿದೆ. ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ನಂತರ ಲೈಂಗಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮದುವೆಯಾದ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ. ನೊಂದ ಬಾಲಕಿಯ ದೂರಿನ ವಿವರ : ನನ್ನ ಊರಿನ ಪರಿಚಯಸ್ಥ ಯುವಕ ಸುಮಾರು ಮೂರ್ನಾಲ್ಕು…

Read More
Exit mobile version