Headlines

Ripponpet | ನಾಯಕ್ ಜನರಲ್ ಸ್ಟೋರ್ಸ್ ಮಾಲೀಕ ಮಾಧವ ನಾಯಕ್‌ ನಿಧನ

ರಿಪ್ಪನ್ ಪೇಟೆ : ಪಟ್ಟಣದ ಜಿ.ಎಸ್‌.ಬಿ ಸಮಾಜದ ಮಾಜಿ ಅಧ್ಯಕ್ಷರು ಹಾಗೂ ನಾಯಕ್ ಜನರಲ್ ಸ್ಟೋರ್ಸ್ ಇದರ ಮಾಲೀಕರಾದ ಮಾಧವ ನಾಯಕ್ (85) ಇಂದು ಬೆಳಿಗ್ಗೆ ವಯೋಸಹಜ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರನನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಪಟ್ಟಣದ ಗಾಂಧಿನಗರದ ಹಿಂದೂ ರುದ್ರ ಭೂಮಿಯಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ .

Read More

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ | Malali shri

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ ಬದುಕಿನಲ್ಲಿ ಬಂದದೆಲ್ಲ ಬರಲಿ ಎನ್ನುವುದು ಸಹಜ ಸೂತ್ರ.ಏನು ಬರಬೇಕು ಎಂದು ತೀರ್ಮಾನಿಸಿ ಸೃಷ್ಠಿಕೊಳ್ಳುವುದು  ನಿಜವಾದ ಸಾಧನೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಸಮೀಪದ ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಶ್ರೀ ಮಹಾಲಿಂಗೇಶ್ವರ ಶ್ರೀಬಸವಣ್ಣ ದೇವರುಗಳ ಪುನರ್ ಪ್ರತಿಷ್ಟಾಪನಾ ಧರ್ಮ ಸಮಾರಂಭದ…

Read More

Ripponpete | ರಸ್ತೆ ಸುರಕ್ಷತಾ ನಿಯಮ ಪಾಲಿಸಿ : ವೀರೇಶ್

ರಸ್ತೆ ಸುರಕ್ಷತಾ ನಿಯಮ ಪಾಲಿಸಿ :  ವೀರೇಶ್  ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆಯಿಂದ ಅಪಘಾತಗಳು ಕಡಿಮೆಯಾಗಿ ಅಮೂಲ್ಯ ಜೀವಗಳು ಉಳಿಯಲಿವೆ ಎಂದು ಸಾಗರ ARTO ವೀರೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತ ಬಳಗ, ಎನ್‌ಎಸ್‌ಎಸ್ ಘಟಕ, ಪೊಲೀಸ್ ಠಾಣೆ ರಿಪ್ಪನ್‌ಪೇಟೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಇವರ ಸಂಯುಕ್ತಾಶ್ರಯದಲ್ಲಿ ‘ವಾಹನ ಚಾಲನಾ ಪರವಾನಗಿ ಅರಿವು’ ಮತ್ತು ಎಲ್‌ಎಲ್‌ಆರ್ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿ ಸುರಕ್ಷತಾ…

Read More

ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಓರ್ವನ ಬಂಧನ|arrested

ರಿಪ್ಪನ್‌ಪೇಟೆ : ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಅಪರೂಪದ ವನ್ಯ ಜೀವಿಯಾದ ಭಾರತೀಯ ಫ್ಲಾಪ್‌ಶೆಲ್ ಆಮೆ( ಲಿಸ್ಸೆಮಿಸ್ ಪಂಕ್ಟೇಟ್) ಸರೀಸೃಪವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿ ಚಂದ್ರಹಾಸ್ ಎಂಬಾತನನ್ನು ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಸಮೀಪದಲ್ಲಿ ಬಂಧಿಸಿ ವನ್ಯಜೀವಿಯನ್ನು ರಕ್ಷಿಸಲಾಗಿದೆ. ಭಾರತೀಯ ಫ್ಲಾಪ್‌ಶೆಲ್ ಆಮೆಯನ್ನು ರಕ್ಷಣೆ (ಲಿಸ್ಸೆಮಿಸ್ ಪಂಕ್ಟೇಟ್)ಮಾಡಿ   ವನ್ಯಜೀವಿ ಸಂರಕ್ಷಣಾ…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ಮಹಿಳಾ ಸಾಧಕಿ ಹೊಸನಗರದ ಸೀಮಾ ಕಿರಣ್ ರವರಿಗೆ ರಾಜ್ಯಮಟ್ಟದ “ಚೈತನ್ಯ ಶ್ರೀ 2024” ಪ್ರಶಸ್ತಿ…!

