Headlines

ಉರುಳಿಗೆ ಸಿಲುಕಿ ಚಿರತೆ ಸಾವು|leopard

ಉರುಳಿಗೆ ಸಿಲುಕಿ ಚಿರತೆ ಸಾವು ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಅಗರದಹಳ್ಳಿಯಲ್ಲಿ ನಡೆದಿದೆ. ಚಿರತೆ (Leopard) ಭದ್ರಾ ಅಭಯಾರಣ್ಯದ ವಲಯದಿಂದ ಹೊರಬಂದು ಅಗರದಹಳ್ಳಿಯ ಕಾಲುವೆ ಕೆಳಗೆ ಸೇರಿಕೊಂಡಿತ್ತು. ಇದನ್ನು ಸೆರೆ ಹಿಡಿಯಲು ಭದ್ರಾ ಕಣಿವಮ್ಮ ದೇವಸ್ಥಾನದ ಬಳಿ ಕಳೆದ ಒಂದು ತಿಂಗಳಿಂದ ಬೋನು ಇಟ್ಟಿದ್ದರೂ ಚಿರತೆ(leopard) ಸೆರೆ ಸಿಕ್ಕಿರಲಿಲ್ಲ. ಆದರೆ ತಡರಾತ್ರಿ ಕಾಲುವೆಯಿಂದ ಅಡಿಕೆ ತೋಟಕ್ಕೆ ಹೋಗವಾಗ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿದೆ. ಚಿರತೆಯ ಸಾವಿನ ಕುರಿತು…

Read More

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ | ಹಿಂಡ್ಲೆಮನೆ ಶಾಲಾ ಸುವರ್ಣ ಮಹೋತ್ಸವ ಸಂಭ್ರಮ ರಿಪ್ಪನ್‌ಪೇಟೆ ; ಮಕ್ಕಳ ಮನಸ್ಥಿತಿಯರಿತು ಶಿಕ್ಷಕ, ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಶಿಕ್ಷಕರದಾಗಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ…

Read More

ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ.  ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ,…

Read More

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ | Crime News

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ –  ನಾಲ್ಕು ವರ್ಷದ ಪ್ರೀತಿ, ಮದ್ವೆಯಾಗಿ 15 ದಿನಕ್ಕೆ ಉಲ್ಟಾ ಹೊಡೆದ ಪ್ರಿಯತಮೆ ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ, ಅವಳು ಪಿಯುಸಿ ವಿದ್ಯಾರ್ಥಿನಿ, ಇಬ್ಬರ ನಡುವೆ ಹುಚ್ಚು ಪ್ರೇಮ. ಪ್ರೊ ಕಬಡ್ಡಿಯಲ್ಲಿ ಆಟವಾಡುವ ಕನಸು ಕಂಡವ ಪ್ರೀತಿಯ ಹುಚ್ಚಿಗೆ ಬಿದ್ದಿದ್ದ. ಹುಡುಗಿ ಮನೆಯವರ ವಿರೋಧದ ನಡೆವೆ ಪ್ರೀತಿ ಉಳಿಸಿಕೊಳ್ಳುವ ಸವಾಲಿಗೆ ಬಿದ್ದು ಅವಳನ್ನೇ ಮದುವೆಯಾಗಿದ್ದ.ಪ್ರೀತಿಯಿಂದ ಆರಂಭವಾಗಿ ವಿವಾಹ ಬಂಧನಕ್ಕೆ ಬಿದ್ದವನು ಕಟ್ಟಿಕೊಂಡವಳ ಚೆಲ್ಲಾಟಕ್ಕೆ ಜೀವ ಚೆಲ್ಲಿದ್ದಾನೆ. …

Read More

ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident

ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದೌಡಾಯಿಸಿದ್ದಾರೆ….

