Headlines

ತೀರ್ಥಹಳ್ಳಿ : ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು !

ತೀರ್ಥಹಳ್ಳಿ :  ನದಿಯನ್ನು ದಾಟುವಾಗ ಆಯತಪ್ಪಿ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪಿದ ಘಟನೆ ತಾಲೂಕಿನ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.  ಮೃತಪಟ್ಟ ಮಹಿಳೆಯನ್ನು ಜಸೋಪ್ರಿನ್ ಮಚಾದೋ (36) ಎಂದು ಗುರುತಿಸಲಾಗಿದೆ. ಮಗನೊಂದಿಗೆ ಅಂಗಡಿಗೆ ಹೋಗಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ವರದಿ : ಪ್ರಶಾಂತ್ ಮೇಗರವಳ್ಳಿ

Read More

ಮೇಗರವಳ್ಳಿ: ಲಸಿಕಾಕರಣವೇ ಮುಳುವಾಗುವ ಸಾಧ್ಯತೆ..!!

ಮೇಗರವಳ್ಳಿ: ಇಂದು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೪೫ ವರ್ಷ ಮೇಲ್ಪಟ್ಟವರಿಗೆ 2 ನೆಯ ಡೋಸ್ ಲಸಿಕಾ ಅಭಿಯಾನ ನಡೆಯಿತು..  ಬೆಳಿಗ್ಗೆ 6 ಗಂಟೆಯಿಂದ 9 ಗಂಟೆಯ ವರೆಗೆ ನೂರಕ್ಕೂ ಹೆಚ್ಚು ಜನ ಬಂದು ಜಮಾಯಿಸಿದ್ದರು. ಆಸ್ಪತ್ರೆಯ ಮುಂಬಾಗದಲ್ಲಿರುವ ಚಿಕ್ಕ ಸ್ಥಳದಲ್ಲಿ ಸೇರಿದ್ದ ನೂರಾರು ಜನರಿಗೆ ಸಾಮಾಜಿಕ ಅಂತರದ ಪರಿವೇ ಇರಲಿಲ್ಲ. ಕೇವಲ 50 ಲಸಿಕೆಗಳು ಸರಬರಾಜಾಗಿತ್ತು ಆದ್ದರಿಂದ ಸಾಮಾನ್ಯವಾಗಿ ನೂಕುನುಗ್ಗಲಿನ ವಾತಾವರಣ ಸೃಷ್ಟಿಯಾಯಿತು. 9 ಗಂಟೆಗೆ ಹಾಜರಾದ ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯ ಬಾಗಿಲು ತೆರೆಯಲು ಹರಸಾಹಸ…

Read More

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು  ಭಾರಿ ಮಳೆ ಮತ್ತು ಗಾಳಿಗೆ ಜಾನುವಾರು ಕೊಟ್ಟಿಗೆ ಕುಸಿದು ಬಿದ್ದು ಒಂದು ಎಮ್ಮೆ ಸಾವನ್ನಪ್ಪಿ ಇನ್ನೆರಡು ಎಮ್ಮೆಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕೆರೆಹಳ್ಳಿಯಲ್ಲಿ ನಡೆದಿದೆ.  ಕೆರೆಹಳ್ಳಿ ಗ್ರಾಮದ ಶಿವಾಜಿರಾವ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆ ಭಾರಿ ಮಳೆ ಗಾಳಿಗೆ ಕುಸಿದು ಬಿದ್ದು ಎಮ್ಮೆಯೊಂದು ಸಾವನ್ನಪೊಇರುವ ಘಟನೆ ನಡೆದಿದೆ.  ಶನಿವಾರ ಬೆಳಗಿನಜಾವ ನಾಲ್ಕು ಗಂಟೆಗೆ ಈ ಘಟನೆ ಸಂಭವಿಸಿದ್ದು…

Read More

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…

Read More

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ ಹೊಸನಗರ(Hosanagara) ತಾಲೂಕಿನ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 25 ವರ್ಷದ ಯುವಕನಿಗೆ ಶಿವಮೊಗ್ಗ(shivamogga)ದ ಫಾಸ್ಟ್‌ಟ್ರ್ಯಾಕ್ ಸ್ಪೆಷಲ್ ಕೋರ್ಟ್‌ 20 ವರ್ಷಗಳ ಕಠಿಣ ಸಜೆ ವಿಧಿಸಿದೆ. ಹೊಸನಗರ ತಾಲೂಕು ಗ್ರಾಮ ಒಂದರಲ್ಲಿ 2022ರಲ್ಲಿ ಆರೋಪಿ ಯುವಕ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.ಇದರಿಂದ ಬೇಸತ್ತ ಬಾಲಕಿ ಮನೆಯವರಿಗೆ ತಿಳಿಸಿದ್ದಳು. ಇದಾದ ಬಳಿಕ ಬಾಲಕಿ ಹೊಸನಗರ…

