Headlines

ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ|rpet news

ಬೇಡಿದ ವರವನ್ನು ವರ್ಷದೊಳಗೆ ಪೂರ್ಣಗೊಳಿಸುವ ಮಹಾತಾಯಿ;- “ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ’’ ರಿಪ್ಪನ್‌ಪೇಟೆ;-ಪುರಾತನ ಕಾಲದ ದೇವಾಲಯಗಳು ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಮೂಲಧಾರಗಳು ಹಾಗೆಯೇ ಅಲ್ಲಿ ವಾಸಿಸಿದ ಋಷಿಮುನಿಗಳು ಶಿವಯೋಗ್ಯವರೇಣ್ಯರು ತಮ್ಮ ಪವಾಡ-ಪೂಜೆಗಳಿಂದ ಆಯಾ ಭಾಗದ ಕ್ಷೇತ್ರಗಳನ್ನು ಪಾವನಗೊಲಿಸಿ ಜಗದಿಂದ ಮರೆಯಾಗಿ ಹೋಗಿದ್ದಾರೆ.ಅಂತಹ ಸಾಧಕರ ಪಾದಸ್ಫರ್ಶದ ಸ್ಥಳಗಿಳಿಂದು ಪ್ರಚಾರವಿಲ್ಲದೆ.ಮೂಲೆಗುಂಪಾಗುತ್ತಾ ಎಷ್ಟೋ ಪ್ರಮುಖ ಇತಿಹಾಸವೂಳ್ಳ ದೇವಸ್ಥಾನಗಳು ಮತ್ತು ಧಾರ್ಮಿಕ ಪವಾಡದ ಹಲವು ಗುಹೆಗಳು ಆಳಿಯುವಂತಾಗಿರುವುದು ಕಾಣಬಹುದಾಗಿದ್ದರೂ ಕೂಡಾ ಅಳಿದುಳಿದಿರುವ ಕೆಲವು ಪ್ರಮುಖ ಧಾರ್ಮಿಕ ಕೇಂದ್ರಗಳಲೊಂದಾದ…

Read More

ಖ್ಯಾತ ನಟಿ ಜಯಂತಿ ಇನ್ನಿಲ್ಲ:

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜುಲೈ 26 ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಕಮಲ ಕುಮಾರಿಯಾಗಿ ಬಳ್ಳಾರಿಯಲ್ಲಿ ಜನಿಸಿದ ನಟಿ ಜಯಂತಿಯಾಗಿ ಖ್ಯಾತಿಗಳಿಸಿದರು. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ ಕನ್ನಡ ಸೇರಿದಂತೆ 6 ಭಾಷೆಯಗಳಲ್ಲಿ ನಟಿಸಿದ್ದಾರೆ. ಜೇನು ಗೂಡು ಸಿನಿಮಾ ಮೂಲಕ 1963ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಯಂತಿ ಅನೇಕ ಅದ್ಭುತ ಸಿನಿಮಾಗಳನ್ನು…

Read More

ಕಾಗೋಡು ಪುತ್ರಿ ರಾಜನಂದಿನಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ – ನನ್ನ ಎದೆಗೆ ಚೂರಿ ಹಾಕಿದ ಹಾಗೇ ಆಗುತ್ತಿದೆ – ಕಾಗೋಡು|Kagodu

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿ ಹಾಗೂ ಜಿಪಂ ಮಾಜಿ ಸದಸ್ಯ ಹೊನಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ರಾಜನಂದಿನಿ KPCC ಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಯವರನ್ನು ಭೇಟಿ ಮಾಡಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಂಡರು….

