ಗಣೇಶ ಚತುರ್ಥಿ ಆಚರಣೆ ಮಾರ್ಗಸೂಚಿಗೆ ಶಿವಮೊಗ್ಗದ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ:
ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಹಿನ್ನೆಲೆಯಲ್ಲಿ ಸರ್ಕಾರವು ಗಣಪತಿ ಹಬ್ಬ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ತಜ್ಞರ ಸಲಹೆ ಸೂಚನೆ ಮೇರೆಗೆ ಕೆಲ ನಿರ್ಬಂಧ ವಿಧಿಸಲಾಗಿದೆ. ಆದರೆ, ಶಿವಮೊಗ್ಗದಲ್ಲಿ ಸರ್ಕಾರದ ಮಾರ್ಗಸೂಚಿಗೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮನೆ, ದೇವಸ್ಥಾನ, ಸರ್ಕಾರಿ ಹಾಗೂ ಖಾಸಗಿ ಸಾರ್ವಜನಿಕ ಬಯಲು ಪ್ರದೇಶದಲ್ಲಿ ಗಣೇಶ ಪ್ರತಿಷ್ಠಾಪಿಸಿ, ಕನಿಷ್ಠ ಸಂಖ್ಯೆಯ ಜನರೊಂದಿಗೆ ಹಬ್ಬ ಅಚರಿಸಲು ಸರ್ಕಾರ ಸೂಚಿಸಿದೆ. ಇದರ ಜೊತೆಗೆ ನಗರ ಭಾಗದಲ್ಲಿ ವಾರ್ಡ್ಗೆ ಒಂದು ಗಣೇಶನ ಪ್ರತಿಷ್ಠಾಪನೆಗೆ ಸರ್ಕಾರ…