ಮಹಿಳಾ ಸಾಧಕಿ ಹೊಸನಗರದ ಸೀಮಾ ಕಿರಣ್ ರವರಿಗೆ ರಾಜ್ಯಮಟ್ಟದ “ಚೈತನ್ಯ ಶ್ರೀ 2024” ಪ್ರಶಸ್ತಿ…! ಹೊಸನಗರ ತಾಲ್ಲೂಕಿನಲ್ಲಿ ಕಳೆದ ಹತ್ತು ವರ್ಷಗಳಿಂದ ನೊಂದವರ ಧ್ವನಿಯಾಗಿ ಸಮಾಜ ಸೇವೆ ಮೂಲಕ ತಮ್ಮನ್ನು ಗುರುತಿಸಿ ಕೊಂಡಿರುವ.ವೃತ್ತಿಯಲ್ಲಿ ಬ್ಯೂಟೀಷಿಯನ್ ಆಗಿ ಪ್ರವೃತ್ತಿಯಲ್ಲಿ ಸಂಘಟಕಿ ಹಾಗೂ ಹೋರಾಟಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಹೊಸನಗರದ ಸೀಮಾ ಕಿರಣ್ ರವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರು ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ “ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ…

Read More

ಕಾರಿಗೆ ಅಡ್ಡ ಬಂದ ಹಾವು ತಪ್ಪಿಸಲು ಹೋಗಿ ಚಾನೆಲ್ ಗೆ ಇಳಿದ ಕಾರು : ಒಬ್ಬರ ಸಾವು

ಕಾರಿಗೆ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ತುಂಗಾ ಚಾನೆಲ್ ಗೆ ಕಾರು ಬಿದ್ದು  ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗಿನ ಜಾವ 2 ಗಂಟೆಯ ಸಮಯದಲ್ಲಿ ಸಂಭವಿಸಿದೆ. ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಸುಷ್ಮ.ಇ(28) ಮೃತ ದುರ್ಧೈವಿ. ಸುಷ್ಮ ಮತ್ತು ಪತಿ ಚೇತನ್ ಕುಮಾರ್ ತುಮಕೂರಿನಲ್ಲಿರುವ ಅತ್ತೆಗೆ (ಚೇತನ್ ತಾಯಿಗೆ) ಎದೆ ನೋವು ಕಾಣಿಸಿಕೊಂಡಿದ್ದರಿಂದ ತುಮಕೂರಿಗೆ ಕಾರಿನಲ್ಲಿ…

Read More

ಆನಂದಪುರದ ಅಂಗಡಿಗಳಲ್ಲಿ ಸರಣಿ ಕಳ್ಳತನ – ಸಿಸಿಟಿವಿ ಯಲ್ಲಿ ದೃಶ್ಯ ಸೆರೆ| theft

ಸಾಗರ ತಾಲೂಕಿನ ಆನಂದಪುರದ ಕೆಲವು ಅಂಗಡಿಗಳಲ್ಲಿ ಮಂಗಳವಾರ ತಡರಾತ್ರಿ ಸರಣಿ ಕಳ್ಳತನವಾದ ಘಟನೆ ನಡೆದಿದೆ. ಆನಂದಪುರದ ಬಿ ಎಚ್ ರಸ್ತೆಯಲ್ಲಿರುವ ಹೋಲ್ ಸೇಲ್ ಅಂಗಡಿಗಳಾದ ಮಾರುತಿ ಜನರಲ್ ಸ್ಟೋರ್. ಸಾಗರ್ ಜನರಲ್ ಸ್ಟೋರ್. ಲಿಬರಟಿ ಸ್ಟೋರ್ ಹಾಗೂ ಶ್ರೀನಿವಾಸ್ ಜನರಲ್ ಸ್ಟೋರಿನ ಬೀಗಗಳನ್ನ ಮುರಿದು ಕಳ್ಳತನ ನಡೆದಿದೆ. ಮಧ್ಯ ರಾತ್ರಿಯ ಸಮಯದಲ್ಲಿ ಈ ಕಳ್ಳತನ ನಡೆದಿದ್ದು ಅಂಗಡಿಯ ಮುಂಭಾಗದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಗಳನ್ನು ಸಹ ಬೇರೆ ಕಡೆ ತಿರುಗಿಸುವುದರ ಮೂಲಕ ಕಳ್ಳತನ ನಡೆಸಿ ಅಂಗಡಿಯ ಒಳಗೆ…

Read More

Thirthahalli | ಸಾಲ ಬಾಧೆ ತಾಳಲಾರದೆ ಹೊಟೇಲ್ ಮಾಲೀಕ ಆತ್ಮಹತ್ಯೆ

 ಹೋಟೆಲ್ ಮಾಲೀಕ ನೇಣಿಗೆ ಶರಣು ! ತೀರ್ಥಹಳ್ಳಿ: ಸಾಲದ ಸಂಕಷ್ಟಕ್ಕೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಜ್ಜವಳ್ಳಿಯಲ್ಲಿ ನೆಡೆದಿದೆ. ತಾಲೂಕಿನ ಬೆಜ್ಜವಳ್ಳಿಯ ಅನ್ನಪೂರ್ಣ ಹೋಟೆಲ್ ಮಾಲೀಕರಾದ ಉಮೇಶ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಉಮೇಶ್ ಸಾಲದ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…

Read More