Headlines

ಅವಿಶ್ವಾಸ ಗೊತ್ತುವಳಿ: ಅಧಿಕಾರ ಕಳೆದುಕೊಂಡ ಹೆದ್ದಾರಿಪುರ ಗ್ರಾಪಂ ಅಧ್ಯಕ್ಷೆ ವನಿತಾ ಗಂಗಾಧರ್|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ವನಿತಾ ಗಂಗಾಧರ್ ತನ್ನ ‌ಸ್ಥಾನ ಕಳೆದುಕೊಂಡಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು ಓರ್ವರು ಮೃತಪಟ್ಟಿದ್ದಾರೆ, ಈ ಪೈಕಿ 11 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಇದರಲ್ಲಿ 4 ಬಿಜೆಪಿ ಬೆಂಬಲಿತ ಸದಸ್ಯರು,5 ಕಾಂಗ್ರೆಸ್ ಬೆಂಬಲಿತರು ಹಾಗೂ 2 ಪಕ್ಷೇತರ ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ…

Read More

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ NIA

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಮತ್ತೆ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ಎನ್​ಐಎ ತಂಡ ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳನ್ನೊಳಗೊಂಡ ತಂಡ ಇಂದು ಬೆಳಗ್ಗೆ ಐದು ಗಂಟೆಯಿಂದ ತನಿಖೆ ಆರಂಭಿಸಿದ್ದು, ಜಿಲ್ಲೆಯ 18 ಕಡೆಗಳಲ್ಲಿ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಮುಂಜಾನೆಯಿಂದ ನಿರಂತರವಾಗಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ…

Read More

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :

ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ‌ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…

Read More

ಅಗಲಿದ ಸೈನಿಕನಿಗೆ ವೀರ ನಮನ – ಸಾವಿರಾರು ಜನರಿಂದ ಅಂತಿಮ ದರ್ಶನ : ತವರಿನ ಮಣ್ಣಲ್ಲಿ ಲೀನವಾದ ಯೋಧ ಸಂದೀಪ್|tribute

ರಿಪ್ಪನ್‌ಪೇಟೆ : ಸಕಲ ಸರ್ಕಾರಿ ಗೌರವದೊಂದಿಗೆ ಅಗಲಿದ ಯೋಧ ಸಂದೀಪ್ ರವರ ಅಂತ್ಯಕ್ರಿಯೆ ಪಟ್ಟಣದ ಹಿಂದೂ ರುಧ್ರಭೂಮಿಯಲ್ಲಿ ಜರುಗಿತು. ಸಂದೀಪ್ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಶಾಸಕ ಹರತಾಳು ಹಾಲಪ್ಪ ,ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರಿ,ಡಿವೈಸ್ಪಿ ಗಜಾನನ ವಾಮನ ಸುತಾರ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು. ವಿನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲಾ ಪೊಲೀಸ್ ವತಿಯಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು. ವಿನಾಯಕ…

Read More

ಮಾನವೀಯತೆ ಮರೆತಿದ್ದಾರೆ ಸಾಗರದ ಶಾಸಕರು: ಬೇಳೂರು ಗೋಪಾಲಕೃಷ್ಣ

ಆನಂದಪುರ:ಕಿಟ್ ಹಾಗೂ ಕೊರೊನಾ ಲಸಿಕೆ ನೀಡುವಲ್ಲಿ  ಸಾರ್ವಜನಿಕರಿಗೆ ವಂಚಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರ ತಾಲೂಕಿನ ಆನಂದಪುರದಲ್ಲಿ ಕಿಟ್ ನೀಡುವ ಸಭೆಯಲ್ಲಿ ಭಾಗವಹಿಸಿದಂತಹ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಸಾಗರದ ಶಾಸಕರು ಇದೀಗ ಮಾನವೀಯತೆಯನ್ನು ಮರೆತಿದ್ದಾರೆ ಕೇವಲ ತಮ್ಮ ಕಾರ್ಯಕರ್ತರಿಗೆ ಕಿಟ್ಟನ್ನು ನೀಡುವಲ್ಲಿ ಹಾಗೂ ಕೊರೋನಾ ಲಸಿಕೆ ಕೊಡಿಸುವತ್ತ ಗಮನ ಹರಿಸುತ್ತಿದ್ದಾರೆ ಇನ್ನುಳಿದ ಜನರು…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಎತ್ತಿನಗಾಡಿ|Ripponpet

ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ  ಆಯೋಜಿಸಿದ್ದ   67ನೇ ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮ ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಹಾಗೂ ಜಟಕಾ ಬಂಡಿ ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ರಾಮಚಂದ್ರ (ಗ್ಯಾರೇಜ್ ರಾಮು) ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಚಾಲನೆ ನೀಡಿದರು.ಈ ಮೆರವಣಿಗೆಯಲ್ಲಿ…

Read More

ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ ಹೊಸನಗರ ತಾಲೂಕಿನ ನಗರ ಮೂಲದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟಿ ಗ್ರಾಮದಲ್ಲಿ ಶಿಕ್ಷಕಿಯಾಗಿದ್ದ ಅಶ್ವಿನಿ ಕೆ.ಆರ್ ಎಂಬುವರು ಒಂದುವರೆ ವರ್ಷದ ಹಿಂದೆ  ಪ್ರಕಾಶ್ ಎಂಬುವರ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ನಗರದ ಅಮೃತಾನಂದ ಮಯಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.ಇವರು ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ…

Read More

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಸಮೀಪದಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಸುಮಾರು 36 ವರ್ಷ ವಯಸ್ಸಿನ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತನ ವಿಳಾಸ ತಿಳಿದು ಬಂದಿಲ್ಲಾ. ಸಾಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್  ಮತ್ತು ಗ್ರಾಮಾಂತರ ಇನ್ಸ್ಪೆಕ್ಟರ್ ಗಿರೀಶ್ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಮಾಹಿತಿ: ಇಮ್ರಾನ್ ಸಾಗರ್

Read More

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು. ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು. ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ…

Read More