Read More

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಪ್ರಕಾಶ್ ಮಾದಾಪುರ , ಅಲ್ತಾಫ್…

Read More

ಎತ್ತು ಸಾಗಿಸುತಿದ್ದವನ ಮೇಲೆ ಹಲ್ಲೆ – 9 ಮಂದಿ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಸ್ಠೇಷನ್​ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರ ಸಂಬಂಧ ಸುಮೊಟೋ ಕೇಸ್ ಹಾಗೂ ಹಲ್ಲೆ ಪ್ರಕರಣದ ಕೇಸ್ ದಾಖಲಾಗಿದೆ.  ಎತ್ತುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಅಡಿಯಲ್ಲಿ9 ಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಇನ್ನೂ ಪ್ರಾಣಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿಯಲ್ಲಿ ವಾಹನದ ಚಾಲಕನ ವಿರುದ್ಧವೂ ಕೇಸ್ ದಾಖಲಾಗಿದೆ.  ಇಲ್ಲಿ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ವಾಹನವೊಂದನ್ನ ಗುಂಪೊಂದು ತಡೆದು ವಿಚಾರಿಸಿದೆ….

Read More

ಸಾಗರದ ಎಲ್ ಬಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ :

ಜೀವರಕ್ಷಣೆಗೆ  ಕಾರಣವಾಗುವ ರಕ್ತದಾನದಂತಹ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಪ್ರತಿಯೊಬ್ಬರು ಬಳಸಿಕೊಳ್ಳಬೇಕು ಎಂದು ರೋಟರಿ ರಕ್ತನಿಧಿ ವೈದ್ಯಾಧಿಕಾರಿಗಳಾದ ಬಿ ಜಿ  ಸಂಗಮ್ ಹೇಳಿದರು    ನಗರದ ಲಾಲ್ ಬಹದ್ದೂರ್ ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ಎನ್ ಸಿಸಿ, ವಿದ್ಯಾರ್ಥಿ ವೇದಿಕೆ,ಕೆ ಎಚ್ ಶ್ರೀನಿವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರ  ಜಿ.ಎ.ನಾರಿಬೋಲಿ ಮಹಾವಿದ್ಯಾಲಯ ,  ಲಯನ್ಸ್ ಕ್ಲಬ್ ಸಾಗರ ಹಾಗೂ ರೋಟರಿ…

Read More

ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಆರೋಗ್ಯ ಸದೃಡಗೊಳಿಸಿಕೊಳ್ಳಬೇಕು : ಚಂದ್ರಕಲಾ | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ

ರಿಪ್ಪನ್‌ಪೇಟೆ : ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ ಹೇಳಿದರು.        ಸಮೀಪದ ಬೆಳ್ಳೂರು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಬೆಳ್ಳೂರು ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ ವತಿಯಿಂದ ಗರ್ಭೀಣಿ ಮತ್ತು ಬಾಣಂತಿಯರಿಗಾಗಿ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ…

Read More

ಸ್ನೇಹಿತರ ನಡುವಿನ ಗಲಾಟೆ ಚೂರಿ ಇರಿತದಲ್ಲಿ ಅಂತ್ಯ : ಗಾಯಾಳು ಆಸ್ಪತ್ರೆಗೆ ದಾಖಲು-ಆರೋಪಿ ಪರಾರಿ|Stabbed

ಹೊಟೇಲ್ ನಲ್ಲಿ ಊಟ ಮಾಡುತಿದ್ದ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತು ಮಾತಲ್ಲೇ ಗಲಾಟೆಯಾಗಿ ಒಬ್ಬನಿಗೆ ಚೂರಿ ಇರಿತವಾಗಿರುವ ಘಟನೆ ನಡೆದಿದೆ. ಸಾಗರ ನಗರದ ಬಿ.ಎಚ್ ರಸ್ತೆಯ ಮಂಜುಶ್ರೀ ಹೋಟೆಲಿಗೆ ಗ್ರಾಹಕರಾಗಿ ಇಬ್ಬರು ಯುವಕರು ಬಂದಿದ್ದಾರೆ. ಅವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿದೆ. ಗಲಾಟೆ ತಾರಕಕ್ಕೇರಿ, ಒಬ್ಬ ಮತ್ತೊಬ್ಬನಿಗೆ ಚೂರಿಯಿಂದ ಚುಚ್ಚಿದ್ದಾನೆ. ಇರಿತಕ್ಕೆ ಒಳಗಾದವನನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಚೂರಿಯಿಂದ ಹಲ್ಲೆ ನಡೆಸಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.  ಘಟನಾ ಸ್ಥಳಕ್ಕೆ ಪೊಲೀಸರು ಬಂದು ಸ್ಥಳ ಪರಿಶೀಲನೆ…

Read More
Exit mobile version