Headlines

ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಾಲಯ ವಿರೂಪಗೊಳಿಸಿದ ದುಷ್ಕರ್ಮಿಗಳು|chandragutti temple

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯವನ್ನು ದುಷ್ಕರ್ಮಿಗಳು ವಿರೂಪ ಗೊಳಿಸಿದ್ದಾರೆ.  ದೇವಾಲಯದ ಬಾಗಿಲು ಒಡೆದು ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದ ಕಿಡಿಗೇಡಿಗಳು, ದೇವಾಲಯದ ಗರ್ಭಗುಡಿಯಲ್ಲಿ ಇರುವ ಮೂಲ ದೇವರ ಬೆಳ್ಳಿಯ ಹೊದಿಕೆಯನ್ನು ಹೊರ ಎಸೆದಿದ್ದಾರೆ. ಅಲ್ಲದೇ ದೇವಾಲಯದಲ್ಲಿರುವ ಹುಂಡಿ ಹಾಗೂ ಪೂಜಾ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಗೊಳಿಸಿದ್ದಾರೆ. ದೇವರ ಬೆಳ್ಳಿ ಮುಖವಾಡವನ್ನು ಗರ್ಭಗುಡಿಯಿಂದ ದೇವಸ್ಥಾನದ ಹೊರಗಡೆ ವರಂಡದಲ್ಲಿ ಎಸೆದಿದ್ದು, ಕಳ್ಳತನ ಮಾಡುವ ಉದ್ದೇಶ ಇರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.  ದೇವಸ್ಥಾನದ ಕೆಳಭಾಗದಲ್ಲಿರುವ…

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More

ನಾಳೆಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ : ಜಾತ್ರಾಮಹೋತ್ಸವಕ್ಕೆ ಎಲ್ಲಾ ಸಿದ್ದತೆಗಳನ್ನು ನಡೆಸಲಾಗಿದೆ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ  ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವಕ್ಕೆ ಸಕಲ ಸಿದ್ದತೆ ನಡೆಸಲಾಗಿದ್ದು ಸೆ.೧೩ ರಿಂದ ೨೩ ರವರೆಗೆ ಎರಡು ಮಂಗಳವಾರ ಎರಡು ಶುಕ್ರವಾರದೊಂದು ಜಾತ್ರೆ ಅಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಜೇನುಕಲ್ಲಮ್ಮ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಬಿ.ಸ್ವಾಮಿರಾವ್ ತಿಳಿಸಿದರು.  ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪಿತೃಪಕ್ಷದಲ್ಲಿ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ ಸೆಪ್ಟಂಬರ್ ೧೩ ಮತ್ತು ೧೬ ಹಾಗೂ ೨೦ ಮತ್ತು ೨೩ ಮಂಗಳವಾರ ಹಾಗೂ ಶುಕ್ರವಾರದೊಂದು ಈ ಜಾತ್ರಾಮಹೋತ್ಸವ ಜರುಗಲಿದೆ ಸಕಲ ಭಕ್ತಾಧಿಗಳು ಹೆಚ್ಚಿನ…

Read More

ಮಾನಸಿಕ ಖಿನ್ನತೆಗೊಳಗಾಗಿದ್ದ ಹೊಸನಗರ ತಾಲೂಕಿನ ಯುವಕನನ್ನು ಭೇಟಿಯಾದ ಚಿತ್ರನಟ ದರ್ಶನ್ – ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ|DBOSS

ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾಗಿದ್ದ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕನನ್ನು ದರ್ಶನ್ ಇಂದು ಭೇಟಿಯಾಗಿದ್ದಾರೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ ಅಭಿಮಾನವನ್ನಿಟ್ಟು ಕೊಂಡಿರುವ ಸುದೀಪ ದರ್ಶನ್ ರವರನ್ನು ಹಲವು ಬಾರಿ ಭೇಟಿ ಮಾಡಲು ಪ್ರಯತ್ನಿಸಿ ವಿಫಲನಾಗಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನ ಬಗ್ಗೆ ಇತ್ತೀಚಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆ ಕಳೆದ ವಾರ ಯುವಕನನ್ನು ಆತನ ಮನೆಯಲ್ಲಿ ಭೇಟಿ ಮಾಡಿ ಸಂದರ್ಶಿಸಿ ಈ…

Read More

ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ ಪ್ರತಿನಿಧಿಸಿದ ಸಾಗರದ ಯೂತ್ ಫೋರ್ಸ್

