Headlines

ಬಟ್ಟೆಮಲ್ಲಪ್ಪ ಸರ್ಕಲ್ ಗೆ ಬಂಗಾರಪ್ಪ ಸರ್ಕಲ್ ಎಂದು ನಾಮಕರಣ – ರಿಪ್ಪನ್‌ಪೇಟೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಆಟೊಗಳಿಗೆ ಉಚಿತ ಟಾಪ್ ವಿತರಣೆ|AAP

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಸರ್ಕಲ್ ಗೆ ನೂತನವಾಗಿ ಬಂಗಾರಪ್ಪ ಸರ್ಕಲ್ ಎಂದು ಅಧಿಕೃತವಾಗಿ ನಾಮಕರಣ ಮಾಡಲಾಯಿತು. ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಘಟಕದ ವತಿಯಿಂದ ನೂತನ ಬಂಗಾರಪ್ಪ ಸರ್ಕಲ್ ಉದ್ಘಾಟಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣೇಶ್ ಸೂಗೋಡು ಈ ದೇಶ ಕಂಡ ಅತ್ಯುತ್ತಮ ಮುಖ್ಯಮಂತ್ರಿ ಹಾಗೂ ಬಡವರ ಪಾಲಿನ ಆಶಾಕಿರಣವಾಗಿದ್ದ ದಿ|| ಬಂಗಾರಪ್ಪ ರವರ ಹೆಸರನ್ನು ಬಟ್ಟೆಮಲ್ಲಪ್ಪ ಸರ್ಕಲ್ ಗೆ ನಾಮಕರಣ ಮಾಡುವ ಮೂಲಕ…

Read More

ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು : ಹರತಾಳು ಹಾಲಪ್ಪ – ಗಣೇಶೋತ್ಸವದಲ್ಲಿ ಇರುವ ಐಕ್ಯತೆ ಕನ್ನಡ ಹಬ್ಬದಲ್ಲಿ ಯಾಕಿಲ್ಲ – ಕೆ ಎಸ್ ಪ್ರಶಾಂತ್|Ripponpet

ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಇಂದು ಪಟ್ಟಣದ ಭೂಫಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ಕನ್ನಡಿಗರು ನಾಡು…

Read More

ಚಾಲಕನ ನಿಯಂತ್ರಣ ತಪ್ಪಿ ಶರಾವತಿ ಹಿನ್ನೀರಿಗೆ ಇಳಿದ ಬಸ್ – ತಪ್ಪಿದ ಭಾರಿ ಅನಾಹುತ|sigandur

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಹೊಳೆಬಾಗಿಲು ಸಮೀಪ ಶರಾವತಿ  ಹಿನ್ನೀರಿನಲ್ಲಿ ಹಿಂದಕ್ಕೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿದ ಬಸ್ ನೀರಿಗೆ ಜಾರಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಹೊಳಬಾಗಿಲಿನಲ್ಲಿ ಇಂದು ಘಟನೆ ನಡೆದಿದ್ದು, ಗಜಾನನ ಬಸ್ ರಿವರ್ಸ್ ಸಾಗರದಿಂದ ಕಟ್ಟಿನಕಾರುಗೆ ತೆರಳುತ್ತಿತ್ತು. ಲಾಂಚ್ ನಿಲ್ಲಿಸುವ ಸ್ಥಳದಲ್ಲಿ ರಿವರ್ಸ್ ತೆಗೆದುಕೊಳ್ಳುವ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ನೀರಿಗೆ ಇಳಿದಿದೆ. ಇದರಿಂದ ಬಸ್’ನಲ್ಲಿದ್ದ ಜನರು ಕೂಗಿಕೊಂಡಿದ್ದರಿಂದ ಎಚ್ಚೆತ್ತ ಚಾಲಕ ಮೇಲಕ್ಕೆ ಚಲಿಸಲು ಯತ್ನಿಸಿದ್ದಾನೆ. ತತಕ್ಷಣವೇ ಎಚ್ಚೆತ್ತ ಸ್ಥಳೀಯರೂ ಸೇತುವೆ ಕಾಮಗಾರಿಗಾಗಿ…

