ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ : ಯಡಿಯೂರಪ್ಪ ನಿವಾಸದಲ್ಲಿ ನೀರವ ಮೌನ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ವಸಂತನಗರದ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಗೆ ಪತಿ ನೀರಜ್ ಕೆಲಸಕ್ಕೆ ತೆರಳಿದ ನಂತರ ಸುಮಾರು 10 ಗಂಟೆ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಗಳು ಪದ್ಮಾವತಿಯವರ ಪುತ್ರಿ ಆಗಿರುವ ಸೌಂದರ್ಯ ಬೆಂಗಳೂರು ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ…

Read More

ಜಾಗದ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ವ್ಯಕ್ತಿ : ಮನವೊಲಿಸಿ ಕೆಳಗಿಳಿಸುವಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿ :

ಖಾಸಗಿ ವ್ಯಕ್ತಿಗಳು ತನ್ನ ಮನೆಯನ್ನು ನೆಲಸಮಗೊಳಿಸಿ ಅನ್ಯಾಯ ಎಸಗಿದ್ದಾರೆ ಹಾಗೂ ಈ ಬಗ್ಗೆ ಯಾರು ಸೂಕ್ತ ರೀತಿಯಲ್ಲಿ ನ್ಯಾಯ ದೊಕಿಸಿಕೊಟ್ಟಿಲ್ಲ ಎಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಪ್ರಸಂಗ ಹೊಸನಗರ ತಾಲೂಕಿನ ಕೋಡೂರು ಗ್ರಾಮದಲ್ಲಿ ನಡೆಯಿತು. ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡೂರಿನ ಶಾಂತಪುರ ವಾಸಿ ಕೃಷ್ಣಮೂರ್ತಿ ಅಲಿಯಾಸ್ ಮೀಸೆ ಕೃಷ್ಣ ಬಿನ್ ಹುಚ್ಚನಾಯ್ಕ (47) ಎಂಬಾತನು ಗ್ರಾಮ ಪಂಚಾಯಿತಿ ಎದುರುಗಡೆ ಇರುವ ಏರ್ ಟೆಲ್ ಟವರ್ ನ ಸುಮಾರು 150 ಅಡಿಗಳಷ್ಟು…

Read More

ಆನ್ ಲೈನ್ ವಂಚನೆ : 79,998 ರೂ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ಸರಕಾರ ಹಾಗೂ ಬ್ಯಾಂಕ್ ಗಳು ಹಲವಾರು ಜಾಹಿರಾತಿನ ಮೂಲಕ ಆನ್ ಲೈನ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು ಹಲವರು ಈಗಲೂ ಆನ್ ಲೈನ್ ವಂಚಕರ ಬಲೆಗೆ ಬೀಳುತಿದ್ದಾರೆ. ಶಿವಮೊಗ್ಗದ ವಿದ್ಯಾರ್ಥಿಯೊಬ್ಬ ಆನ್ ಲೈನ್ ವಂಚನೆಗೆ ಒಳಗಾಗಿ ಪರಿತಪಿಸುತ್ತಿರುವ ಘಟನೆ ನಡೆದಿದೆ. ಪಾನ್ ಕಾರ್ಡ ಅಪ್ಡೇಟ್ ಮಾಡಿಕೊಳ್ಳುವಂತೆ ಬಂದ ಲಿಂಕ್ ಒತ್ತುವ ಮೂಲಕ ವಿದ್ಯಾರ್ಥಿಯೋರ್ವ 79998/- ರೂ. ಹಣ ಕಳೆದುಕಂಡ ಘಟನೆ ಈಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ನಡದಿದೆ. ಅಪರಿಚಿತ ಮೊಬೈಲ್ ನಂಬರ್ ಮೂಲಕ ಬಂದ ಲಿಂಕ್ ನಲ್ಲಿ…

