Headlines

ಹೆದ್ದಾರಿಪುರ : ಯಡಗುಡ್ಡೆ ಅಂಗನಾವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ – ಗ್ರಾಮಸ್ಥರ ಆಕ್ರೋಶ|yadagudde

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು 6 ತಿಂಗಳು ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ.ಹೀಗೇ ದಿನ ಕಳೆದರೆ ಹೊಸ ಕಟ್ಟಡ ಶೀಥಿಲಾವಸ್ಥೆ ತಲುಪುದರಲ್ಲಿ ಅನುಮಾನ ಇಲ್ಲ ಎಂದು ಯಡಗುಡ್ಡೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಂಗನವಾಡಿ ಕೇಂದ್ರದ ಮಕ್ಕಳು ಅಂಗನವಾಡಿ ಶಿಕ್ಷಕಿಯ ಮನೆಯಲ್ಲಿ ಕಲಿಕೆಯಲ್ಲಿ ತೊಡಗಿದ್ದಾರೆ.ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿರುವ ಈ…

Read More

10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು ಸೊರಬ : ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎಂದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆದರೆ ಅಷ್ಟೊತ್ತಿಗಾಗಲೇ…

Read More

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ

ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ ಶಿವಮೊಗ್ಗ – ಮುಂಗಾರು ಮಳೆಗಾಲದಲ್ಲಿ ವಂಶಾಭಿವೃದ್ಧಿ ಚಟುವಟಿಕೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಮೀನುಗಾರಿಕೆಯನ್ನು ನಿಷೇದ ಮಾಡಲಾಗಿದೆ ಎಂದು ಮೀನುಗಾರಿಕ ಉಪನಿರ್ದೇಶಕರು ತಿಳಿಸಿದ್ದಾರೆ. ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆ (ಮೀನುಗಾರಿಕೆ) ವಂಶಾಭಿವೃದ್ದಿ ಚಟುವಟಿಕೆಗಳು ನಡೆಯವ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ನದಿಗಳು ಮತ್ತು ನದಿಗಳು ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ…

Read More

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ|rally

ಭಾವೈಕ್ಯತೆಗೆ ಸಾಕ್ಷಿಯಾದ ಶಿರಾಳಕೊಪ್ಪ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಸೌಹಾರ್ದತೆಗೆ ಸಾಕ್ಷಿಯಾಗಿತ್ತು.ಇಲ್ಲಿನ ಗಣಪತಿ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಂರು ಇಬ್ಬರೂ ಮೆರವಣಿಗೆ ಭಾಗಿಯಾಗಿ ಭಾವೈಕ್ಯತೆ ಮೆರೆದಿದ್ದಾರೆ. ಶಿರಾಳಕೊಪ್ಪದಲ್ಲಿ ಹಿಂದು ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಇಂದು ವಿಸರ್ಜಿಸಲಾಗುತ್ತಿದೆ.ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆಯಲಾಗಿದೆ. ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ  ಮುಸ್ಲಿಂ ಭಾಂಧವರು, ಹಿಂದು ಯುವಕರ ಜೊತೆ ಕುಣಿದು ಕುಪ್ಪಳಿಸಿದ್ದಾರೆ.ಈ ಮೆರವಣಿಗೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

Read More

ಹಣದಾಸೆಗೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಕೊಲೆ ಮಾಡಿ ಚಿನ್ನ ಕದ್ದೊಯ್ದಿದ್ದ ಆರೋಪಿಯ ಬಂಧನ|Arrested

ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪೇಪರ್ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್ 3 ರಂದು‌ ಭದ್ರಾವತಿಯ ಸುಣ್ಣದಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕೊಲೆ ಮಾಡಿ ಆರೋಪಿ ಬಂಗಾರದ ಓಲೆ ಮತ್ತು ಮೂಗುತಿಯೊಂದಿಗೆ ಪರಾರಿಯಾಗಿದ್ದನು. ಸದರಿ ಜಟಿಲ ಪ್ರಕರಣವನ್ನು ಕೈಗೆತ್ತಿಕೊಂಡ ಪೇಪರ್ ಟೌನ್ ಪೊಲೀಸರು ಕುಂದಾಪುರದ ಕರುಣಾಕರ ದೇವಾಡಿಗ (24) ಎಂಬಾತನನ್ನು ಬಂಧಿಸಿ 14000 ರೂ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ….

