ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ…

Read More

ರಿಪ್ಪನ್‌ಪೇಟೆಯ ಯೋಧ ಸಂದೀಪ್ ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದಾಗ ಸಾವು|Rpet

ರಿಪ್ಪನ್‌ಪೇಟೆ : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮಣಿಪುರದ ಅಸ್ಸಾಂ ರೈಫಲ್ಸ್ ನಲ್ಲಿ ಕಾರ್ಯ ನಿರ್ವಹಿಸುತಿದ್ದ ಸಂದೀಪ್ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರಾದ ವಿನೋದಮ್ಮ ರವರ ಪುತ್ರರಾಗಿದ್ದು ಕಳೆದ 2 ವರ್ಷದಿಂದ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಸಂದೀಪ್ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದೆ ಆದರೆ ಬಲ್ಲ ಮೂಲಗಳ ಪ್ರಕಾರ  ಇಂದು ಮುಂಜಾನೆ  ತಾನು ಕರ್ತವ್ಯ ನಿರ್ವಹಿಸುತಿದ್ದ ಪ್ರದೇಶದಲ್ಲಿ…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮಹತ್ಯೆ ತೀರ್ಥಹಳ್ಳಿ : ಸಂಘ ಸಂಸ್ಥೆಯಲ್ಲಿ 2 ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತನೋರ್ವ ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 9ರ ಬುಧವಾರ ರಾತ್ರಿ ನಡೆದಿದೆ. ತಾಲೂಕಿನ ಹೊಸಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಸುಣ್ಣದ ಮನೆಯ ನೇಮ ನಾಯ್ಕ (60) ಮೃಪಟ್ಟವರು. ರೈತ ನೇಮ ನಾಯ್ಕ ಅವರು ಅಡಿಕೆಗೆ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗದಿಂದ ಬೇಸತ್ತು…

Read More

ನವೆಂಬರ 6ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನಜಾಗೃತಿ ಧರ್ಮ ಸಮಾರಂಭ|ದೀಪೋತ್ಸವದ ಅಂಗವಾಗಿ ಭಕ್ತರಿಂದ ಮಠದ ಸ್ವಚ್ಚತಾ ಅಭಿಯಾನ|Malalimatt

ನವೆಂಬರ್ 6 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಳಲಿ‌ಮಠ ಮಹಾಸಂಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭ ನಡೆಯಲಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾ ಸ್ವಾಮಿಜಿಗಳು ತಿಳಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಮಾನವ ಜೀವನದಲ್ಲಿ ಕತ್ತಲೆ ಬೆಳಕಿನಂತೆ ಸುಖ ದುಃಖಗಳು ಶಾಶ್ವತವಲ್ಲ. ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಲು ಆಧ್ಯಾತ್ಮದ ಬೆಳಕು ಮಾನವನಿಗೆ ಅನಿವಾರ್ಯವಾಗುತ್ತದೆ ಎಂದರು. ನವೆಂಬರ್ 06 ಭಾನುವಾರದಂದು ರಂದು ನಡೆಯುವ ಕಾರ್ತೀಕ ದೀಪೋತ್ಸವ ಹಾಗೂ…

Read More

ನಾಳೆ(19-07-2023) ಹೊಸನಗರದಲ್ಲಿ ಪತ್ರಿಕಾ ದಿನಾಚರಣೆ ; ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ

ಹೊಸನಗರ ಪಟ್ಟಣದ ಆರ್ಯ ಈಡಿಗರ ಸಭಾಭವನದಲ್ಲಿ ಜುಲೈ 19 ರಂದು ಬೆಳಿಗ್ಗೆ 11ಗಂಟೆಯಿಂದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ಶಾಖೆಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಕೆ ವೆಂಕಟೇಶ್‌ಮೂರ್ತಿಯವರು ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಉದ್ಘಾಟಿಸಲಿದ್ದು, ಸಮಕಾಲಿನ ಪತ್ರಿಕಾ ಮಾಧ್ಯಮದ ಜವಾಬ್ದಾರಿಗಳು ಎಂಬ ವಿಷಯವಾಗಿ…

Read More

ಶಾಸಕರ ರೌಡಿ ಬೆಂಬಲಿಗರ ವಿರುದ್ದ ಕ್ರಮ ಕೈಗೊಳ್ಳಿ,ಸಾಗರ ಕ್ಷೇತ್ರದ ಮರ್ಯಾದೆ ಉಳಿಸಿ : ಗೋಪಾಲಕೃಷ್ಣ ಬೇಳೂರು

