ತೀರ್ಥಹಳ್ಳಿಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ದ ಗೋಬ್ಯಾಕ್ ಪ್ರತಿಭಟನೆ – ಪ್ರತಿಭಟನಾಕಾರರ ಪೊಲೀಸ್ ವಶಕ್ಕೆ|thirthahalli
ರೋಹಿತ್ ಚಕ್ರತೀರ್ಥ ವಿರುದ್ದ ಭಾರಿ ಪ್ರತಿಭಟನೆ ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಕಡೆಗೋಲು ವಿಚಾರ ಮಂಥನ ವೇದಿಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರು ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.ಇದು ಕುವೆಂಪು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ. ಕುವೆಂಪು ಅವರನ್ನು ಅವಮಾನಿಸುವ ಮೂಲಕ ರೋಹಿತ್ ಚಕ್ರತೀರ್ಥ ವಿಕೃತಿ ಮೆರೆದಿದ್ದಾರೆ. ಇವರಿಗೆ ಕುವೆಂಪು ಅವರ ಬಗ್ಗೆ ಮಾತನಾಡಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದಿನಿಂದಲೇ ಪ್ರತಿಭಟನೆ ವ್ಯಕ್ತವಾಗಿತ್ತು. ಗೋ ಬ್ಯಾಕ್ ಪ್ರತಿಭಟನೆಯೂ…