ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ…

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ|byr

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ – ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕುಮಾರ್ ಬಂಗಾರಪ್ಪ ರವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಹಾಗೂ ರಾಜ್ಯ ವ್ಯಾಪ್ತಿಯಲ್ಲಿ ಸಂಘಟನೆಯ ಬಲವನ್ನು ಹೆಚ್ಚಿಸಿದವರಾಗಿದ್ದು ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಕಟ್ಟುಕಥೆಯಾಗಿದೆ ಎಂದರು….

Read More

ಮಾರಕಾಸ್ತ್ರಗಳೊಂದಿಗೆ ವೀಡಿಯೋ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಯುವಕನ ಬಂಧನ |Cybercrime

ಮಾರಕಾಸ್ತ್ರಗಳನ್ನು ಹಿಡಿದುಕೊಂಡು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಶಿವಮೊಗ್ಗ ತಾಲೂಕಿನ ಅಗಸವಳ್ಳಿಯ ಗೌಳಿ ಕ್ಯಾಂಪ್‌ನ ಇಸ್ಮಾಯಿಲ್ (20) ಬಂಧಿತ ಆರೋಪಿಯಾಗಿದ್ದು, ಈತ ಸಾಮಾಜಿಕ ಜಾಲತಾಣದಲ್ಲಿ ಲಾಂಗು-ಮಚ್ಚುಗಳೊಂದಿಗೆ ಇರುವ ವಿಡಿಯೋ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದನು. ಈತನು ಫೇಸ್‌ಬುಕ್‌ನಲ್ಲಿ ಇಸ್ಮಾಯಿಲ್ ಇಸ್ಮಾಯಿಲ್ ಎಂಬ ಖಾತೆ ಹೊಂದಿದ್ದ. ಜೊತೆಗೆ ಐದಾರು ಮಚ್ಚು ಮತ್ತು ತಲ್ವಾರ್‌ಗಳ ನಡುವೆ ಕಾಣಿಸಿಕೊಳ್ಳುವ ತನ್ನದೇ ವಿಡಿಯೋ ಮಾಡಿ ಪೇಸ್ಬುಕ್ ನಲ್ಲಿ ಹರಿಯಬಿಟ್ಟಿದ್ದ.  ಈ ಬಗ್ಗೆ…

Read More

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ | CEO

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್‌ ಲೇಖಂಡೆ ಸುಧಾಕರ್ ವಿಳಂಬ ಮಾಡಿದ್ದಾರೆ ಎಂದು ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮುದ್ದಣ್ಣನ ಕೆರೆಯಿಂದ 500 ಲೋಡು ಮಣ್ಣು ತೆಗೆಯಲು ಅನುಮತಿ ನೀಡಲಾಗಿತ್ತು. ಆದರೆ, ಕಾನೂನು ಬಾಹಿರವಾಗಿ 15,004 ಲೋಡ್ ಮಣ್ಣನ್ನು ತೆಗೆಯಲಾಗಿದೆ. ಇದರಿಂದ…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಸಂಪನ್ನ|nagarahalli

“ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ  ಸಂಪನ್ನ’’ ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ   ಶ್ರಿ ನಾಗೇಂದ್ರ ಸ್ವಾಮಿಯ ಹನ್ನೆರಡನೇ ವರ್ಷದ ಪ್ರತಿಷ್ಟಾವಧಂತಿ ಉತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮವು ಶ್ರದ್ದಾಭಕ್ತಿಯಿಂದ ಜರುಗಿತು. ನಾಗೇಂದ್ರಸ್ವಾಮಿಯ ಸನ್ನಿಧಿಯಲ್ಲಿ ದೇವತಾ ಪ್ರಾಥನೆ ಪೂಜೆ, ದೇವನಾಂದಿ,ಪ್ರಧಾನ ಸಂಕಲ್ಪ,ಮಹಾಗಣಪತಿ ಹವನ, ಸಪರಿವಾರ ಗಣಗಳಿಗೆ ಮೂಲಮಂತ್ರ ಹವನ ಹಾಗೂ ಪ್ರಾಯಶ್ಚಿತ್ತ ಹವನಗಳು ಶ್ರೀಸ್ವಾಮಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ,ಸಂಜೆ ಪ್ರಾಸಾದ ಶುದ್ಧಿ,ವಾಸ್ತು ,ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಜಗದ್ಗುರು…

Read More

ಗವಟೂರು ಹೊಳೆಯ ಒಡಲು ಬಗೆಯುತ್ತಿರುವ ಮರಳು ದಂಧೆಕೋರರು : ಈ ಮಾಫ಼ಿಯಾ ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಸಹಯಕರೋ.. ? ಅಸಮರ್ಥರೋ…?

