Headlines

ವಿಸ್ತಾರ ನ್ಯೂಸ್ ವಿಸ್ತಾರವಾಗಿ ಬೆಳೆಯಲಿ : ಹರತಾಳು ಹಾಲಪ್ಪ|Vistara

ರಿಪ್ಪನ್‌ಪೇಟೆ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ.ಆ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಿ ಒಳ್ಳೆಯ ಸುದ್ದಿ ಮಾದ್ಯಮವಾಗಿ ಹೊರಬರಲಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಬದಲಾದ ದಿನಮಾನಗಳಲ್ಲಿ ಎಲ್ಲವೂ ಕಲುಷಿತಗೊಂಡಿದೆ ಎನ್ನುವ…

Read More

ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa

ರಿಪ್ಪನ್‌ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ…

Read More

ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More

ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ !!!|Sand Mafia

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿ, ಕೆಎ-15-3172, ಕೆಎ-15-ಎ-0957, ಕೆಎ-42-2108 ನೋಂದಣಿ ಸಂಖ್ಯೆ ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದು ಆರೋಪಿಗಳಾದ ಈಚಲಕೊಪ್ಪ ಕಿರಣ, ಮುತ್ತಲ ಮಂಜುನಾಥ ಮತ್ತು ರಾಮಚಂದ್ರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ವಲಯ ಅರಣ್ಯಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ…

Read More

ಮತಾಂತರವಾಗುವಂತೆ ಪತ್ನಿಗೆ ಪತಿಯಿಂದ ಚಿತ್ರಹಿಂಸೆ – ತೀರ್ಥಹಳ್ಳಿ ಮೂಲದ ಖಾದರ್ ವಿರುದ್ದ ಪ್ರಕರಣ ದಾಖಲು|arrested

ವಿವಾಹಿತ ಹಿಂದೂ ಮಹಿಳೆಗೆ ವಿಚ್ಛೇದನ ಕೊಡಿಸಿ, ನಂತರ ಆಕೆಯನ್ನ ಮದುವೆಯಾಗಿ ಇದೀಗ ಮತಾಂತರವಾಗುವಂತೆ ಹಿಂಸೆ ನೀಡುತ್ತಿರುವ ಆರೋಪ ಮಹಿಳೆಯಿಂದ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬಾತನ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಚಿತ್ರದುರ್ಗದ ಮಹಿಳಾ ಠಾಣೆಯ ಪೊಲೀಸರು ಎಫ್​ಐಆರ್ ದಾಖಲು ಮಾಡಿ, ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ತೀರ್ಥಹಳ್ಳಿ ಮೂಲದ ಸಂತ್ರಸ್ತ ಮಹಿಳೆ ಹತ್ತು ವರ್ಷಗಳ ಹಿಂದೆಯೇ ಶ್ರೀನಿವಾಸ್ ಎಂಬುವವರನ್ನ ವಿವಾಹವಾಗಿದ್ದರು. ಹೊಟ್ಟೆಪಾಡಿಗಾಗಿ ತೀರ್ಥಹಳ್ಳಿಯಲ್ಲಿರುವ ಡಯಾಲಿಸಿಸ್ ಸೆಂಟರ್​ ನಲ್ಲಿ ಕೆಲಸ ಮಾಡುತ್ತಿದ್ದಳು. ಈ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-11-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/11/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

ಬಿಜೆಪಿ ತೆಕ್ಕೆಗೆ ಜಾರಿದ ಶಿಕಾರಿಪುರ ಜೆಡಿಎಸ್ ಅಭ್ಯರ್ಥಿ ಹೆಚ್ ಟಿ ಬಳಿಗಾರ್ |shikaripura

ಶಿಕಾರಿಪುರದಲ್ಲಿ ಜೆಡಿಎಸ್​ ನಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಯನ್ನೇ ಬಿಜೆಪಿ ತನ್ನತ್ತಾ ಸೆಳೆದು ಜೆಡಿಎಸ್​ಗೆ ಶಾಕ್ ನೀಡಿದೆ.  ಶಿಕಾರಿಪುರದ ಅಭ್ಯರ್ಥಿಯಾಗಿದ್ದ ಹೆಚ್.ಟಿ. ಬಳಿಗಾರ್ ಕಳೆದ ಎರಡು ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು.ಆದರೆ ಈ ಬಾರಿ ಬಿಜೆಪಿ ಹೆಚ್ ಟಿ ಬಳಿಗಾರ್​ರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಧಿಕೃತವಾಗಿ ಚಳಿಗಾರ್ ಬಿಜೆಪಿಯನ್ನು ಸೇರಿದ್ದಾರೆ.  ಈ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು. ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ…

