ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರೀನಿವಾಸಚಾರಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಹೊರಗುತ್ತಿಗೆ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಮುಷ್ಕರ

ಹೊಸನಗರ : ಸರ್ಕಾರವೇ ರಚಿಸಿದ ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನ ಹಾಗೂ ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ಹೊಸನಗರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಪ್ಪು ಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವುದರ ಮೂಲಕ ಹೊರಗುತ್ತಿಗೆದಾರರು ಸಾಂಕೇತಿಕವಾಗಿ ಮುಷ್ಕರಕ್ಕೆ ಕರೆ ನೀಡಿದ ಘಟನೆ ಇಂದಿನಿಂದ ನಡೆಯುತ್ತಿದೆ. 2019 -20, 2020-21ರ ಸಮಯದಲ್ಲಿ ಕೋವೀಡ್-19 ವಿರುದ್ಧ ಹೋರಾಟಕ್ಕಾಗಿ ಗುತ್ತಿಗೆ, ಹೊರಗುತ್ತಿಗೆ ನೌಕರರನ್ನು ನಿಯೋಜನೆ ಮಾಡಿಸಿಕೊಂಡ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ…

Read More

ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ್ದಕ್ಕೆ ಪರೀಕ್ಷೆಯನ್ನೆ ಬಹಿಷ್ಕರಿಸಿದ ವಿದ್ಯಾರ್ಥಿಗಳು :

ಶಿವಮೊಗ್ಗದಲ್ಲಿ ತಾರಕಕ್ಕರೇರಿದ ಹಿಜಾಬ್ ವಿವಾದ.ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಹೊರನಡೆದಿದ್ದಾರೆ. ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ  ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು  ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿ ನಿಯರಿಂದ ಪರೀಕ್ಷೆ ಬಹಿಷ್ಕಾರಿಸಿದ್ದಾರೆ. ಅದರಂತೆ ತುಂಗನಗರ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬಳು ಹಿಜಬ್ ತೆಗೆದು ತರಗತಿಯಲ್ಲಿ ಕೂರಲು ಸಾಧ್ಯವಿಲ್ಲವೆಂದು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾಳೆ, ಶಿಕಾರಿಪುರ ಮತ್ತು ಸಾಗರದಲ್ಲಿಯೂ ಇದೇ…

Read More

ಕರ್ತವ್ಯ ವೇಳೆ ಕುಸಿದು ಬಿದ್ದ ಶಿವಮೊಗ್ಗದ ಸ್ಟಾಫ್‌ ನರ್ಸ್‌ ಸಾವು : ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ

ಶಿವಮೊಗ್ಗ : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಸ್ಟಾಫ್‌ ನರ್ಸ್‌ ಟಿ.ಕೆ. ಗಾನವಿ (22) ಅವರ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ. ಗಾನವಿ ಅವರು ಕರ್ತವ್ಯದ ವೇಳೆ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಬೆಂಗಳೂರಿನ ಗ್ಯಾಸ್ಟೊ್ರೕ ಎಂಟರಾಲಜಿ ಸೈನ್ಸಸ್‌ ಆ್ಯಂಡ್‌ ಆರ್ಗನ್‌ ಟ್ರಾನ್ಸ್‌ಪ್ಲಾಂಟ್‌ ಸಂಸ್ಥೆಗೆ ಕರೆತರಲಾಯಿತು. ಈ ವೇಳೆ ವೈದ್ಯರು ಮಿದುಳು ನಿಷ್ಕ್ರಿಯವಾಗಿರುವುದಾಗಿ ತಿಳಿಸಿದರು. ಇದರಿಂದ ಪೋಷಕರು ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತಾಯಿ ಮತ್ತು ಅಕ್ಕ ಅಂಗಾಂಗ ದಾನಕ್ಕೆ ಸಹಿ ಮಾಡುವ ಮೂಲಕ ಹಲವರಿಗೆ…