Sagara Youth Force Association represented Karnataka at the Republic Day parade on Kartavya Path, New Delhi, showcasing Dollu Kunitha, Pooja Kunitha and Yakshagana. ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಸಾಗರದ ಯೂತ್ ಫೋರ್ಸ್ ಸಂಚಲನ ಸಾಗರ: ಈ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪಥಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ “ಸಾಗರ ಯೂತ್ ಫೋರ್ಸ್ ಅಸೋಸಿಯೇಷನ್” ಗಮನಸೆಳೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯ ಅತಿಥಿಗಳಾದ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (26-03-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 46500 54400 ಸರಕು ಶಿವಮೊಗ್ಗ 77700 82610 ಗೊರಬಲು ಶಿವಮೊಗ್ಗ 26099 31859 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಶಿವಮೊಗ್ಗ 29099 47709

Read More

ಅಪಘಾತ ತಡೆ ಅಭಿಯಾನ – ಕೆಂಚನಾಳದಲ್ಲಿ ರಿಪ್ಪನ್‌ಪೇಟೆ ಪೊಲೀಸರ ಕಾರ್ಯಾಚರಣೆ

ಬೆಳಗ್ಗೆ ಬೆಳಗ್ಗೆ ಇದ್ದಿದ್‌ ತಿಂದ್ಕೊಂಡ್‌ ಕೆಲಸಕ್ಕೆ ಹೋಗೋ ಟೈಂನಲ್ಲಿ ಪೊಲೀಸ್‌ ಜೀಪ್‌ ಸೀದಾ ಊರೊಳಗೆ ಬರ್ತಿದ್ದರೇ, ಎಂತಾಯ್ತೋ ಏನೋ? ಏನ್‌ ಕಥೆಯೋ ಏನೋ? ಇದೆಲ್ಲಿ ಬೇಡದಿರೋ ವ್ಯಾಪಾರ ಅಂತಾ ಅನ್ನಿಸದೇ ಇರದು. ಇಂದು ರಿಪ್ಪನ್‌ ಪೇಟೆ ಪೊಲೀಸರು ಕೆಂಚನಾಳ ಗ್ರಾಮಕ್ಕೆ ಎಂಟ್ರಿ ಕೊಟ್ಟಾಗ ಅಲ್ಲಿದ್ದವರಿಗೂ ಹಾಗೆ ಅನ್ನಿಸಿತ್ತೇನೋ? ಆದರೆ ಪೊಲೀಸರು ಬೇರೆಯದ್ದೆ ಕಾರಣಕ್ಕೆ ಅಲ್ಲಿಗೆ ಹೋಗಿದ್ದರು. ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಇಂದು ಕೆಂಚನಾಳ ಗ್ರಾಪಂ ವ್ಯಾಪ್ತಿಯ ಹಳ್ಳಿ ಹಳ್ಳಿಗಳಿಗೆ ತೆರಳಿ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಗಳಿಗೆ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೂವರಿಗೆ ಡಿಕ್ಕಿಯಾಗಿ ಲೈಟ್​ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತುಂಡಾದ ಲೈಟ್ ಕಂಬ ಕಾರಿನ ಮೇಲೇಯೆ ಬಿದ್ದಿದೆ.  ಸಾಗರ ತಾಲ್ಲೂಕಿನ ಆನಂದಪುರದ ಹೊಸೂರು ಸಮೀಪ ಈ ಘಟನೆ ಸಂಭವಿಸಿದೆ. ಶಿರಸಿ ಕಡೆಗೆ ಹೋಗುವವರು ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸೂರು ಸಮೀಪ ಕಾರು ಅಪ್​ಸೆಟ್ ಆಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು…

Read More

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು , ಐವರ ಸ್ಥಿತಿ ಗಂಭೀರ

  ಆಗುಂಬೆ: ಇಲ್ಲಿನ ಘಾಟಿಯ 9 ನೇ ತಿರುವಿನಲ್ಲಿ ಲಾರಿ ನಿಯಂತ್ರಣ ತಪ್ಪಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಲಾರಿ ಘಾಟಿಯನ್ನು ಇಳಿಯುವಾಗ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಲಾರಿಯೂ ಪ್ರಪಾತಕ್ಕೆ ಮಗುಚಿ ಬಿದ್ದಿದ್ದು, ಮೃತದೇಹಗಳನ್ನು ಮೇಲೆತ್ತಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.  ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ,ಚಿಂತಾಜನಕವಾಗಿದೆ.

Read More

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ  10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೋ ಪ್ರಕರಣ ಸಂಬಂಧ 10 ಕೋಟಿ…

Read More