Read More

ಚಲಿಸುತಿದ್ದ KSRTC ಬಸ್ ನಿಂದ ಹಾರಿ ವ್ಯಕ್ತಿ ಆತ್ಮಹತ್ಯೆ|

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ‍ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭದ್ರಾವತಿಯ ವೀರಾಪುರ ಕ್ರಾಸ್ ಬಳಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಿಳ್ಳೆನಹಳ್ಳಿ ನಿವಾಸಿ ನಂದೀಶ್ (35) ಎಂಬುವವರು ಮೃತ ದುರ್ದೈವಿ. ನಂದೀಶ್‌ ಕಳೆದ ಹಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೆಗ್ಗಾನ್ ಆಸ್ಪೆತ್ರೆಗೆ ಚಿಕಿತ್ಸೆಗಾಗಿ ಸ್ನೇಹಿತನ ಜತೆ ಬಂದಿದ್ದ ನಂದೀಶ್, ಚಿಕಿತ್ಸೆ ಪಡೆಯುವುದಿಲ್ಲ ಎಂದು ಹಠ ಮಾಡಿದ್ದಾರೆ. ಆಸ್ಪತ್ರೆಯಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಾಪಸ್ ಬರುತ್ತಿದ್ದಾಗ, ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ…

Read More

ತೀರ್ಥಹಳ್ಳಿಯಲ್ಲಿ ಕೋರ್ಟ್ ಕಟ್ಟಡವನ್ನೇ ಗೋಡೌನ್ ಮಾಡಿಕೊಂಡಿದ್ದ ಗುಜರಿ ವ್ಯಾಪಾರಿ – ಆರೋಪಿಗೆ ನ್ಯಾಯಂಗ ಬಂಧನ|Thirthahalli

ನ್ಯಾಯಾಲಯದ ಕಟ್ಟಡವನ್ನು ಗೋಡೌನ್ ಮಾಡಿ ಕೊಂಡಿದ್ದ ವ್ಯಕ್ತಿಯೊಬ್ಬನಿಗೆ ತೀರ್ಥಹಳ್ಳಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ, ಬಿಗ್ ಶಾಕ್ ನೀಡಿರುವಂತ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಿಬಿನಕೆರೆಯಲ್ಲಿ ಹೊಸ ನ್ಯಾಯಾಲಯವಾದ ಪ್ರಯುಕ್ತ ಸೊಪ್ಪು ಗುಡ್ಡೆಯಲ್ಲಿರುವ ಹಳೆ ನ್ಯಾಯಾಲಯದ ಕಟ್ಟಡದಲ್ಲಿ ಬೀಗಗಳನ್ನು ಹಾಕಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿತ ಮತ್ತು ನಿಷೇಧಿತ ಪ್ರದೇಶವೆಂದು ಕಟ್ಟಡಗಳಿಗೆ ಬೀಗಗಳನ್ನು ಹಾಕಲಾಗಿತ್ತು. ನ್ಯಾಯಾಲಯದ ಕಟ್ಟಡದ ಆವರಣದಲ್ಲಿ ಅನೇಕರು ತಮ್ಮ ಕಾರುಗಳನ್ನು ಅಕ್ರಮ ಪಾರ್ಕಿಂಗ್ ಮಾಡಿಕೊಂಡಿದ್ದರು. ಇದಲ್ಲದೆ ಸೊಪ್ಪುಗುಡ್ಡೆ ಎರಡನೇ ಕ್ರಾಸ್ ನಿವಾಸಿ ಮೇರಾ ರಾಮ್ ಬಿನ್…

Read More

ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು‌ ಪ್ರಸರಿಸುವ ವಾಹಿನಿಗಳ ಅಗತ್ಯತೆ ಇದೆ – ಶಾಸಕ ಹರತಾಳು ಹಾಲಪ್ಪ|sagara

ಸಾಗರ : ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುದ್ದಿ‌ಮಾಧ್ಯಮಗಳು ಪೈಪೋಟಿಗೆ ಬಿದ್ದು ಸುದ್ದಿಗಳನ್ನು ನೀಡುವುದರ ಜೊತೆಗೆ ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಅಗತ್ಯ ಇದೆ. ಜನರು ವಾಹಿನಿಗಳ ಮೇಲೆ ಇರಿಸಿಕೊಂಡಿರುವ ನಂಬಿಕೆ ಶಾಶ್ವತವಾಗಿ ಉಳಿಸಿ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಬೇಕು ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ನಗರಸಭೆ ರಂಗಮಂದಿರದಲ್ಲಿ ಗುರುವಾರ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದ ಅವರು…

Read More
Exit mobile version