Read More

ಪ್ರತಾಪ್ ಸಿಂಹ ಬೇಕಾದರೆ ಪಾಕಿಸ್ತಾನಕ್ಕೆ ಹೋಗಲಿ : ಕಿಮ್ಮನೆ ರತ್ನಾಕರ್ ವಾಗ್ದಾಳಿ

ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಮಾತೆತ್ತಿದರೆ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ನೀವೇ ಯಾಕೆ ಪಾಕಿಸ್ತಾನಕ್ಕೆ ಹೋಗಬಾರದು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು. ಅವರು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ಹಿನ್ನಲೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಿಜೆಪಿ ವಿರುದ್ಧ ಕಿಡಿಕಾರಿದರು. ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಬಿಜೆಪಿ ನಡೆದುಕೊಳ್ಳುತ್ತಿರುವ ವಿಚಾರ ಈಗ ಅಂತರಾಷ್ಟ್ರದ ಮಟ್ಟಕ್ಕೆ ಹೋಗಿ ತಲುಪಿದೆ. ಜನರಿಗೆ ಕಾರ್ಯಕ್ರಮ ಕೊಟ್ಟು ಆ ಆಧಾರದ ಮೇಲೆ…

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹಾಲಪ್ಪ ಹಣ ಪಡೆದಿದ್ದಾರೆ ಎಂದು ಧರ್ಮಸ್ಥಳದ ಸನ್ನಿಧಿಯಲ್ಲಿ ಪ್ರಮಾಣ ಮಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ !!!

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಶಾಸಕ ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಹಣ ಪಡೆದಿರುವುದು ಖಂಡಿತವಾಗಿಯೂ ನಿಜ ಎಂದು ಆಣೆ ಪ್ರಮಾಣ ಮಾಡಿದರು. ಲಾರಿಯವರು ನನಗೆ ಕರೆ ಮಾಡಿ ಹಣವನ್ನು ನೀಡಿದ್ದೇವೆಂದು ಹೇಳಿದ್ದಾರೆ.ಇವರು 300  ಮರಳು ಲಾರಿ ಮಾಲೀಕರಿಂದ ಹಣ ಪಡೆದಿದ್ದಾರೆ. ಮರಳು ನೀತಿಯನ್ನು ಸಡಿಲೀಕರಣ ಮಾಡುವುದಕ್ಕೆ ನಿಮಗೆ ಏನು ರೋಗ ಎಂದು ಹರಿಹಾಯ್ದರು. ಕೋರೆ ಮಾಲೀಕರ ಹತ್ತಿರವೂ ಕೂಡ ಮಾಮೂಲಿ ಪಡೆಯುತ್ತಿದ್ದು ನನಗೆ ವರ್ಷಕ್ಕೆ ಇಂತಿಷ್ಟು ಹಣವನ್ನು…

Read More

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಾಸಕ ಹರತಾಳು ಹಾಲಪ್ಪ !!!

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಾಸಕ ಹರತಾಳು ಹಾಲಪ್ಪ ಸಾಗರ ಹಾಗೂ ಹೊಸನಗರ  ಕ್ಷೇತ್ರದ ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಕಮಿಶನ್ ಪಡೆದಿದ್ದಾರೆಂದು ಆರೋಪ ಮಾಡಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ತಾವು ಆಣೆ ಮಾಡಬೇಕು ಹಣವನ್ನು ಪಡೆದಿಲ್ಲವೆಂದು ಎಂದು ಸವಾಲು ಎಸೆದಿದ್ದರು. ಇದರ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ಹರತಾಳು ಹಾಲಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿಯಲ್ಲಿ ನಾವು ಯಾವುದೇ  ಮರಳು ಲಾರಿ ಮಾಲೀಕರಿಂದ ಕಮೀಷನ್ ಹಾಗೂ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಿದ್ದಾರೆ. ಬೇಳೂರು ಮಾಡಿರುವ ಆರೋಪಗಳು…

Read More

ಫೆ. 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ :

ಸಮವಸ್ತ್ರ ವಿವಾದದ ಹಿನ್ನೆಲೆ ರಾಜ್ಯದ ಎಲ್ಲಾ ಪಿಯುಸಿ, ಪದವಿ, ಪಿಜಿ  ತರಗತಿಗಳಿಗೆ ಫೆ.16 ವರೆಗೆ ರಜೆ ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ  ಹೊರಡಿಸಿದೆ. ಹೌದು, ರಾಜ್ಯದ ಸಮವಸ್ತ್ರ ವಿವಾದ ಭುಗಿಲೆದ್ದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ತರಗತಿಗಳನ್ನು ಫೆ.16 ವರೆಗೆ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ…

