Headlines

ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಕಿರಣ್ snake kiran rescue python

ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ಪಟ್ಟಣದ ಕುರುಬರ ಪಾಳ್ಯದಲ್ಲಿ ನಡೆದಿದೆ. ತೀರ್ಥಹಳ್ಳಿಯ ಕುರುಬರ ಪಾಳ್ಯದ ಬಳಿ ಸುಹಾಸ್ ಎಂಬುವರ ಮನೆಯ ಗೋವುಗಳ ಸಾಕುವ ಹುಲ್ಲಿನ ಅಡಿಯಲ್ಲಿ ಏಳೂವರೆ ಅಡಿ ಉದ್ದದ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು, ಉರಗ ತಜ್ಞ ಕಿರಣ್(snake kiran) ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ ಮೇವನ್ನು ತರಲು ಹೋದಾಗ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು ಬಯದಿಂದ ಯಾವ ಹಾವೆಂದು ತಿಳಿದುಕೊಳ್ಳಲು ಉರಗ…

Read More

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read More

ಮೇಲಿನಸಂಪಳ್ಳಿ ಬಡ ಮಹಿಳೆಯ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ನೊಂದವರ ಪರ ಧ್ವನಿ ಎತ್ತಿ ಅವರಿಗೆ ಸಹಕಾರ ನೀಡಿದ ಕಾರ್ಯಗಳೇ ನನ್ನ ಜೀವನದಲ್ಲಿ ಅತಿ ಹೆಚ್ಚು ತೃಪ್ತಿ ನೀಡುವ ಕ್ಷಣಗಳಾಗಿದ್ದು ಆ ನಿಟ್ಟಿನಲ್ಲಿ ಬಡ,ನಿರ್ಗತಿಕರ ಧ್ವನಿಯಾಗಿ ಕಾರ್ಯ ನಿರ್ವಹಿಸುತಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆಗೆ ಮಾರುತಿಪುರ ಗ್ರಾಪಂ ಆಶ್ರಯದಲ್ಲಿ ಆಸರೆ ಸಮಿತಿ ನಿರ್ಮಿಸಿಕೊಡುತ್ತಿರುವ ಮನೆಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ ಕಳೆದ ಆರು ವರ್ಷಗಳಿಂದ ಮಹಿಳೆ ತನ್ನ ವಿಕಲಚೇತನ ಮಗಳೊಂದಿಗೆ ನರಕಯಾತನೆ ಅನುಭವಿಸುವಿರುವುದನ್ನು ಸಂಬಂಧಪಟ್ಟವರು ಗಮನಿಸದೇ…

Read More

ಗೃಹ ಮಂತ್ರಿಗಳ ಸಾಮ್ರಾಜ್ಯದಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ : ನಾಲ್ವರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಗೃಹ ಸಚಿವರ ಗ್ರಾಮದಲ್ಲಿಯೇ ದಲಿತ ದಂಪತಿಗಳ ಮೇಲೆ ಕೆಲ ಕಿಡಿಗೇಡಿಗಳು ಅಡ್ಡಕಟ್ಟಿ ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರರ ತವರು ಕ್ಷೇತ್ರದಲ್ಲಿ ಕಳ್ಳತನ ದರೋಡೆ ಪ್ರಕರಣಗಳು ನಡೆದ ಬೆನ್ನಲ್ಲೇ ಈಗ ದುಷ್ಕರ್ಮಿಗಳು ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡುವ ಯತ್ನಕ್ಕೂ ಕೈ ಹಾಕಿದ್ದಾರೆ ಎಂದರೆ ತೀರ್ಥಹಳ್ಳಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ?? ಇಲ್ಲವೋ ಎಂಬ ಪ್ರಶ್ನೆ ಮೂಡದೆ ಇರದು. ಘಟನೆಯ ಹಿನ್ನಲೆ: ನಿನ್ನೆ ಸಂಜೆ ತೀರ್ಥಹಳ್ಳಿ ತಾಲ್ಲೂಕಿನ…

Read More

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು|electric shock

ಲೈಟ್ ಕಂಬವೇರಿ ದೀಪ ಅಳವಡಿಸುವಾಗ ವಿದ್ಯುತ್ ತಗುಲಿ ಗ್ರಾಪಂ ನೀರಗಂಟಿ ಸಾವು – ಹುಂಚ ಗ್ರಾಪಂ ವಿರುದ್ದ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆಯಲ್ಲಿ ಲೈಟ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸುವಾಗ ಗ್ರಾಪಂ ನೀರಗಂಟಿ ವಿದ್ಯುತ್ ತಗುಲಿ ಸಾವನ್ನಪ್ಪಿ ಮತ್ತೊರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ನಾಗರಹಳ್ಳಿ ನಿವಾಸಿ ನಾರಾಯಣ್ ಎಸ್ ಸಿ (60) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗ್ರಾಪಂ ಅಟೆಂಡರ್ ಶ್ರೀಧರ್ ಗೆ ಗಂಭೀರ ಗಾಯಗಳಾಗಿವೆ. ದೂರಿನಲ್ಲೇನಿದೆ…??? ನಾರಾಯಣ ಎಸ್. ಸಿ…

Read More

Sagara: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಅಂತರಾಜ್ಯ ಕಳ್ಳರ ಬಂಧನ

Sagara: ಪೊಲೀಸರಿಂದ ಇಬ್ಬರು ಅಂತರಾಜ್ಯ ಕಳ್ಳರ ಬಂಧನ ಸಾಗರ(sagara) ನಗರದ ಶಿಕ್ಷಕರ ಬಡಾವಣೆಯ ಮನೆಯೊಂದರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಕಳುವಾಗಿದ್ದ ಮಾಲು, ಪ್ರಕರಣಕ್ಕೆ ಬಳಸಿದ್ದ ಕಾರು ಸಹಿತ 2.84 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಾಗರ ಟೌನ್ ಪೊಲೀಸರು(sagara town police) ವಶಕ್ಕೆ ಪಡೆದಿದ್ದಾರೆ. ಶಿಗ್ಗಾಂವ್(shiggav) ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ ಚಾಲಕ ಅಮೀರ್ ಖಾನ್ (42) ಹಾಗೂ ಬೆಳಗಾವಿಯ ಉಡಚಗಾವ್ ನಿವಾಸಿ ವಿಶಾಲ್ ನರಸಿಂಗ ಶೇರ್ಖಾನೆ (52)ನನ್ನು ಪೇಟೆ ಠಾಣೆ…

Read More

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದವರಿಂದ ಹಲ್ಲೆ: ಪ್ರಕರಣ ದಾಖಲು

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದ ಸದಸ್ಯರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ವಿಭಜನೆ ಬಿಕ್ಕಟ್ಟು ದಿನಕಳೆದಂತೆ ಹೆಚ್ಚಾಗುತ್ತಿದೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಭಹಿಷ್ಕಾರ, ಹಲಾಲ್ ಕಟ್-ಜಟ್ಕಾ ಕಟ್ ವಿವಾದಗಳು ಒಂದಾದ ಮೇಲೊಂದರಂತೆ ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿವೆ. ಇದರ ಬೆನ್ನಲ್ಲೆ ಹಲಾಲ್ ಮಾಂಸ ಮಾರಾಟಗಾರನ ಮೇಲೆ ಹಲ್ಲೆ ಮಾಡಿರುವುದು ಹಿಂಸಾಚಾರವನ್ನು ಭುಗಿಲೇಳಲಿದೆ. ಇದಕ್ಕೆ ಬಿಜೆಪಿ ಪ್ರಚೋದನೆ ನೀಡುತ್ತಿದೆ ಎನ್ನುವ ಆರೋಪಗಳನ್ನು ವಿಪಕ್ಷಗಳು ಮಾಡುತ್ತಿವೆ. ಹೀಗಾಗಿ ರಾಜ್ಯದಲ್ಲಿ ಧಾರ್ಮಿಕ…

Read More

ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ…

Read More

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ

RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಬುಕ್ಕಿವರೆ ಗ್ರಾಮದ ಬಳಿಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬುಕ್ಕಿವರೆ ಸಮೀಪ ತಿರುವಿನಲ್ಲಿ ಶಿವಮೊಗ್ಗ ಮೂಲದ ಕುಟುಂಬದವರು ಪ್ರಯಾಣಿಸುತಿದ್ದ ಕಾರು ಹಾಗೂ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ…

Read More

KSRTC ಬಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸುತಿದ್ದ ₹1.27000 ಮೌಲ್ಯದ ಗೋವಾ ಮದ್ಯ ವಶ : ಇಬ್ಬರ ಬಂಧನ

ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ  ಗೋವಾ ಮದ್ಯ ಸಾಗಿಸುತಿದ್ದ ಇಬ್ಬರನ್ನು ವಶಕ್ಕೆ ಪಡೆದು ₹ 1.27000 ಸಾವಿರ ಮೌಲ್ಯದ ವಿವಿಧ ಬ್ರಾಂಡ್ ನ  ಗೋವಾ ಮದ್ಯ ವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚಕ್ ಪೋಸ್ಟ್ ನಲ್ಲಿ ನಡೆದಿದೆ.  ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದು ,ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್…

Read More