Read More

ಕಾಡುಕೋಣಗಳ ದಾಳಿಗೆ ಕೈಗೆ ಬಂದ ಫಸಲು ಪ್ರಾಣಿಗಳ ಪಾಲು – ರೈತರ ಆಂತಕ|wild corner

ರಿಪ್ಪನ್‌ಪೇಟೆ : ಆರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ದಿಡೀರ್ ಪ್ರತ್ಯಕ್ಷವಾದ ಕಾಡುಕೋಣಗಳಿಂದಾಗಿ ರೈತರ ಭತ್ತದ ಗದ್ದೆ ಮತ್ತು ಅಡಿಕೆ ಬಾಳೆ ಕಾಡುಪ್ರಾಣಿಗಳ ಪಾಲಾಗುವಂತಾಗಿದ್ದು ರೈತರು ಅಂತಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ನಾಟಿ ಮಾಡಲಾದ ಭತ್ತದ ಫಸಲು ಕಟಾವಿಗೆ ಬಂದಿದ್ದು ರಾತ್ರಿ ಹೊತ್ತಿನಲ್ಲಿ ಕಾಡುಕೋಣ ಜಮೀನಿಗೆ ನುಗ್ಗಿ ಕಟಾವು ಮಾಡಲಾದ ಭತ್ತ ಭೂಮಿ ತಾಯಿಯ ಪಾಲಾಗುವಂತಾಗಿದೆ.ಅಲ್ಲದೆ ಆಡಿಕೆ ಗಿಡಗಳನ್ನು ಮುರಿದು ಹಾಕಿ ಬಾಳೆ ಸಹ ಕೈಗೆ ಸೀಗದಂತಾಗಿ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಇAದು…

Read More

ರೈಲು ಹರಿದು ವ್ಯಕ್ತಿಯ ಕಾಲು ಮುರಿತ – ಗಾಯಾಳು ಮೆಗ್ಗಾನ್ ಗೆ ದಾಖಲು|TRAIN

ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ಬಳಿಯ ಸವಳಂಗ ರಸ್ತೆ ರೈಲ್ವೆಗೇಟ್ ಬಳಿ ವ್ಯಕ್ತಿಯೋರ್ವನ ಮೇಲೆ ರೈಲು ಹರಿದು ಕಾಲು ತುಂಡಾಗಿರುವ ಘಟನೆ ರಾತ್ರಿ ನಡೆದಿದೆ. ರೈಲ್ವೆ ಓವರ್ ಬ್ರಿಡ್ಜ್ ಕಾಮಗಾರಿ ನಡೆಸುತ್ತಿದ್ದ ಸದ್ಪತಿ ಪಂಜಿ ಎಂಬ ಸುಮಾರು 30 ವರ್ಷದ ವ್ಯಕ್ತಿಯ ಮೇಲೆ ತಾಳಗುಪ್ಪ-ಬೆಂಗಳೂರು(1628) ರೈಲು ಹರಿದುಹೋಗಿದೆ. ಸ್ಥಳೀಯರ ಪ್ರಕಾರ ಆತ ಕುಡಿದು ರೈಲ್ವೆ ಟ್ರ್ಯಾಕ್ ಬಳಿ ಮಲಗಿದ್ದ ಕಾರಣ ವ್ಯಕ್ತಿಯ ಕಾಲಿನ ಮೇಲೆ ರೈಲು ಹರಿದಿದೆ ಎಂದು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಮಾಹಿತಿ…

Read More

ಆತ್ಮೀಯ ಎಸ್ ಪಿ ಸರ್…. ನನಗೆ ಮದುವೆಯಾಗಲು ಹುಡುಗಿ ಹುಡುಕಿಕೊಡಿ – ಯುವಕನೊಬ್ಬ ಶಿವಮೊಗ್ಗದ ಎಸ್ ಪಿ ಗೆ ಬರೆದ ಪತ್ರ ವೈರಲ್|SP

