ಹೆದ್ದಾರಿಪುರ : ಯಡಗುಡ್ಡೆ ಅಂಗನಾವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ – ಗ್ರಾಮಸ್ಥರ ಆಕ್ರೋಶ|yadagudde
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು 6 ತಿಂಗಳು ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ.ಹೀಗೇ ದಿನ ಕಳೆದರೆ ಹೊಸ ಕಟ್ಟಡ ಶೀಥಿಲಾವಸ್ಥೆ ತಲುಪುದರಲ್ಲಿ ಅನುಮಾನ ಇಲ್ಲ ಎಂದು ಯಡಗುಡ್ಡೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಂಗನವಾಡಿ ಕೇಂದ್ರದ ಮಕ್ಕಳು ಅಂಗನವಾಡಿ ಶಿಕ್ಷಕಿಯ ಮನೆಯಲ್ಲಿ ಕಲಿಕೆಯಲ್ಲಿ ತೊಡಗಿದ್ದಾರೆ.ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿರುವ ಈ…


