Headlines

ಭಾವೈಕ್ಯತೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಜೋಸೆಫ್ ಅರಮಚ್ಚಾಡತ್ | ರಿಪ್ಪನ್‌ಪೇಟೆ ನವೀಕೃತ ಗುಡ್‌ಶಫರ್ಡ್ ಚರ್ಚ್ ಲೋಕಾರ್ಪಣೆ|Ripponpet

ರಿಪ್ಪನ್ ಪೇಟೆ: ಪ್ರತಿಯೊಂದು ಧರ್ಮದ ಮೂಲ ಸಾರ ಮನುಕುಲದ ಒಳಿತು. ಜಗತ್ತಿಗೆ ಶಾಂತಿ ಸಂದೇಶವನ್ನು ನೀಡಿದ ಪ್ರಭು ಯೇಸುಕ್ರಿಸ್ತರು ಕರುಣೆ ಪ್ರೀತಿ  ಮತ್ತು ದೇವರ ಮೇಲಿನ ನಂಬಿಕೆಯಿಂದ ಮಾತ್ರ ನೆಮ್ಮದಿಯ ಜೀವನವನ್ನು ಸಾಗಿಸಬಹುದು ಎಂದು ಶುಭ ಸಂದೇಶವನ್ನು ನೀಡಿದ್ದಾರೆ.ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಬೆರೆತು ಎಲ್ಲರೂ ಸಹೋದರ ಸಹೋದರಿಯಂತೆ  ಇದ್ದಾಗ ಮಾತ್ರ ನೆಮ್ಮದಿಯ ಸಮಾಜಕ್ಕೆ ದಾರಿದೀಪವಾಗಲಿದೆ ಎಂದು ಭದ್ರಾವತಿ ಧರ್ಮ ಕ್ಷೇತ್ರದ ಧರ್ಮಧ್ಯಕ್ಷ ಜೋಸೆಫ್ ಅರಮಚ್ಚಾಡತ್  ಹೇಳಿದರು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ನವೀಕರಣಗೊಂಡ  ಗುಡ್‌ಶಫರ್ಡ್…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ|Ripponpet

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಇಲ್ಲಿನ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಗೋವುಯನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ ರಿಪ್ಪನ್‌ಪೇಟೆಯ ಸಮೀಪದ…

Read More

ಖಾಸಗಿ ಆಸ್ಪತೆ ಉದ್ಯೋಗಿ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಜಬಿ ಕಾಲಿಗೆ ಗುಂಡೇಟು|Shivamogga

ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ.  ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ.  ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು…

Read More

ತೀರ್ಥಹಳ್ಳಿ : ಪ್ಲೈವುಡ್ ಕಟ್ ಮಾಡುವಾಗ ಮಿಷಿನ್ ನ ಬ್ಲೇಡ್ ಹರಿದು ಕಾರ್ಮಿಕ ಸಾವು|Maaluru

ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ಲೇವುಡ್ ಕೆಲಸಕ್ಕೆ ಬಂದಿದ್ದ ಕಾರ್ಮಿಕನೊಬ್ಬ ಅಚಾನಕ್ಕಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡಾಸ್ ಕೊಪ್ಪ ಗ್ರಾಮದ ಆದಿತ್ಯ ಎಂಬುವವನೊಬ್ಬ ಪ್ಲೇವುಡ್ ವರ್ಕ್ ಗಾಗಿ ತೆರಳಿದ್ದರು. ಪ್ಲೈವುಡ್ ಕಟ್ ಮಾಡುವ ವೇಳೆ ಮಿಷಿನ್ ನ ಬ್ಲೇಡು ಅಚಾನಕ್ಕಾಗಿ ಆದಿತ್ಯನ ಕುತ್ತಿಗೆಯನ್ನ ಕೊಯ್ದಿದೆ.ಗಾಯಾಳುವನ್ನು ತಕ್ಷಣ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸುವಾಗ ಆದಿತ್ಯ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ…

Read More

ಶಿವಮೊಗ್ಗದ ಹಲ್ಲೆ ಪ್ರಕರಣ – ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು|Shivamogga

ಶಿವಮೊಗ್ಗ : ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಉಳಿದವರ ವಿಚಾರಣೆ ಮುಂದುವರೆದಿದೆ. ಪ್ರಕಾಶ್ ಎಂಬುವವನ ಮೇಲೆ ಹಲ್ಲೆ ಮತ್ತು ಸೀಗೆಹಟ್ಟಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸರು ಮಾರ್ಕೆಟ್ ಫೌಜನ್(22), ಅಜರ್ ಯಾನೆ ಅಜ್ಜು(24) ಹಾಗೂ ಫರಾಜ್ (21) ಎಂಬುವರನ್ನ  ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಮೂವರು ಪ್ರಕಾಶ್ ಹಲ್ಲೆಗೆ…

Read More

ಶಾಂತಿ ಸಹಬಾಳ್ವೆಯೇ ಕ್ರಿಶ್ಚಿಯನ್ ಧರ್ಮದ ಮೂಲ ಮಂತ್ರವಾಗಿದೆ : ಆರಗ ಜ್ಞಾನೇಂದ್ರ|church-ripponpet