Read More

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು!

ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿಗೆ ಪ್ರತೀಕಾರ – ಮಿಡ್ ನೈಟ್ ಆಪರೇಷನ್ ನಲ್ಲಿ 9 ಉಗ್ರ ನೆಲೆಗಳ ಮೇಲೆ ದಾಳಿ, 100 ಕ್ಕೂ ಹೆಚ್ಚು ಉಗ್ರರು ಸಾವು ಭಾರತೀಯ ಸೇನೆಯು ಇಂದು ಬೆಳಗಿನ ಜಾವ “ಆಪರೇಷನ್ ಸಿಂಧೂರ್” ಎಂಬ ದಿಟ್ಟ ಕಾರ್ಯಾಚರಣೆಯನ್ನು ಪಾಕ್​ನ ಉಗ್ರರ ತಾಣಗಳ ಮೇಲೆ ನಡೆಸಿದೆ. ಆದರಂತೆ ಇಂದು ಮುಂಜಾನೆ ಅಂದರೆ, ಬೆಳಗಿನ 1:28 ರಿಂದ 1:51 ರವರೆಗೆ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಾಯುಪಡೆಯು ಪಾಕ್​ನ ಉಗ್ರರ ಅಡುಗುತಾಣಗಳನ್ನು…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ಕೇಸರಿ ಶಾಲು-ಹಿಜಾಬ್ ಸಂಘರ್ಷ ..!!

ಕರಾವಳಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾರಕಕ್ಕೇರಿರುವ ಕೇಸರಿ ಶಾಲು,ಹಿಜಾಬ್ ಧರಿಸುವ ಕುರಿತಾದ ಪ್ರಕರಣ ಇದೀಗ ರಾಜ್ಯದ ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಬಾಳೆಬೈಲು ಸರ್ಕಾರಿ  ಡಿಗ್ರಿ ಕಾಲೇಜಿಗೂ ತಟ್ಟಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಹೊಂದಿದ್ದು ಶಾಲೆಯ ಆಡಳಿತ ಇದಕ್ಕೆ ಅವಕಾಶ ಕಲ್ಪಿಸಿಲ್ಲ ಕೂಡಲೆ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಯನ್ನು ನೀಡಿದ್ದು ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೂರುತ್ತಿರುವುದರಿಂದ…

Read More

ಪುತ್ರ ವಿಜಯೇಂದ್ರರಿಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿ ಎಸ್ ಯಡಿಯೂರಪ್ಪ :

 ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ತಮ್ಮ ಬದಲು ಪುತ್ರ ವಿಜಯೇಂದ್ರ ಅವರು ಚುನಾವಣಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಬದಲು ವಿಜಯೇಂದ್ರ ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡಲಿದ್ದಾರೆ. ವಿಜಯೇಂದ್ರ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಕಳುಹಿಸಬೇಕು ಎಂದು ಇಲ್ಲಿನ ಮತದಾರರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದರು. ಹಳೆ ಮೈಸೂರು ಭಾಗದಲ್ಲಿಯೂ ವಿಜಯೇಂದ್ರ…

Read More

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ!

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ! ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು…

Read More

ರಿಪ್ಪನ್ ಪೇಟೆ : ಪಿಯು ಕಾಲೇಜಿನ 56 ವಿದ್ಯಾರ್ಥಿಗಳ ಕೋವಿಡ್ ವರದಿ ಪ್ರಕಟ :

ರಿಪ್ಪನ್ ಪೇಟೆ : ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು,ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗೆ ಕರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಸ್ಲ್ಯಾಬ್ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಗಂಟಲು /ಮೂಗಿನ ದ್ರವದ RTPCR ಟೆಸ್ಟ್ ವರದಿ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ. ಈ ಘಟನೆಯ…

Read More
Exit mobile version