ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಚ್ಚಿ ಸಾವು
ಸಾಗರ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಹಾವು ಕಡಿದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಸಾಗರ ತಾಲೂಕಿನ ದೊಡ್ಡೇರಿಯಲ್ಲಿ ನಡೆದಿದೆ. ದೊಡ್ಡೇರಿಯ ಹಿರಿಯಪ್ಪ- ಮಮತಾ ದಂಪತಿಯ ಪುತ್ರಿ ಐಶ್ವರ್ಯಾ(7) ಮೃತ ದುರ್ಧೈವಿ.ಮನೆ ಬಳಿ ಆಟವಾಡುತ್ತಿದ್ದಾಗ ಹಾವು ಕಡಿದಿದೆ.ತಕ್ಷಣ ಬಾಲಕಿಯ ತಂದೆ ಹಾಗೂ ಚಿಕ್ಕಪ್ಪ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆತಂದಿದ್ದಾರೆ.ಬಾಲಕಿಯು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಜೀವ ರಕ್ಷಿಸಲು ಪ್ರಯತ್ನ ಪಟ್ಟ ಕೆಳದಿ ಅಬ್ಬಾಸ್ ನೋವಿನ ಮಾತು ಬಾಲಕಿಯ…