Read More

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…

Read More

ಶಾಲಾ ವಾಹನ ಅಪಘಾತ – ಬಸ್ ಗಾಗಿ ಕಾಯುತಿದ್ದ ವ್ಯಕ್ತಿ ಸಾವು|accident

ಶಾಲಾ ವಾಹನಕ್ಕೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮದಲ್ಲಿ ನಡೆದಿದೆ.  ಅಪಘಾತದಲ್ಲಿ ವಿಶ್ವನಾಥ ಕೊಟ್ರಪ್ಪ ಬಾಜಿಗೊಂಡರ್ (37) ಸಾವನ್ಬಪ್ಪಿರುವ ದುರ್ದೈವಿಯಾಗಿದ್ದಾನೆ. ಬಾಜಿಗೊಂಡರ್  ಹಾವೇರಿ ಜಿಲ್ಲೆಯ ಬೆಳವಗಿ ಗ್ರಾಮದ ನಿವಾಸಿಯಾಗಿದ್ದಾನೆ. ಹಾವೇರಿ ಜಿಲ್ಲೆಯ ವಾಸಿಯಾದ ಬಾಜಿಗೊಂಡರ್ ಶಿವಮೊಗ್ಗದಲ್ಲಿ ಚಾಲಕ ‌ವೃತ್ತಿ ನಿರ್ವಹಿಸುತ್ತಿದ್ದ. ದಾವಣಗೆರೆ ಕಡೆ‌ ಹೋಗಲು ‌ಕೂಡ್ಲಿಗೆರೆಯ ಗ್ರಾಮ ಪಂಚಾಯಿತಿ ಮುಂಭಾಗದ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದನು. ಭದ್ರಾವತಿಗೆ ಬಂದು ಭದ್ರಾವತಿಯ ಮೂಲಕ ದಾವಣಗೆರೆಕಡೆ ಹೊರಡಲು ಸಜ್ಜಾಗಿದ್ದ ಬಾಜಿಗೊಂಡರ್ ಗೆ…

Read More

ಹೊಸನಗರ : ಬಿದನೂರಿನ ಮಾಷುಂಷಾ ವಲಿಯುಲ್ಲಾ ದರ್ಗಾದ ನೂತನ ಸಮಿತಿ ರಚನೆ|nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಜಿ ಜಿ ಮಹಮ್ಮದ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇಂದು ನಗರದ ಮಾಷುಂಷಾ ವಲಿಯುಲ್ಲಾ ದರ್ಗಾದ ಆವರಣದಲ್ಲಿ ಜಿಲ್ಲಾ ವಕ್ಪ್ ಅಧಿಕಾರಿ ಮೆಹತಾಬ್ ಸಮ್ಮುಖದಲ್ಲಿ ನಡೆದ ಸಮಿತಿಯ 3 ನೇ ವರ್ಷದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಈ ಸಂಧರ್ಭದಲ್ಲಿ ವಿನಾಯಕ ಉಡುಪ ,ಆರ್ ಎ ಚಾಬುಸಾಬ್,ಸಾಧಿಕ್ ಕಚ್ಚಿಗೆ ಬೈಲ್, ಜಿ ರಹೆಮಾನ್…

Read More

ಹೆದ್ದಾರಿಪುರ: ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಆರಗ ಜ್ಞಾನೇಂದ್ರ

ಹೆದ್ದಾರಿಪುರ : ಕರ್ನಾಟಕ ರಾಜ್ಯದ ಗೃಹ ಮಂತ್ರಿಯಾದ ಆರಗ ಜ್ಞಾನೇಂದ್ರ ರವರು ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ಹೆದ್ದಾರಿಪುರ ಬೂತ್ ನ ಅಧ್ಯಕ್ಷರಾದ ಸತೀಶ್ ಭಟ್ ರವರಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡುವ ಮೂಲಕ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪಲಕ ಅನಾವರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಿಜೆಪಿ ಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ ಸಂಗತಿಯಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೊತೆಗೆ ಪಕ್ಷದ ಸಂಪರ್ಕವನ್ನು…

Read More

ಮಲೆನಾಡಿನ ಯುವ ಪ್ರತಿಭೆಗಳಿಂದ ಅದ್ಭುತವಾದ ಕಿರುಚಿತ್ರ :