Read More

ರವಿ ಡಿ ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಗುರುವಾರ ಆದೇಶಿಸಿದೆ.  ರವಿ ಡಿ. ಚನ್ನಣ್ಣನವರ್- ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ,  ಡಾ. ಭೀಮಾಶಂಕರ್ ಎಸ್.ಗುಳೇದ್- ಬೆಂಗಳೂರು ನಗರ ಪೂರ್ವ ವಲಯ ಡಿಸಿಪಿ,  ಅಬ್ದುಲ್ ಅಹದ್- ಕೆಎಸ್‌ಆರ್‌ಟಿಸಿ ಭದ್ರತಾ ಮತ್ತು ಜಾಗ್ರತ ದಳದ ನಿರ್ದೇಶಕ,  ಟಿ. ಶ್ರೀಧರ- ಡಿಸಿಆರ್‌ಇ ಎಸ್‌ಪಿ,  ಟಿ. ಪಿ. ಶಿವಕುಮಾರ್- ಚಾಮರಾಜನಗರ ಎಸ್‌ಪಿ  ದಿವ್ಯಾ ಸಾರಾ ಥಾಮಸ್ – ಮೈಸೂರು ಕೆಪಿಎ…

Read More

ರೈತ ಮತ್ತು ಯೋಧ ದೇಶದ ಎರಡು ಕಣ್ಣುಗಳು: ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಅಭಿಮತ

ರಿಪ್ಪನ್ ಪೇಟೆ :  ದೇಶಕ್ಕೆ ಅನ್ನ ಕೊಡುವ ರೈತ ಹಾಗೂ ದೇಶದ ಗಡಿಯನ್ನು ಕಾಯುವ ಯೋಧ ಇಬ್ಬರೂ ದೇಶದ ಎರಡು ಕಣ್ಣುಗಳಿದ್ದಂತೆ ಎಂದು ಮಳಲಿ ಮಠದ ಡಾ. ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಅಭಿಪ್ರಾಯಿಸಿದ್ದಾರೆ.   ಪ್ರತಿವರ್ಷದಂತೆ ಗಣರಾಜ್ಯೋತ್ಸವದಂದು ರಿಪ್ಪನ್ ಪೇಟೆಯ ಮಾಜಿ ಸೈನಿಕರಾದ ವೀರಭದ್ರಪ್ಪ ಬೆಳವಿಗಿ ಅವರ ನಿವಾಸದಲ್ಲಿ ಇಷ್ಟಲಿಂಗಪೂಜೆಯನ್ನು ನೆರವೇರಿಸಿ ಅವರು ಆಶೀರ್ವಚನ ನೀಡಿದರು.  ಭಾರತ ದೇಶ ಈ ಹಿಂದಿನಿಂದಲೂ ಯೋಗಿಗಳನ್ನು ಗೌರವಿಸಿಕೊಂಡು ಬಂದಿದೆ. ಅಂತೆಯೇ ಯೋಗಿಗಳ ಜೊತೆಗೆ ಯೋಧರನ್ನು ಗೌರವಿಸುವ ಅವಶ್ಯಕತೆ ಈ ಹಿಂದೆಂದಿಗಿಂತಲೂ ಇಂದು…

Read More

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಇಬ್ಬರು ಸಾವು

ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಂದು ಮುಂಜಾನೆ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಡೈರಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಬೆಳ್ಳಂಬೆಳಗ್ಗೆಯೇ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ದಾಟಿ ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ…

Read More

ಕರುಣೆಯಿಲ್ಲದ ಗ್ರಾಮಾಡಳಿತ : 25 ವರ್ಷಗಳಿಂದ ಆಶ್ರಯ ಮನೆಗಾಗಿ ಬಡ ಮಹಿಳೆಯೊಬ್ಬರ ಅಲೆದಾಟ

ಗ್ರಾಮೀಣ ಭಾಗದ ಬಡ ಜನತೆ ಹಾಗೂ ನಿರ್ಗತಿಕರು ತಮ್ಮ ಸ್ವಂತ ವಾಸದ ಮನೆಯಲ್ಲಿ ಬದುಕಲಿ ಎಂಬ ಸದುದ್ದೇಶದಿಂದ ಸರಕಾರ ಆಶ್ರಯ ಯೋಜನೆ ಜಾರಿಗೊಳಿಸಿದ್ದರು ಸಹ ಗ್ರಾಮಾಡಳಿತ ನಿರ್ಲಕ್ಷದಿಂದ ಆಶ್ರಯ ಮನೆಗಾಗಿ ಕಳೆದ 25 ವರ್ಷಗಳಿಂದ ಮಹಿಳೆಯೊಬ್ಬರಿಗೆ ಅಲೆದಾಡಿಸುತ್ತಿದೆ. ಹುಂಚ ಹೋಬಳಿಯ ಅಳಲೆ ಕೊಪ್ಪ ಗ್ರಾಮದ  ಮಹಿಳೆ ಇಂದಿರಾ ಎಂಬುವರು ಸಾವಿರಾರು ಬಾರಿ ಗ್ರಾಮಪಂಚಾಯತಿಗೆ ಅಲೆದರು ಸಹ ಅಲ್ಲಿನ ಗ್ರಾಮಾಡಳಿತ ಇದುವರೆಗೂ ಬಡ ಮಹಿಳೆಯ ಮೇಲೆ ಯಾಕೋ ಕರುಣೆಯನ್ನು ತೋರಿಸಿಲ್ಲ. ಸರ್ಕಾರ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ಗ್ರಾಮಾಡಳಿತದ ಜವಾಬ್ದಾರಿ…

