ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಸುತ್ತಮುತ್ತಲಿನ  ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.  ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ…

Read More

ಪದ್ಮ ಪ್ರಶಸ್ತಿಗಳು ಪ್ರಕಟ : ಜನರಲ್ ಬಿಪಿನ್ ರಾವತ್ ಗೆ ಮರಣೋತ್ತರ ಪದ್ಮ ವಿಭೂಷಣ : ಗುಲಾಂ ನಬಿ ಅಜಾದ್,ಸತ್ಯ ನಾದೆಲ್ಲಾ ಸೇರಿದಂತೆ ಅನೇಕರಿಗೆ ಒಲಿದ ಪದ್ಮ ಪ್ರಶಸ್ತಿ

ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವ ದಿನಾಚರಣೆಯಂದು ಪ್ರತಿ ವರ್ಷ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜನರಲ್ ಬಿಪಿನ್ ರಾವತ್ ಅವರಿಗೆ ಪದ್ಮವಿಭೂಷಣ ಸೇರಿದಂತೆ ಸುರಂಗ ಕೊರೆದು ಕೃಷಿ ಭೂಮಿಗೆ ನೀರು ಹರಿಸುವ ಸಾಧನೆ ತೋರಿದ್ದ ಬಂಟ್ವಾಳ ತಾಲೂಕಿನ ವಿಟ್ಲದ ಪ್ರಗತಿಪರ ಕೃಷಿಕ ಕೇಪು ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮಶ್ರೀ…

Read More

ರಿಪ್ಪನ್ ಪೇಟೆ ಯಲ್ಲಿ ರೋಟರಿ ಭವನ ಉದ್ಘಾಟನೆ :

 ರಿಪ್ಪನ್ ಪೇಟೆ : ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು ರೋಟರಿಯ ಮೂಲ ಉದ್ದೇಶ ಸಮಾಜ ಸೇವೆಯಾಗಿದೆ. ಆರೋಗ್ಯ ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ  ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ರೋಟರಿ 31 82ರ ಜಿಲ್ಲಾ ಗವರ್ನರ್ ಎಂ ಜಿ ರಾಮಚಂದ್ರಮೂರ್ತಿ ಹೇಳಿದರು.  ರಿಪ್ಪನ್ ಪೇಟೆ ಯಲ್ಲಿ ನೂತನವಾಗಿ ನಿರ್ಮಾಣವಾದ ರೋಟರಿ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು  ಸಮಾಜಸೇವೆಯ ಮೂಲಕ ಪ್ರತಿಯೊಬ್ಬರೂ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು ಎಂಬುದಕ್ಕೆ ರೋಟರಿ ಸಂಸ್ಥೆಯ ಕಾರ್ಯವೈಖರಿಗಳು ಉತ್ತಮ ಉದಾಹರಣೆಗಳಾಗಿವೆ. ಮಾನವ ಜಗತ್ತಿನಿಂದ ಪೋಲಿಯೋ…

Read More

ರಿಪ್ಪನ್ ಪೇಟೆ ಯಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಮಹಿಳೆಯರಿಗೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರ :

ರಿಪ್ಪನ್ ಪೇಟೆ : ಮಹಿಳೆಯರು ಮತ್ತು ಯುವತಿಯರು ಬದುಕು ಕಟ್ಟಿಕೊಳ್ಳಲು ಮತ್ತು ಸಾವಲಂಬಿಯಾಗಿ ಸಮಾಜದಲ್ಲಿ ಜೀವನ ನಡೆಸಲು ವೃತ್ತಿ ಕೌಶಲ್ಯದ ಸ್ವಯಂ ಉದ್ಯೋಗದ   ತರಬೇತಿ ಪಡೆದುಕೊಳ್ಳುವುದು ಅವಶ್ಯಕ ಎಂದು ಲೀಲಾ ಶಂಕರ್ ಹೇಳಿದರು.  ಪಟ್ಟಣದ ತೀರ್ಥಳ್ಳಿ ರಸ್ತೆಯ ಭವನದಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಪ್ರಾರಂಭಿಸಲಾಗಿರುವ ಟೈಲರಿಂಗ್. ಬ್ಯೂಟಿಷಿಯನ್ ಸೇರಿದಂತೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರದಲ್ಲಿ  ಅಜಾದ್ ಕಿ ಅಮೃತಮಹೋತ್ಸವ ಅಂಗವಾಗಿ ಮಹಿಳೆಯರಿಗೆ ಮತ್ತು ಯುವತಿಯರಿಗಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದವರಿಗೆ ಪ್ರಶಸ್ತಿ…