ರಿಪ್ಪನ್‌ಪೇಟೆ : ಕ್ರಿಶ್ಚಿಯನ್ ಸಮುದಾಯದವರು ಸದಾ ಶಾಂತಿ ಸಹಬಾಳ್ವೆಯೊಂದಿಗೆ ಅರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸರ್ವಧರ್ಮೀಯರಲ್ಲಿ ಸಮಾನತೆ ಸಹೋದರತ್ವವನ್ನು ಕಾಣುವುದರೊಂದಿಗೆ ತಮ್ಮ ಧರ್ಮದ ಸಂಘಟನೆಯನ್ನು ಬೆಳೆಸಿಕೊಂಡವರು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೆಂದ್ರ ಹೇಳಿದರು. ರಿಪ್ಪನ್‌ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನವೀಕರಣಗೊಂಡು ನಾಳೆ ಲೋಕಾರ್ಪಣೆಗೊಳ್ಳಲಿರುವ ಗುಡ್‌ಶಫರ್ಡ್ ಚರ್ಚ್ ಗೆ ಭೇಟಿ ನೀಡಿ ಧರ್ಮಗುರುಗಳು ಹಾಗೂ ಕ್ರೈಸ್ತ ಬಾಂಧವರ ಜೊತೆ ಸಮಾಲೋಚನೆ ನಡೆಸಿ ಮಾತನಾಡಿ ಕ್ರಿಶ್ಚಿಯನ್ ಸಮುದಾಯ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ…

Read More

ಶಿವಮೊಗ್ಗ ಮತ್ತೆ ಉದ್ವಿಗ್ನ | ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ : ಕಲ್ಲು ತೂರಾಟ|Shivamogga

ಶಿವಮೊಗ್ಗ: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಸೀಗೆಹಟ್ಟಿ ಬಳಿಯ ಧರ್ಮಪ್ಪ ನಗರದಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 11.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಧರ್ಮಪ್ಪ ನಗರದ ಎರಡನೇ ಕ್ರಾಸ್ ನಿವಾಸಿ ಪ್ರಕಾಶ್ (25)ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಪ್ರಕಾಶ್‌ನ ತಲೆಗೆ ಗಾಯವಾಗಿದ್ದು, ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.  ಸುದ್ದಿ ತಿಳಿದು ಸ್ಥಳಕ್ಕೆ ಬಂದ ಎಸ್ಪಿ ಜಿ.ಕೆ.ಮಿಥುನ್…

Read More

ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆ ಸಿಬ್ಬಂದಿಯ ಭೀಕರ ಕೊಲೆ|ನಡುರಸ್ತೆಯಲ್ಲಿ ಮೃತದೇಹ ಪತ್ತೆ|Murder

ಶಿವಮೊಗ್ಗ ನಗರದ ಜೈಲ್ ರಸ್ತೆಯ ಇಡ್ಲಿ ಹೌಸ್ ಪಕ್ಕದ ತಿರುವಿನ ವೆಂಕಟೇಶ ನಗರ ತಿರುವಿನ ಆರಂಭದ ಮನೆಯೊಂದರ ಮುಂದೆ ಇಂದು ಮುಂಜಾನೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಆತನ ಹೊಟ್ಟೆಗೆ ಚಾಕುವಿನಿಂದ ತಿವಿದಿದ್ದಾರೆ. ಮೃತ ವ್ಯಕ್ತಿಯನ್ನು ಗಾಂಧಿನಗರದ ನಿವಾಸಿ ಹಾಗೂ ಶಿವಮೊಗ್ಗ ನಗರದ ಭಾರತ್ ನ್ಯೂರೋ ಕ್ಲಿನಿಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ್ ಎಂ.ವಿ.ಎಂದು ಹೇಳಲಾಗುತ್ತಿದೆ. ಆತನಿಗೆ ಸುಮಾರು 34 ವರ್ಷ ವಯಸ್ಸು ಎನ್ನಲಾಗಿದೆ. ಗಾಂಧಿನಗರದ ನಿವಾಸಿಯಾದ ಆತನಿಗೆ ನಿನ್ನೆ ರಾತ್ರಿ ಎರಡು ಮೂವತ್ತರ ಹೊತ್ತಿಗೆ ಆಸ್ಪತ್ರೆಯಿಂದ ಫೋನ್…

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ| ಗ್ರಾಮದ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ:

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್ ಗಳ…

Read More

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ನಿಧನ|hegade

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ  ಸಂಘದ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಹೆಗಡೆ(57) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಹಾಗೂ ವಿವಿಧ ಸಂಸ್ಥೆಗಳಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ನಿತ್ಯಾನಂದ ಹೆಗಡೆ ಕಳೆದ ಕೆಲ ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದರು.ಸೊರಬದ ಹರಿಷಿ ಗ್ರಾಮದ ತಮ್ಮ ಸ್ವಗೃಹದಲ್ಲಿ ಇಂದು ಸಂಜೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ,ಓರ್ವ ಪುತ್ರನನ್ನು ಬಿಟ್ಟು ಅಗಲಿದ್ದಾರೆ.  ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸೊರಬದ ಹರಿಷಿ ಗ್ರಾಮದಲ್ಲಿ ಅಂತ್ಯಕ್ರೀಯೆಯನ್ನು ನಡೆಸಲು…

Read More