ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗಿಯಾದ ಗೃಹಸಚಿವ ಆರಗ ಜ್ಞಾನೇಂದ್ರ : ಸಾಂಸ್ಕೃತಿಕ ಉಡುಗೆ ಧರಿಸಿ ಮಿಂಚಿದ ಪೊಲೀಸರು |Thirthahalli
ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ ಹಬ್ಬ ಎಂದು ಭಾವಿಸಿದ್ದೇನೆ. ಯಾಕೆಂದರೆ ಶಿಷ್ಟರ ರಕ್ಷಣೆ ದುಷ್ಟರಿಗೆ ಶಿಕ್ಷೆ ಇದು ಪೊಲೀಸ್ ಇಲಾಖೆಯಿಂದ ನೆಡೆಯುವಂತಹದ್ದು ಈ ಕಾರಣಕ್ಕೆ ಎಲ್ಲಾ ಸಿಬ್ಬಂದಿಗಳಿಗೂ ಆಯುಧ ಪೂಜೆಯ ಶುಭಾಶಯಗಳು ಎಂದು ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ…