Headlines

ರಿಪ್ಪನ್ ಪೇಟೆ :ಭೀಕರ ಅಪಘಾತ , ಮರಕ್ಕೆ ಗುದ್ದಿದ ಮರಳು ತುಂಬಿದ್ದ ಟಿಪ್ಪರ್

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಬಳಿ ಮರಳು ತುಂಬಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ಮರಳು ತುಂಬಿಕೊಂಡು ಹೋಗುವಾಗ ಅರಸಾಳು ಸಮೀಪದ 9ನೇ ಮೈಲಿಕಲ್ ನಲ್ಲಿ ಬೆಳಗಿನಜಾವ ಈ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಟಿಪ್ಪರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಟಿಪ್ಪರ್ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಜೆಸಿಬಿ ಯಂತ್ರದ ಮೂಲಕ ಹೊರತೆಗೆಲಾಯಿತು. ಚಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ.ಚಾಲಕ ಹೊಸನಗರ…

Read More

ಬೈಂದೂರು – ರಾಣೆಬೆನ್ನೂರು ದ್ವಿಪಥ ರಸ್ತೆ ನಿರ್ಮಾಣ : ಸಂಸದ ಬಿ ವೈ ರಾಘವೇಂದ್ರ…. ಸಂಪೆಕಟ್ಟೆಯಿಂದ – ಹೊಸನಗರದ ಮಾವಿನಕೊಪ್ಪ ವೃತ್ತಕ್ಕೆ ಬೈಪಾಸ್ ರಸ್ತೆ :

ಬೈಂದೂರು-ರಾಣೆಬೆನ್ನೂರು ರಸ್ತೆ ಹಾಗೂ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸುಮಾರು 203 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 766(2) ಬೈಂದೂರು – ರಾಣೇ ಬೆನ್ನೂರು ರಸ್ತೆ ರಾಜ್ಯದ ಮಧ್ಯ ಭಾಗ ಹಾಗು ಕರಾವಳಿ ಭಾಗವನ್ನು ಸಂಪರ್ಕಿಸುವ ಏಕಪಥ ಹಾಗೂ ಮದ್ಯಂತರ ಪಥದ ರಸ್ತೆಗಳಾಗಿವೆ. ಇವುಗಳನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೋರಿದ ಫಲವಾಗಿ ಕೊಲ್ಲೂರು ಪಟ್ಟಣ, ನಾಗೋಡಿ, ಜಯನಗರದಿಂದ ಹೊಸನಗರ ಬಟ್ಟೆ ಮಲ್ಲಪ್ಪದಿಂದ ಯಡೇಹಳ್ಳಿ, ಕಿಟ್ಟದ ಹಳ್ಳಿಯಿಂದ ಮಾಸೂರು ರಟ್ಟಿ…

Read More

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹೊಸಮನೆ 6 ನೇ ತಿರುವಿನ ನಿವಾಸಿ ಮನೋಜ್ (22) ಮೃತ ದುರ್ಧೈವಿಯಾಗಿದ್ದಾನೆ. ಶಿವಮೊಗ್ಗದ JNNC ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಈತ ಕಾಂಗ್ರೆಸ್ ಮುಖಂಡ ಫ್ಲವರ್ ಕುಮಾರ್ ಅವರ ಪುತ್ರನಾಗಿದ್ದಾನೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ,ನಿನ್ನೆ ಸಂಜೆಯೇ ಯುವಕನ ಮೃತದೇಹವನ್ನು ಮೆಗ್ಗಾನ್ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ…

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ : ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಹರತಾಳು ಹಾಲಪ್ಪ ಚರ್ಚೆ

ರಿಪ್ಪನ್ ಪೇಟೆ : ಪಟ್ಟಣದ ರಸ್ತೆಗಳ  ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಇಂದು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ 6ಕೋಟಿ ಹಣ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ 2ಕೋಟಿ ಅನುದಾನ ನೀಡುವಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಾಗೆಯೇ ಸಾಗರದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಶಾಸಕರು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.

Read More

ಎರಡು ಗುಂಪುಗಳ ನಡುವೆ ಗಲಾಟೆ – ಮೂವರಿಗೆ ಚೂರಿ ಇರಿತ|Crime News

ಶಿವಮೊಗ್ಗ : ವೈಯಕ್ತಿಕ ಕಾರಣಕ್ಕಾಗಿ ಯುವಕರ ನಡುವೆ ಗಲಾಟೆ ನಡೆದು ಮೂವರು ಚಾಕು ಇರಿತಕ್ಕೆ ಒಳಗಾದ ಘಟನೆ ನಿನ್ನೆ ರಾತ್ರಿ ಟಿಪ್ಪುನಗರದ ಬಳಿ ನಡೆದಿದೆ. ಟಿಪ್ಪುನಗರದ ಸಮೀರ್ (23), ಫರಾಜ್(24), ಜೆ.ಪಿ.ನಗರದ ಮೊಹಮದ್ ಖಾಲಿದ್ ಅಲಿಯಾಸ್ ಸೋನು (19) ಚಾಕು ಇರಿತದಿಂದ ಗಾಯಗೊಂಡವರು. ಮೂವರು ಶಿವಮೊಗ್ಗ ರೌಡಿಶೀಟರ್ ಗಳು.  15 ದಿನದ ಹಿಂದೆ ರೌಡಿಶೀಟರ್ಗಳಾದ ಸಮೀರ್, ಫರಾಜ್ ಮತ್ತು ಸಲ್ಲು, ಸೆಬು, ಸೋನು, ಕತ್ರು ಗ್ಯಾಂಗ್ ನಡುವೆ ಗಲಾಟೆ ನಡೆದಿತ್ತು. ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿ…