ಮಲೆನಾಡಿನಲ್ಲಿ ಯುವ ಪ್ರತಿಭೆಗಳೇನೂ ಕಡಿಮೆ ಇಲ್ಲ. ಅಂತಹ ಒಂದು ಪ್ರತಿಭೆಗಳು ತಯಾರಿಸಿರುವ ಕನ್ನಡ ಕಿರುಚಿತ್ರ “ಉದರನಿಮಿತ್ತಂ”. ಬಹು ನಿರೀಕ್ಷಿತ ಕಿರುಚಿತ್ರವನ್ನು ರಿಪ್ಪನ್ ಪೇಟೆಯ ಬಹುಮುಖ ಪ್ರತಿಭೆ ಅರುಣ ಕಾಳಾಮುಖಿ ನಿರ್ದೇಶಿಸಿದ್ದಾರೆ. ಈ ರೋಚಕ ಕಿರುಚಿತ್ರವು ಕೆಲದಿನಗಳ ಹಿಂದೆ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಉದರನಿಮಿತ್ತಮ್ ಬಹುಕೃತವೇಷಮ್ ಹೊಟ್ಟೆಪಾಡಿಗಾಗಿ ಜನರು ನಾನಾ ಉದ್ಯೋಗವನ್ನು ಆರಿಸಿಕೊಳ್ಳುತ್ತಾರೆ ನಾನಾ ವೇಷಗಳನ್ನು ತೊಡುತ್ತಾರೆ  ಉದರ ನಿಮಿತ್ತಂ ಚಿತ್ರದ ಶೀರ್ಷಿಕೆಯೇ ಹೇಳುವಂತೆ ಹೊಟ್ಟೆಪಾಡಿಗಾಗಿ ಚಿತ್ರದ ನಾಯಕನು ಹೆಣ ಹೂಳುವ  ಕಾಯಕವನ್ನು ಮಾಡುತ್ತಿರುತ್ತಾನೆ ಆ  ಊರಿನಲ್ಲಿ…

Read More

SAGARA | ಹೋಳಿ ಆಚರಣೆ ವೇಳೆ ಕಿರಿಕ್  , ಓರ್ವ ಸಾವು : ಇಬ್ಬರ ವಿರುದ್ಧ ಪ್ರಕರಣ

SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ  ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು. ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು  ಮಾಲತೇಶ ಅವರು…

Read More

ತೀರ್ಥಹಳ್ಳಿ ಪೊಲೀಸರಿಂದ ಗಾಂಜಾ ಬೇಟೆ !!! ಪಶ್ಚಿಮ ಬಂಗಾಳ ಮೂಲದ ನಾಲ್ವರ ಬಂಧನ

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ  ಮೂಲದ ನಾಲ್ವರನ್ನು ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಮಾಡಲಾಗಿದೆ.   ನಾಲ್ವರು ಕೂಡ ಪಶ್ಚಿಮ ಬಂಗಾಳದ ಮೂಲದವರಾಗಿದ್ದು ತೀರ್ಥಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿಯ ಡಿವೈಎಸ್ಪಿ ಇವರ ನೇತೃತ್ವದಲ್ಲಿ ಮಾರುವೇಷದಲ್ಲಿ ಹೋಗಿ ಆರೋಪಿಗಳನ್ನು ಬಂಧಿಸಿದ್ದು ಒಂದೂವರೆ ಕೆಜಿ ಗಾಂಜಾ ಕೂಡ ವಶಕ್ಕೆ ಪಡೆಯಲಾಗಿದೆ.  ಪಶ್ಚಿಮ ಬಂಗಾಳ ಮೂಲದವರಾದ ಬಾಷಾ ಸರ್ಕಾರ್, ಅಲೋಕ್ ಮಂಡಲ್, ಅಮೃತ್ ಮಂಡಲ್, ಸಂಕರ್…

Read More
Exit mobile version