Headlines

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!!

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಒಂಬತ್ತು ಮಂದಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆ ಮೇಲೆ ದಿಡೀರ್ ದಾಳಿ ನಡೆಸಿ ರಿಪ್ಪನ್‌ಪೇಟೆ ಪೊಲೀಸರು ಜೂಜುಕೋರರ ಹೆಡೆಮುರಿ ಕಟ್ಟಿದ್ದಾರೆ. ಪಟ್ಟಣದ ಸಮೀಪದ ಹೆಗ್ಗೆರೆ…

Read More

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ!

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ಖರೀದಿಸಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೆ ಎಲ್ ರಾಹುಲ್ ಅವರನ್ನು ಕೈಬಿಟ್ಟ ಆರ್‌ಸಿಬಿ, ಇಂಗ್ಲೆಂಡ್ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಇಂಗ್ಲೆಂಡ್ ಮೂಲದ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪೈಪೋಟಿ ನಡೆಸಿತಾದರೂ…

Read More

ರಿಪ್ಪನ್‌ಪೇಟೆ ಮೂಲದ ಟೆಂಪಲ್ ಆಫ್ ಸಕ್ಸಸ್ ನ ಶ್ರೀ ರಘುನಾಥ್ ಗುರೂಜಿ ಇನ್ನಿಲ್ಲ : ರಾಷ್ಟ್ರದ ಪ್ರಮುಖ ಗುರೂಜಿಗಳಲ್ಲಿ ಒಬ್ಬರಾಗಿದ್ದರು.

ರಿಪ್ಪನ್‌ಪೇಟೆ : ಟೆಂಪಲ್ ಆಫ್ ಸಕ್ಸಸ್ ನ ಸಾಯಿದತ್ತ ರಘುನಾಥ್ ಗುರೂಜಿಯವರು ಬೆಂಗಳೂರಿನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ. ತೀವ್ರ ಅಸೌಖ್ಯ ಗೊಂಡಿದ್ದ ರಘುನಾಥ್ ಗುರೂಜಿ ಅವರು ಬೆಂಗಳೂರಿನ ಜಯನಗರದಲ್ಲಿರುವ ಅಪೋಲೋ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರೂಜಿಯವರು ಅಪಾರ ಭಕ್ತವೃಂದವನ್ನು ಹೊಂದಿದ್ದಾರೆ. ನಿನ್ನೆ (30th August 2022) ವಿಧಿವಶರಾದ ರಘುನಾಥ್ ಗುರೂಜಿ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 2 ರಂದು ಮಣಿಪಾಲದಲ್ಲಿ ನಡೆಯಲಿದೆ. ಅನುಯಾಯಿಗಳು ಬೆಂಗಳೂರು ಬಸವನಗುಡಿಯ ವಾಣಿ ನಿಲಾಸ ರಸ್ತೆಯಲ್ಲಿರುವ ಟೆಂಪಲ್ ಆಫ್ ಸಕ್ಸಸ್…

Read More

ಹುಂಚಾ : ಶೆಟ್ಟಿಬೈಲ್ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಾಣಾಂತಿಕ ಹಲ್ಲೆ :

ಹುಂಚಾ: ಕ್ಷುಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಇತ್ತೀಚೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹುಂಚಾ ಗ್ರಾಮದ ಶೆಟ್ಟಿಬೈಲ್ ನಲ್ಲಿ ನಡೆದಿದೆ. ಶೆಟ್ಟಿಬೈಲ್ ನಿವಾಸಿ ಲಿಂಗಾರ್ಜುನ ಗೌಡ (49) ಮತ್ತು ಮಲ್ಲಿಕಾರ್ಜುನ (45) ಹಲ್ಲೆಗೊಳಾಗದ ವ್ಯಕ್ತಿಗಳಾಗಿದ್ದು, ಅದೇ ಗ್ರಾಮದ ನಿವಾಸಿಗಳಾದ ಯೋಮಕೇಶ, ನಾಗಾರ್ಜುನ, ಪರಮೇಶಪ್ಪ, ಅವಿನಾಶ್,ಚರಣ್ ಎಂಬುವವರು ಕತ್ತಿ ಮತ್ತು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಶೆಟ್ಟಿಬೈಲ್ ನ  ಊರೊಟ್ಟಿನ ಜಾಗದಲ್ಲಿ ರಕ್ತದ ಮಡುವಿನಿನಲ್ಲಿ ಬಿದ್ದಿದ್ದ ಲಿಂಗಾರ್ಜುನ ಹಾಗೂ ಮಲ್ಲಿಕಾರ್ಜುನ ರನ್ನು ಗ್ರಾಮಸ್ಥರು…