Read More

ವಿದ್ಯಾರ್ಥಿಗಳಿಗೆ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ :

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36…

Read More

ಸಾಗರ: ನಿಗೂಢವಾಗಿ ಕಣ್ಮರೆಯಾಗಿದ್ದ “”ಪ್ರಕಾಶ್ ಟ್ರಾವೆಲ್ಸ್” ಮಾಲೀಕ ಶವವಾಗಿ ಪತ್ತೆ! ನಿಜಕ್ಕೂ ಇದು ಆತ್ಮಹತ್ಯೆಯೇ…? “ಪಟಗುಪ್ಪೆ” ಸುತ್ತಾ, ಈಗ ಅನುಮಾನದ ಹುತ್ತ…!

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ರವರ ಅಳಿಯ ಕಾಫೀ ಡೇ ಸಿದ್ಧಾರ್ಥ್ ಆತ್ಮಹತ್ಯೆಯ ಪ್ರಕರಣದಂತೆಯೇ ಸಾಗರದ ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ರವರ ನಿಗೂಢ ನಾಪತ್ತೆ ಪ್ರಕರಣವೂ ಸಹ ನೋಡಲು ಒಂದೇ ರೀತಿಯಾಗಿ ಕಾಣುತ್ತಿದೆ! ಯಾಕಂದ್ರೇ, ಎಲ್ ಎನ್ ಟಿ ಇನ್ನಿತರೆ ತೀರಾ ಟಾರ್ಚರ್ ಕೊಡುವ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮಾಡಿಕೊಂಡಿದ್ದ ಸಿದ್ಧಾರ್ಥ್ ರವರು ದಿಕ್ಕೇ ಕಾಣದಂತಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು, ಇದೇ ಪ್ರಕರಣದಂತೆಯೆ ಪ್ರಕಾಶ್ ರವರು ಸಹ ಸಾಲ ಸೋಲಕ್ಕೆ ಅಂಜಿ…

Read More

ರಿಪ್ಪನ್ ಪೇಟೆಯಲ್ಲಿ ನೂತನ ಪುರುಷರ “ಬ್ಲ್ಯಾಕ್ ಅಂಡ್ ವೈಟ್” ಮೆನ್ಸ್‌ವೆರ್ ಶುಭಾರಂಭ

ರಿಪ್ಪನ್ ಪೇಟೆ : ಪುರುಷರ ಅಪೂರ್ವ ಬಟ್ಟೆಗಳ ಸಂಗ್ರಹ ಹೊಂದಿರುವ ನೂತನ ‘ಬ್ಲ್ಯಾಕ್ ಅಂಡ್ ವೈಟ್’ ವಿಸ್ತೃತ ಮಳಿಗೆಯು ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಇರುವ ಮಳಿಗೆಯಲ್ಲಿ ಶುಭಾರಂಭಗೊಂಡಿತು. ಇಂದು ಬೆಳಿಗ್ಗೆ ನಡೆದ ಉಧ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುರೇಶ್ ಸಿಂಗ್, ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ‌ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್,ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್,ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ,ಆಸೀಫ಼್ ಭಾಷಾಸಾಬ್,ನಿರೂಪ್ ಕುಮಾರ್ ಹಾಗೂ ಇನ್ನಿತರ ಮುಖಂಡರು ಪಾಲ್ಗೊಂಡು ನೂತನ…