ಸಾಗರದಲ್ಲಿ ಬಿಜೆಪಿ ಪಕ್ಷದ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆ ರವರನ್ನು ಬಂಧಿಸುವಂತೆ ಒತ್ತಾಯಿಸಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು  ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇತ್ತೀಚೆಗೆ ಭೂಮಾಫಿಯ ಹೆಚ್ಚಾಗಿದ್ದು ಆಡಳಿತರೂಢ ಬಿಜೆಪಿ ಪಕ್ಷದ ಮುಖಂಡರುಗಳು ತಮ್ಮ ಶಾಸಕರ ಕುಮ್ಮಕ್ಕಿನಿಂದ ಭೂ ಮಾಫಿಯಾ ದಂಧೆ ಮಾಡುತ್ತಿದ್ದು ಇದರ ಬಗ್ಗೆ ಸಾಮಾನ್ಯ ಜನರು ಪ್ರಶ್ನೆ ಮಾಡಿದಲ್ಲಿ ಅಂಥವರ ಮೇಲೆ ಮಾರಣಾಂತಿಕ ಹಲ್ಲೆ…

Read More

ಐದು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಕಠಿಣ ಶಿಕ್ಷೆ ಪ್ರಕಟ

ತೀರ್ಥಹಳ್ಳಿ : ಐದು ವರ್ಷ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC–II (POCSO) 20 ವರ್ಷ ಕಠಿಣ ಶಿಕ್ಷೆ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. 2020 ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 05 ವರ್ಷದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಗುವೊಂದು ತನ್ನ ಮನೆಯಲ್ಲಿ ಆಟವಾಡುತ್ತಾ ಇದ್ದಾಗ ವೆಂಕಟೇಶ್ ಎಂಬುವವನು ಸದರಿ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿತ್ತು. ಘಟನೆಯ ಬಗ್ಗೆ…

Read More

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್…

Read More

ಬಿಜೆಪಿಯ ಏಜೆಂಟ್ ರೀತಿ ಕಾರ್ಯ ನಿರ್ವಹಿಸುತ್ತಿರುವ ನಾಗೇಶ್ ಡೋಂಗ್ರೆ ಯನ್ನು ಕೂಡಲೇ ವಜಾ ಮಾಡಿ : ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ನಾಗೇಶ್ ಡೋಂಗ್ರೆ ಎಂಬ ಭ್ರಷ್ಟ ಅಧಿಕಾರಿ ಸೇರಿಕೊಂಡಿದ್ದು, ಈತನನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ನಾಗೇಶ್ ಡೋಂಗ್ರೆ ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾನೆ. ಡಿಸಿಸಿ ಬ್ಯಾಂಕ್ ನ ನಿರ್ದೇಶಕರನ್ನು ವಜಾ ಮಾಡಲು ಹೊರಟಿದ್ದಾನೆ. ಹಾಲು ಒಕ್ಕೂಟದ ಚುನಾವಣೆಯಲ್ಲಿ ಮಾಡಲೇ ಇಲ್ಲ. ಈ ಹಿಂದೆ ಈತನ ಮೇಲೆ ಭ್ರಷ್ಟಾಚಾರದ ಆರೋಪ ಕೂಡ ಇದೆ. ಮುಂಬಡ್ತಿ…

Read More

ಭದ್ರಾವತಿ ನಗರಸಭೆ: ಜೆಡಿಎಸ್​​ ಅಭ್ಯರ್ಥಿಗೆ ಭರ್ಜರಿ ಗೆಲುವು, ಠೇವಣಿ ಕಳೆದುಕೊಂಡ ಬಿಜೆಪಿ

ಭದ್ರಾವತಿ : ಇಲ್ಲಿನ ನಗರಸಭೆ 29ನೇ ವಾರ್ಡ್‌ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲ್ ಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 450 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಗೆಲುವಿನಿಂದ ಭದ್ರಾವತಿ ನಗರಸಭೆ ಯಲ್ಲಿ ಜೆಡಿಎಸ್ ಸ್ಥಾನ 12ಕ್ಕೆ ಏರಿಕೆಯಾಗಿದೆ. ಇನ್ನು ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಜೆಡಿಎಸ್​ನ ನಾಗರತ್ನ ಅನಿಲ್‌ ಕುಮಾರ್ 1,282 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನ ಲೋಹಿತಾ ನಂಜಪ್ಪ 832 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ…

Read More