ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi
ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…