Read More

ಸಚಿವ ಕೆ ಎಸ್ ಈಶ್ವರಪ್ಪ ಕೈ ತಪ್ಪಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ : ನೂತನ ಉಸ್ತುವಾರಿಯನ್ನಾಗಿ ಗೌಡರನ್ನು ನೇಮಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ ಕೋವಿಡ್ ಉಸ್ತುವಾರಿ ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದ್ದು ಶಿವಮೊಗ್ಗ ಜಿಲ್ಲೆ ಸಚಿವ ಕೆ ಎಸ್ ಈಶ್ವರಪ್ಪರವರ ಕೈ ತಪ್ಪಿದೆ. ಈಶ್ವರಪ್ಪನವರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಹೊಣೆ ಹೊರಿಸಲಾಗಿದೆ.ಹಾಗೇಯೆ ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ‌.ಸಿ ನಾರಾಯಣ್ ಗೌಡರಿಗೆ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ. ಇಲ್ಲಿಯವರೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದರು. ಇನ್ಮುಂದೆ ಅವರು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ…

Read More

ಶವವಾಗಿ ಪತ್ತೆಯಾದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ : ಸತತ ಮೂರು ದಿನಗಳ ಕಾರ್ಯಾಚರಣೆ ನಂತರ ಪತ್ತೆ

ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲಿಕ ಪ್ರಕಾಶ್ ರವರ ಶವ ಕೊನೆಗೂ ಪಟಗುಪ್ಪ ಹೊಳೆಯಲ್ಲಿ  ಪತ್ತೆಯಾಗಿದೆ. ಕಳೆದ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಪ್ರಕಾಶ್,ಶನಿವಾರ ಅವರ ಮೊಬೈಲ್ ಹಾಗೂ ಕಾರು ಪಟಗುಪ್ಪೆ ಸೇತುವೆ ಬಳಿ ಪತ್ತೆಯಾಗಿದ್ದವು.ಕೂಡಲೇ ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದ ಅಗ್ನಿಶಾಮಕದಳ ಹಾಗೂ ಮುಳುಗು ತಜ್ಞರಿಂದ ಶೋಧ ಕಾರ್ಯ ನಡೆದಿತ್ತು.ಆದರೆ ಮೂರು ದಿನ ಸತತವಾಗಿ ಶೋಧ ಕಾರ್ಯ ನಡೆಸಿದರು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳ್ಳಗ್ಗೆ ಪ್ರಕಾಶ್ ಅವರ ಶವ ಪಟಗುಪ್ಪೆ ಹೊಳೆಯಲ್ಲಿಯೇ ಪತ್ತೆಯಾಗಿದೆ. ಅವರ ಹಿತೈಷಿಗಳು ಮತ್ತು ಕುಟುಂಬಸ್ಥರು ಈ ಪ್ರಕರಣದ ಹಿಂದೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಹೆಚ್ಚು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ 9 ಕಾಲೇಜು 4 ಶಾಲೆಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಹೆಚ್ಚಳದ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಒಂಬತ್ತು ಕಾಲೇಜುಗಳು ಹಾಗೂ ನಾಲ್ಕು ಶಾಲೆಗಳಿ ರಜೆ ಘೋಷಿಸಲಾಗಿದೆ. ಮಕ್ಕಳಲ್ಲಿ ಕೊರೋನ ಹೆಚ್ಚಳವಾದರೆ ಕ್ಲಸ್ಟರ್ ರೀತಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೊರೋನ ಪ್ರಗತಿ ಪರಿಶೀಲನ ಸಭೆಯಲ್ಲಿ ಸಚಿವ ಈಶ್ವರಪ್ಪ ಇಂದು ಸಂಜೆ ಯಾವ ಯಾವ ಶಾಲೆಗಳು ನಾಳೆ ರಜೆ ಘೋಷಿಸಲಿವೆ ಎಂದು ತಿಳಿಸಿದ್ದರು. ಅದರಂತೆ ರಾಗಿಗುಡ್ಡದ ಅಂಬೇಡ್ಕರ್ ವಸತಿ ಶಾಲೆ, ಮುರಾರ್ಜಿ ಶಾಲೆ, ಮುರಾರ್ಜಿ ಕಾಲೇಜು, ತೀರ್ಥಹಳ್ಳಿಯ ಬಸವಾನಿ,…

Read More