ಮೃತ ಕಗ್ಗಲಿ ವೀರಭದ್ರಪ್ಪ ಗೌಡ ರವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಶನಿವಾರ ಸ್ವಗೃಹದಲ್ಲಿ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ಮೃತ ಕಗ್ಗಲಿ ವೀರಭದ್ರಪ್ಪ ಗೌಡರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ರೈತ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಕಗ್ಗಲಿ ವೀರಭದ್ರಪ್ಪ ಗೌಡರು 80 ರ ದಶಕದಲ್ಲಿ ರೈತ ಪರ ಹೋರಾಟದಲ್ಲಿ ಧಾರವಾಡ ಹಿಂಡಲಗಾ ಜೈಲಿನಲ್ಲಿ 21 ದಿನ ಜೈಲು ವಾಸ…

Read More

ಬೈಕ್ ಅಪಘಾತ : ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಪುರುದಾಳು ಗ್ರಾಮದ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿ ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತ ಪಟ್ಟಿದ್ದಾನೆ.  ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದರ ಪರಿಣಾಮ ಬೈಕ್ ನಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸುಧನ್ವ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಲೂಕಿನ ಸುಧನ್ವ ಎಂಬ 21 ವರ್ಷದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಪುರುದಾಳು ಗ್ರಾಮದಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ. ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಸ್ನೇಹಿತ ಮನೋಜ್…

Read More

ಅನ್ನದಾತ ಮಾಲೀಕನನ್ನು ಹುಡುಕಿಕೊಡುವಂತೆ ಆಗ್ರಹಿಸಿ ಪ್ರಕಾಶ್ ಟ್ರಾವೆಲ್ಸ್ ಕಾರ್ಮಿಕರಿಂದ ಹೊಸನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ :

ಹೊಸನಗರ:-  ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ಕಳೆದ ಮೂರು ದಿನಗಳಿಂದ ಕಾಣೆಯಾಗಿರುವುದು ಟ್ರಾವೆಲ್ಸ್ ನ ಕಾರ್ಮಿಕರಲ್ಲಿ ಅನುಮಾನಗಳ ಹುತ್ತ ಬೆಳೆದಿದೆ ಅಲ್ಲದೇ ನುಂಗಲಾರದ ತುತ್ತಾಗಿದ್ದು, ಇಂದು ಪಟ್ಟಣದ ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದರ ಮೂಲಕ ಮಾಲೀಕರನ್ನು ಕೂಡಲೇ ಹುಡುಕಿ ಕೊಡುವಂತೆ ಮನವಿ ಮಾಡಿದರು.  ತಮ್ಮ ಕುಟುಂಬದ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿಕ್ಕೂ ಹೆಚ್ಚು  ಜನರಿಗೆ ಅನ್ನದಾತರಾದ ಟ್ರಾವೆಲ್ಸ್ ನ‌ ಮಾಲೀಕರನ್ನು ಕೂಡಲೇ ಪತ್ತೆ ಹಚ್ಚಿಕೊಡಬೇಕೆಂದು ಪ್ರಕಾಶ್ ಟ್ರಾವೆಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಚಾಲಕ,…

Read More

ಪ್ರಕಾಶ್ ಬಸ್ ಮಾಲೀಕರ ಶೋಧ ