ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ  ; ಕೆ.ಎಸ್.ಈಶ್ವರಪ್ಪ | KSE   ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಕಾರ್ಯರ್ತರ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕರ್ತರು ಆಗಮಿಸಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾಗರ ಮಾಜಿ ನಗರ ಸಭಾ ಸದಸ್ಯರುಗಳಾದ ಮಂಜುನಾಥ್ ಕೆ.ಎಲ್. ಕಸ್ತೂರಿ ಸಾಗರ, ಮಾಜಿ…

Read More

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.  ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ”ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು” ಎಂದು ಮನವಿ ಮಾಡಿದ್ದಾರೆ. ”ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ…

Read More

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ದ್ವಿಚಕ್ರ ವಾಹನಗಳ ಮುಖಾಮುಖಿ‌ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ‌ ನೆಲವಾಗಿಲು ಬಳಿ ಸಂಭವಿಸಿದೆ. ಬೆಳಿಗ್ಗೆ ಶಿಕಾರಿಪುರದಿಂದ ಮೂವರು ಯುವಕರು ನೆಲವಾಗಿಲು ಕಡೆ ತೆರಳಿದ್ದರು.ರಾತ್ರಿ ಅಲ್ಲಿಂದ ಹಿಂದಿರುಗುವ ವೇಳೆ ಎದುರಿನಿಂದ ಬಂದ ಬೈಕ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ  ಪಾರಿವಾಳ ಶಿವರಾಮಣ್ಣ ಎಂಬುವರ ಮಗ ಕೊಟ್ರೇಶ್(25)  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರು ಮತ್ತು ಎದುರಿನಿಂದ ಬಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಶಿವಮೊಗ್ಗ ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಹಲ್ಲೆ, ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಭತ್ತು ಮಂದಿ ಆರೋಪಿಗಳನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಪವನ್ , ಮಂಜುನಾಥ್, ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ್, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಪವನ್‌ ಮತ್ತು ಕಿರಣ್‌ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಗುರುವಾರ ರಾತ್ರಿ ನೇತಾಜಿ ಸರ್ಕಲ್‌ನಲ್ಲಿ ಗಲಾಟೆಯಾಗಿತ್ತು….

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೊ ಕಾರು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಟಿವಿಎಸ್ ಅಪ್ಪಚ್ಚಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿದ್ದು ಒಬ್ಬರ ಕಾಲು ಮುರಿತವಾಗಿದ್ದರೆ ಇನ್ನೊಬ್ಬರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು ಇಬ್ಬರನ್ನು…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ರಿಪ್ಪನ್ ಪೇಟೆ : ಆಲುವಳ್ಳಿ,ಕೆಂಚನಾಲ ಸುತ್ತಮುತ್ತ ಆಕಾಶದಲ್ಲಿ ವಿಚಿತ್ರ ಕೌತುಕ : ಬೆಚ್ಚಿಬಿದ್ದ ಜನರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಆಲುವಳ್ಳಿ ಹಾಗೂ ಕೆಂಚನಾಲ ಗ್ರಾಮದಲ್ಲಿ ಇಂದು ಸರಿಯಾಗಿ ಆಕಾಶದಲ್ಲಿ ಸಾಲು ಸಾಲಾಗಿ ಸಣ್ಣ ಸಣ್ಣ ದೀಪಗಳು ಹಾದು ಹೋಗಿ ಅಚ್ಚರಿ ಮೂಡಿಸಿವೆ. ಬಾಹ್ಯಾಕಾಶದಲ್ಲಿ ನಡೆಯುವ‌ ಕೌತುಕಗಳಿಗೆ ಕೊನೆಯೇ ಇಲ್ಲ. ಆಕಾಶದಲ್ಲಿ ಅದೇ ನಕ್ಷತ್ರ, ಅದೇ ಚಂದ್ರ, ಅದೇ ಸೂರ್ಯ ಇದ್ದಿದ್ದರೆ ಯಾವ ಕುತೂಹಲವೂ ಅನುಸುತ್ತಿರಲಿಲ್ಲ. ಆದರೆ ಬಾಹ್ಯಾಕಾಶದಲ್ಲಿ ಏಕಾಏಕಿ ಲೈಟ್ ಗಳ ಸರಣಿ ಹಾದು ಹೋದರೆ ನಿಮ್ಮನ್ನ ಅಚ್ಚರಿ ಪಡಿಸದೆ ಇರದು. ಇಂತಹ ಒಂದು ಕೌತುಕಕ್ಕೆ ಹೊಸನಗರ ತಾಲೂಕಿನ ಕೆಂಚನಾಲ,ಆಲುವಳ್ಳಿ…

Read More

ನಿಗದಿತ ಅವಧಿಯ ಒಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುತ್ತೆ: ಸಚಿವ ಸಿ.ಸಿ.ಪಾಟೀಲ್

ಶಿವಮೊಗ್ಗ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್ ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ…

Read More

ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಡಿಕ್ಕಿ – ಚಾಲಕ ಸಾವು|accident

ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರು ಕಾಂಪೌಂಡ್‌ಗೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಗೌತಮಪುರ ಸಂಭವಿಸಿದೆ. ಮೃತನನ್ನು ಪ್ರಜ್ವಲ್‌ ಎಂದು ಗುರುತಿಸಲಾಗಿದೆ. ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಮನೆಯೊಂದರ  ಕಾಂಪೌಂಡ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ಪ್ರಜ್ವಲ್‌ ಗಂಭೀರವಾಗಿ ಗಾಯಗೊಂಡಿದ್ದು ಮೃತಪಟ್ಟಿದ್ದಾನೆ.  ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ : ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸಿ :ನಾಗರಾಜ ಪರಿಸರ.

ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರಜ್ಞಾನದಲ್ಲಿ  ಶಿಕ್ಷಣ  ಪಡೆಯುತ್ತಿರುವ ಯುವ ಸಮೂಹ  ಪ್ರತಿಯೊಬ್ಬರನ್ನು  ಗೌರವಿಸುವ  ಮನೋಭಾವನೆಯನ್ನು ಬೆಳೆಸಿಕೊಂಡರೆ  ಉತ್ತಮ ಸಮಾಜ  ನಿರ್ಮಾಣ ಮಾಡಬಹುದು ಎಂದು ಕುವೆಂಪು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜನೆ ಅಧಿಕಾರಿ  ಡಾ. ನಾಗರಾಜ  ಪರಿಸರ  ಹೇಳಿದರು.  ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಸಮೂಹ ಸಮಾಜದಲ್ಲಿನ ಪ್ರತಿಯೊಬ್ಬರನ್ನು ಗೌರವಿಸುವಂತಾಗಬೇಕು. ಅಂತ ಮನೋಭಾವನೆಯನ್ನು…

Read More