Read More

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ ಆನಂದಪುರ : ನಿಲ್ಲಿಸಿದ್ದ ಕಾರಿಗೆ ಹಿಂಬಂದಿಯಿಂದ ಇನ್ನೊಂದು ಕಾರು ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಆನಂದಪುರದ ಹಳೇ ಪೊಲೀಸ್ ಉಪಠಾಣೆ ಬಳಿ ನಡೆದಿದೆ. ಆನಂದಪುರಂ ಹಳೇ ಉಪಠಾಣೆಯ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಹೋಡಾ ಅಮೇಜ್ ಕಾರನ್ನ ಮರದ ಕೆಳಗೆ ನಿಲ್ಲಿಸಿದ್ದರು ಈ ವೇಳೆ ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಐ10 ಕಾರು ನಿಲ್ಲಿಸಿದ್ದ ಅಮೇಜ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಉರುಳಿಬಿದ್ದಿದೆ. ಅದೃಷ್ಟವಶಾತ್ ಐ೧೦ ಕಾರಿನಲ್ಲಿದ್ದ ಇಬ್ಬರು…

Read More

ಸಿಡಿಲು ಬಡಿದು ಮಹಿಳೆ ಸಾವು|lightning

ಜಿಲ್ಲೆಯಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಶಿವಮೊಗ್ಗ ನಗರದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ವಾಸಿಸುತ್ತಿದ್ದಂತ ಲಕ್ಷ್ಮೀಬಾಯಿ(28) ಎಂಬುವರು ಇಂದು ಕುರಿಗಳಿಗೆ ಮೇವು ತರಲು ಹೋಗಿದ್ದರು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಮರಗಳು ಬಿದ್ದು ರಸ್ತೆ ಸಂಚಾರ ಕೂಡ ಬಂದ್ ಆಗಿರುವಂತ ಘಟನೆ ನಡೆದಿದೆ. ಈ ವಿಷಯ ತಿಳಿದಂತ ವಿನೋಬ ನಗರ…

Read More

ಇಂದು ಶಾಸಕ ಹರತಾಳು ಹಾಲಪ್ಪರವರ 61ನೇ ಹುಟ್ಟುಹಬ್ಬ – ಶಾಸಕರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಇಡೀ ಕ್ಷೇತ್ರದ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಜನಾನುರಾಗಿ. ನೇರ ನಡೆ-ನುಡಿಯ ವ್ಯಕ್ತಿತ್ವದ ಹರತಾಳು…

Read More

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ :

ಹೊಸನಗರ ತಾಲೂಕಿನ ಎಂ.ಗುಡ್ಡೇಕೊಪ್ಪದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹೆಚ್ಚುವರಿ ಪ್ರಭಾರ ಪಿಡಿಒ ಮುರುಗೇಶ್ ಎಸಿಬಿ ಬಲೆಗೆ ಬಿದ್ದಿದ್ದಾನೆ. ಇಂದು ಬೆಳಿಗ್ಗೆ ತಾಲೂಕಿನ ಕೋಡೂರಿನ ಕುಸಗುಂಡಿಯ ಸಿದ್ದಗಿರಿ ನಿವಾಸಿ ಸತೀಶ್ ರವರ ಬಳಿ ಪಿಡಿಒ ಮುರುಗೇಶ್ 30 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಬಲೆಗೆ‌ಬಿದ್ದಿದ್ದಾನೆ. ಸತೀಶ್ ರವರು ತಮ್ಮ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗಕ್ಕೆ ಪ್ಲಾನ್ ಅಪ್ರೂವಲ್, ಮುಟೇಷನ್ ಮತ್ತು‌ 9  ಮತ್ತು 11 ಅರ್ಜಿ ಅನುಮತಿ ಮಾಡಿಕೊಡಲು ಎಂ.ಗುಡ್ಡೇಕೊಪ್ಪಕ್ಕೆ ಅರ್ಜಿ ಸಲ್ಲಿಸಿದ್ದರು. ಸತೀಶ್…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More