Read More

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News ಶಿವಮೊಗ್ಗ : ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗಾಡಿಕೊಪ್ಪದ ಮೋಹನ್ (29) ಹಾಗೂ ಗೋಪಾಳದ ಮಿಥುನ್ (19)  ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್…

Read More

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ

ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ ರಿಪ್ಪನ್ ಪೇಟೆ : ಕಾಂತರಾಜ್ ಆಯೋಗದ ಅವೈಜ್ಞಾನಿಕ ಜಾತಿಗಣತಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ್ ಅಧ್ಯಕ್ಷ ಅಧ್ಯಕ್ಷ ಉಮೇಶ್ ಮಸರೂರು ಹೇಳಿದರು. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಮಾಧ್ಯಮಗಳಲ್ಲಿ ಬರುತ್ತಿರುವ ಜಾತಿಗಣತಿ ಸುದ್ದಿಯಂತೆ ನಮ್ಮ ಸಮುದಾಯದ ಸಂಖ್ಯೆಯನ್ನು ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎಂದು ತೋರಿಸಲಾಗುತ್ತಿದೆ. ಆದರೆ ಇವೆರೆಡು ಒಂದೇಯಾಗಿವೆ. ಮಾಧ್ಯಮಗಳಲ್ಲಿ…

Read More

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ

ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ ತೀರ್ಥಹಳ್ಳಿ: ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ಬರುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ನಲ್ಲೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಬಸ್ ನಲ್ಲಿ ಆಗಮಿಸುತ್ತಿದ್ದ ಕೊಪ್ಪದ ಹರೀಶ್ ಬಳ್ಳಾಲ್ ಎನ್ನುವವರಿಗೆ ತೀವ್ರ ಹೃದಯಘಾತ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಬಸ್ ಡ್ರೈವರ್ ಪ್ರಾಥಮಿಕ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಹರೀಶ್ ಪ್ರಾಣ ಬಿಟ್ಟಿದ್ದಾರೆ. ಆಗುಂಬೆ ವೈದ್ಯಾಧಿಕಾರಿಯಾದ ಅನಿಕೇತನ್ ಪರೀಕ್ಷಿಸಿ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ….

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ : ಅನೈತಿಕ ಸಂಬಂಧ ಬಯಲಾಗುವ ಭಯಕ್ಕೆ ಸ್ನೇಹಿತನನ್ನೆ ಕೊಲೆ ಮಾಡಿ ಹೊಳೆಗೆ ಬಿಸಾಡಿದ !!!!!!!!!

ಜಮೀನು ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡು ಕೊಲೆ ಪ್ರಕರಣವಾಗಿರುವ ಘಟನೆ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಏ.11 ರಂದು ಮನ್ಮನೆ ನಿವಾಸಿ ಲೇಖಪ್ಪ(36) ಜಮೀನು ಕೆಲಸಕ್ಕೆಂದು ಹೋದವನು ಮನೆಗೆ ವಾಪಾಸ್ ಬಾರದ ಹಿನ್ನಲೆಯಲ್ಲಿ ಏ.14ರಂದು ಸೊರಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೊಂದು ದಾಖಲಾಗಿತ್ತು. ಇಂದು ಕಡಸೂರು ಗ್ರಾಮದ ಹೊಳೆಯ ಸಮೀಪ ಲೇಖಪ್ಪನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಲೇಖಪ್ಪನ ಸಹೋದರ ಗ್ರಾಮದಲ್ಲಿ ರಾಜಕೀಯ ವಿಚಾರವಾಗಿ ದ್ವೇಷ…

Read More

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

Read More