Read More

ಪುರಾಣ ಪ್ರಸಿದ್ದ ಕೆರೆಹಳ್ಳಿಯ ಶ್ರೀರಾಮೇಶ್ವರ ದೇವರ ಪುನರ್ ಪ್ರತಿಷ್ಠಾಪನೆ

ರಿಪ್ಪನ್‌ಪೇಟೆ: ಪುರಾಣಪ್ರಸಿದ್ಧ ಕೆರೆಹಳ್ಳಿಯ ಶ್ರೀರಾಮೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ, ನೂತನ ದೇವಸ್ಥಾನದ ಕಟ್ಟಡದಲ್ಲಿ ಫೆ. 13 ರ ಭಾನುವಾರ ನೆರವೇರಲಿದೆ. ಪುರಾಣಕಾಲದ ಐತಿಹ್ಯವನ್ನು ಹೊಂದಿರುವ ದೇವರನ್ನು ಸೀತಾರಾಮರು ವನವಾಸ ಕಾಲದ ಸಂದರ್ಭದಲ್ಲಿ ಶಿವನ ಆರಾಧನೆಗಾಗಿ ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರೆಂಬ ಪ್ರತೀತಿ ಇಲ್ಲಿನ ಜನರಲ್ಲಿ ಪ್ರಚಲಿತದಲ್ಲಿದೆ.  ಪ್ರಾಚೀನಕಾಲದ ಶಿಥಿಲಾವಸ್ಥೆಗೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಿ ಶಿವನ ಲಿಂಗವನ್ನು ವಿಸರ್ಜಿಸಲಾಗಿತ್ತು. ಭಕ್ತರ ಅಭಿಲಾಷೆಯಂತೆ ದಾನಿಗಳ ಸಹಾಯದಿಂದ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನೂತನ ದೇವಾಲಯ ರೂಪುಗೊಂಡಿದ್ದು, ಸುಸಜ್ಜಿತ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ…

Read More

ಶಾಸಕ ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಕೆಂಡಾಮಂಡಲ : ನಾಳೆಯೇ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ದ

ಕಳೆದ ಹದಿನೈದು ದಿನಗಳಿಂದ ಸಾಗರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ಆಣೆ ಪ್ರಮಾಣದ ಜಟಾಪಟಿ ಕೊನೆಯ ಹಂತ ತಲುಪಿದ್ದು ನಾಳೆ ಧರ್ಮಸ್ಥಳದಲ್ಲಿ ಅಂತಿಮವಾಗಬಹುದೇ ? ಇಂದು ಸಾಗರದಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಪತ್ರೀಕಾ ಹೇಳಿಕೆ ನೀಡಿದ್ದಾರೆ. ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಹೇಳಿದ್ದಾದರು ಏನು?? ಶಾಸಕ ಹಾಲಪ್ಪನವರೆ ಏನ್ ಹೇಳಿದ್ರಿ ನಾನು ಪಲಾಯನವಾದಿ ಅಂತಾನ??  ಹೇಳೋಕೆ ಮೊದಲು ಯೋಚನೆ ಮಾಡಿ ಧರ್ಮಸ್ಥಳದ ಆಣೆಪ್ರಮಾಣಕ್ಕೆ ನೀವು ಮೋದಲು…

Read More

ಸಾಗರದಲ್ಲಿ ಪ್ರತಿಭಟನಾ ನಿರತ “ಬ್ಯಾಂಕ್ ಮಿತ್ರ” ಉದ್ಯೋಗಿ ಆತ್ಮಹತ್ಯೆಗೆ ಯತ್ನ : ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬ್ಯಾಂಕ್ ಮಿತ್ರ ಉದ್ಯೋಗಿಗಳ ಪ್ರತಿಭಟನೆ

ಸಾಗರ ತಾಲ್ಲೂಕಿನ ಕೆಳದಿಯಲ್ಲಿ ಬ್ಯಾಂಕ್ ಮಿತ್ರರ ಸಂಘ ಮತ್ತು ಮಾನವ ಹಕ್ಕುಗಳ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ದೀವರ ಯುವ ವೇದಿಕೆ ಸಹಯೋಗದೊಂದಿಗೆ ಕೆಳದಿ ಕೆನರಾ ಬ್ಯಾಂಕ್ ನಿಂದ ಬ್ಯಾಂಕ್ ಮಿತ್ರರನ್ನು ವಜಾಗೊಳಿಸಿರುವ ನೀತಿ ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಪ್ರತಿಭಟನಾ ನಿರತ ಬ್ಯಾಂಕ್ ಮಿತ್ರ ಉದ್ಯೋಗಿ ಶಕುಂತಲಾ ಎಂಬುವವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಕೂಡಲೇ ಸಹೋದ್ಯೋಗಿಗಳು ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು,ಈಗ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ…

Read More