ಜೀವನದಲ್ಲಿ ಮದುವೆ ಎನ್ನುವುದು ಒಂದು ಅತ್ಯಮೂಲ್ಯ ಘಟ್ಟ,ಸಾಮಾನ್ಯವಾಗಿ ವಧು ಬೇಕಾದರೆ ಮದುವೆ ಬ್ರೋಕರ್ ಬಳಿಯೋ, ಶಾದಿ ಡಾಟ್ ಕಾಂ  ಅಥವಾ ಮಾಧ್ಯಮಗಳಲ್ಲಿ ಜಾಹೀರಾತು ಕೊಡಬಹುದು,ಇನ್ನೂ ಮುಂದುವರೆದು ವಧೂವರರ ಸಮಾವೇಶಗಳಿಗೆ ಹೋಗಬಹುದು. ಆದರೆ ಇಲ್ಲೊಬ್ಬ ಭೂಪ ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿ(SP)ಗೆ ಪತ್ರವನ್ನು ಬರೆದು ವಧು ಹುಡುಕಿ ಕೊಡಿ ಎಂದು ಮನವಿ ಮಾಡಿದ್ದಾರೆ. ಅದೂ ಗೊಲ್ಲ ಜಾತಿಯ ಹುಡುಗಿಯೇ ಬೇಕೆಂದು ಕೂಡ ಕಂಡಿಷನ್‌ ಕೂಡ ಹಾಕಿದ್ದಾನೆ. ನ.10 ರಂದು ಭದ್ರಾವತಿ ನಿವಾಸಿ ಪ್ರವೀಣ್ ಎಂಬಾತ ಎಸ್ಪಿ ಕಚೇರಿಯ ಟಪಾಲ್ ಸೆಕ್ಷನ್…

Read More

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ಕು.ಶ್ರೇಯಾ ಮತ್ತು ಕು.ಶ್ರಾವ್ಯ|Kabbadi

ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹೆಚ್ ಓ ರವರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 22 ರ ಮಂಗಳವಾರ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮುಂದಿನ ತಿಂಗಳು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ…

Read More

ಬಹುದಿನಗಳ ಬೇಡಿಕೆಯ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹರತಾಳು ಹಾಲಪ್ಪ|kenchanala

ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ಮತ್ತು ಮಾಣಿಕೆರೆ ಮಸರೂರು ಸಂಪರ್ಕದ 60 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಹರತಾಳು ಚಾಲನೆ ನೀಡಿದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿ, ಹಳ್ಳಿ ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ದಿ ಸಾಧ್ಯವಾಗಿದ್ದು ಮೊದಲ ಆಧ್ಯತೆಯಾಗಿ ಗ್ರಾಮಗಳ ಅಭಿವೃದ್ದಿಗೆ ರಾಜ್ಯ ಮತ್ತು ಕೇಂದ್ರ ಸರ್ಕರ ಹೆಚ್ಚು ಒತ್ತು ನೀಡಿವೆ. ಬಹುದಿನಗಳ ಬೇಡಿಕೆಯನ್ನಾದರಿಸಿ ಅಧ್ಯತೆಯ ಮೇಲೆ ಕ್ಷೇತ್ರದ ಕೆರೆಹಳ್ಳಿ ಹೋಬಳಿಯ ಮಸರೂರು, ಮಾಣಿಕೆರೆ ಮತ್ತು ಹೊನ್ನಕೊಪ್ಪ, ಕೆಂಚನಾಲ…

Read More

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ವಶಕ್ಕೆ|Sand mafia

ರಿಪ್ಪನ್‌ಪೇಟೆ : ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಗುರುವಾರ ರಾತ್ರಿ ಪಟ್ಟಣದ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಗುರುವಾರ ರಾತ್ರಿ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ  ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಜಂಬಳ್ಳಿ ಮೂಗೂಡ್ತಿ ಮಾರ್ಗವಾಗಿ ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಳಲೆ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಎತ್ತಿನಗಾಡಿ|Ripponpet

ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ  ಆಯೋಜಿಸಿದ್ದ   67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮ ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಹಾಗೂ ಜಟಕಾ ಬಂಡಿ ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ರಾಮಚಂದ್ರ (ಗ್ಯಾರೇಜ್ ರಾಮು) ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಚಾಲನೆ ನೀಡಿದರು.ಈ ಮೆರವಣಿಗೆಯಲ್ಲಿ…

Read More