Read More

ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ

ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ ವರ್ಗಾವಣೆ – ನೂತನ AC ಯಾರು ಗೊತ್ತಾ.?? ಈ ಸುದ್ದಿ ನೋಡಿ ಸಾಗರ : ‌ಇಲ್ಲಿನ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರಕಾರದ ಉಪ ಕಾರ್ಯದರ್ಶಿ ಯುಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಲ್ಲವಿ ಸಾತೇನಹಳ್ಳಿ ರವರ ಸ್ಥಾನಕ್ಕೆ ಮಹೇಶ್ ಜೆ ರವರನ್ನು ನೂತನ ಉಪ ವಿಭಾಗಧಿಕಾರಿಯಾಗಿ ವರ್ಗಾಯಿಸಲಾಗಿದೆ. ಪಲ್ಲವಿ ಸಾತೇನಹಳ್ಳಿ ರವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಡಿಪಿಆರ್ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ…

Read More

ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ರಿಪ್ಪನ್‌ಪೇಟೆ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿಯಲ್ಲಿ ಶುಕ್ರವಾರ ಬೆಳ್ಳೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರು ಕಾರ್ಯಕ್ರಮ ಉದ್ಘಾಟಿಸಿ ನಾಗರಿಕರಿಂದ ಮನವಿ ಸ್ವೀಕರಿಸಿ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಬಕಾರಿ ,ಕೃಷಿ ,ಅರಣ್ಯ ,ಕಂದಾಯ ಇಲಾಖೆಗೆ ಸಂಬಂಧಪಟ್ಟ ದೂರುಗಳು ಅಧಿಕವಾಗಿದ್ದವು. ಸಂಧ್ಯಾ ಸುರಕ್ಷಾ, ಅಂಗವಿಕಲ, ವಿಧವಾ ವೇತನ ಇವುಗಳಿಗೆ ಸಂಬಂಧಪಟ್ಟಂತೆ ಸ್ಥಳದಲ್ಲಿ ಮಂಜೂರಾತಿ ಆದೇಶ ನೀಡಿದರು.  ಗ್ರಾಮೀಣ ಪ್ರದೇಶದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಮಾರಾಟದ ಬಗ್ಗೆ…

Read More

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ –

ಬಿ ಆರ್ ಪಿ ಗೆ ಡ್ಯಾಂ ಗೆ ವಿಹಾರಕ್ಕೆ ಹೋಗಿದ್ದ ತಂದೆ- ಮಗ ನೀರಲ್ಲಿ ಮುಳುಗಿ ಸಾವು | ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ – ಶಿವಮೊಗ್ಗ: ಭದ್ರಾ ನದಿಗೆ ಇಳಿದಿದ್ದ ಮಗನನ್ನು ರಕ್ಷಿಸಲು ಹೋದ ತಂದೆಯು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ಬಳಿಯ ಬಿ ಆರ್ ಪಿ ಡ್ಯಾಂ ಬಳಿ ನಡೆದಿದೆ. ಭದ್ರಾವತಿಯ ಭೂತನಗುಡಿಯ ನಿವಾಸಿ ಹಫೀಜ್ ಜಾಬರ್ ಮತ್ತು ಅವರ ಪುತ್ರ ಜಾವೇದ್ (14) ಹಾಗೂ ಕುಟುಂಬ ಬಿಆರ್ ಪಿಗೆ ವಿಹಾರಕ್ಕೆ ತೆರಳಿದ್ದರು…

Read More

ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ. 11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ…

Read More

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ ಸಾಲದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಗ್ರಾಮದಲ್ಲಿ ನಡೆದಿದೆ. ಹೊಸ ಮನೆ ನಿರ್ಮಾಣಕ್ಕೆ ಸಾಲ ಮಾಡಿಕೊಂಡಿದ್ದ ದಂಪತಿ ಸಾಲ ತೀರಿಸಲಾಗದೆ ಭಾನುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಾ ನಾಯ್ಕ(72), ಲಕ್ಷ್ಮಮ್ಮ(58) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ದಂಪತಿಗೆ ಇಬ್ಬರು ಪುತ್ರರಿದ್ದಾರೆ , ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲದ ವಿಚಾರವಾಗಿ ದಂಪತಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾಳೂರು…

Read More