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಗವಟೂರು ಶ್ರೀ ಸಿದ್ಧೇಶ್ವರ ದೇವಸ್ಥಾನದ ಪಾರ್ಶ್ವದಲ್ಲಿರುವ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಸುವುದು ಅಕ್ರಮ ಮರಳು ದಂಧೆಕೋರರಿಗೆ ದಿನಪ್ರತಿಯ ಕಸುಬಾಗಿದೆ. ಶರ್ಮಣ್ಯಾವತಿ (ಗವಟೂರು ಹೊಳೆ) ನದಿಯಿಂದ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ. ಟ್ಯೂಬ್, ಬಕೇಟ್, ಬುಟ್ಟಿಯನ್ನು ಉಪಯೋಗಿಸಿಕೊಂಡು ಹಗಲು ಹೊತ್ತಿನಲ್ಲಿ ನದಿ ಮಧ್ಯದಿಂದ ಮರಳನ್ನು ತೆಗೆದು ಸಂಗ್ರಹಿಸಿಟ್ಟುಕೊಂಡು ರಾತ್ರಿಯಾಗುತ್ತಿದ್ದಂತೆ ವಾಹನಗಳೊಂದಿಗೆ ಬೇರೆ ಬೇರೆ ತಾಲೂಕುಗಳಿಗೆ ಮರಳು ಸರಬರಾಜು ಮಾಡುವ ವಹಿವಾಟು ನಡೆಸಲಾಗುತ್ತಿದೆ  ಇಲ್ಲಿ…

Read More

ಟೋಲ್‌ಗೇಟ್ ವಿವಾದ : ಅ.9 ಕ್ಕೆ ಶಿಕಾರಿಪುರ ಬಂದ್ ಗೆ ಕರೆ

ಟೋಲ್‌ಗೇಟ್ ವಿವಾದ : ಅ.9 ರಂದು ರಂದು ಶಿಕಾರಿಪುರ ಬಂದ್ ಗೆ ಕರೆ ಶಿಕಾರಿಪುರ, ಸೆಪ್ಟೆಂಬರ್ ೨೮ : ಕುಟ್ರಳ್ಳಿ ಟೋಲ್‌ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ ೯ರಂದು ಶಿಕಾರಿಪುರ ಪಟ್ಟಣ ಬಂದ್‌ ನಡೆಸಲು ಟೋಲ್‌ಗೇಟ್ ಹೋರಾಟ ಸಮಿತಿ ಕರೆ ನೀಡಿದೆ ಎಂದು ಸಮಿತಿ ಮುಖಂಡ, ನ್ಯಾಯವಾದಿ ಶಿವರಾಜ್ ತಿಳಿಸಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂದು ವರ್ಷದಿಂದ ಟೋಲ್‌ಗೇಟ್ ತೆರವಿಗೆ ಹೋರಾಟ ನಡೆಸುತ್ತಿದ್ದೇವೆ. ಸಚಿವರು, ಸಂಸದರು, ಶಾಸಕರು ಎಲ್ಲರೂ ಬೆಂಬಲ ವ್ಯಕ್ತಪಡಿಸಿದರೂ, ಕಾಣದ ಶಕ್ತಿಯ ಕಾರಣದಿಂದ…

Read More

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ

Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ನಾಳೆ 04/05/24 ರ ವಿದ್ಯುತ್ ವ್ಯತ್ಯಯವಾಗುತ್ತದೆ ಎನ್ನುವ ಪ್ರಕಟಣೆಯನ್ನು ಮೆಸ್ಕಾಂ ಇಲಾಖೆ ಹಿಂಪಡೆದಿದೆ. ನಾಳೆ ಎಂದಿನಂತೆ ವಿದ್ಯುತ್ ಸರಬರಾಜು ಇರಲಿದೆ ಎಂದು ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ವಿದ್ಯುತ್ ಸರಬರಾಜು ನಿಲ್ಲಿಸಲು ತೀರ್ಮಾನಿಸಲಾಗಿತ್ತು ಆದರೆ…

Read More

ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ದೇವರಾಜ್ ಮಳವಳ್ಳಿ ಆಯ್ಕೆ|talale

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರಲ್ಲದ ಕ್ಷೇತ್ರದ ನಿರ್ದೇಶಕರ ಸ್ಥಾನಕ್ಕೆ ಮಳವಳ್ಳಿ ಗ್ರಾಮದ ದೇವರಾಜ್ ಮಳವಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ದೇವರಾಜ್ ಮಳವಳ್ಳಿ ರವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ದಿನೇಶ್ ಗೌಡ್ರು,ಕಲ್ಲೂರು ಲೋಕಪ್ಪ ಗೌಡ ,ಗಂಗಾಧರ್ ,ಕಲ್ಲೂರು ಮಂಜುನಾಥ್ ಹಾಗೂ ಎಲ್ಲಾ ನಿರ್ದೇಶಕರು…

Read More
Exit mobile version