Read More

ಗಣ ರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅವಮಾನ : ಶೂ ಧರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ದೈಹಿಕ ಶಿಕ್ಷಕ

ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ನೊಬ್ಬನು ಧ್ವಜಾರೋಹಣ ದಿನದಂದೇ ರಾಷ್ಟ್ರಧ್ವಜಕ್ಕೆ ಶೂ ಧರಿಸಿ ಅವಮಾನ ಮಾಡಿದ್ದಾರೆ. ಬೆಳ್ಳೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ರಾದ ಅಪ್ಪಾ ಸಾಹೇಬ್ ದರಿ ಗೌಡಾ ಎಂಬುವವರು ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಸಮಾರಂಭದಲ್ಲಿ ಶೂ ಧರಿಸಿ ಧ್ವಜಾರೋಹಣ ಮಾಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು ಇಂದು ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ  ಧ್ವಜಾರೋಹಣ…

Read More

ಕೊರೊನಾ ಹಿನ್ನಲೆ ಕೆಂಚನಾಲ ಮಾರಿಕಾಂಬಾ ಜಾತ್ರೆ ಸರಳ ಆಚರಣೆ :

ರಿಪ್ಪನ್ ಪೇಟೆ: ಇತಿಹಾಸ ಪುರಾಣ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ಬೇಸಿಗೆಯ ಜಾತ್ರೆ ಸರಳವಾಗಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಧಾರ್ಮಿಕ ಕಾರ್ಯಗಳನ್ನು ಸರಳವಾಗಿ ಆಚರಿಸಲು ಅನುಮತಿ ದೊರೆತ ಹಿನ್ನೆಲೆಯಲ್ಲಿ ಕೇವಲ ಪೂಜಾ ಕಾರ್ಯಕ್ರಮವನ್ನು ಮಾತ್ರ ನೆರವೇರಿಸಲಾಯಿತು. ಬೆಳಿಗ್ಗೆಯಿಂದಲೇ ಕೇವಲ ಬೆರಳೆಣಿಕೆಯಷ್ಟು ಭಕ್ತರು ಕೋವಿಡ್ ನಿಯಮಕ್ಕನುಸಾರವಾಗಿ ದೇವಾಲಯಕ್ಕೆ ಆಗಮಿಸಿ ದೇವಾಲಯದ ಹೊರ ನಿಂತು ದೇವಿಯ ಆಶೀರ್ವಾದವನ್ನು ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ…

Read More

ರಿಪ್ಪನ್ ಪೇಟೆಯಲ್ಲಿ ‘ಗ್ರಾಮ ಒನ್‌’ ಕೇಂದ್ರಕ್ಕೆ ಚಾಲನೆ : ಒಂದೇ ಸೂರಿನಡಿ ಸಿಗಲಿದೆ 750 ಸರ್ಕಾರಿ ಸೇವೆಗಳು..!!

ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು ಗ್ರಾಮಗಳ ಮಟ್ಟದಲ್ಲೇ ‘ಗ್ರಾಮ ಒನ್‌’ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು,ಇದರ ಅಂಗವಾಗಿ ರಿಪ್ಪನ್ ಪೇಟೆ ಶಿವಮೊಗ್ಗ ರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಯ ಮುಂಭಾಗ ಗ್ರಾಮ ಒನ್ ಕೇಂದ್ರವನ್ನು ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಜನರು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರಕಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಒನ್‌…

Read More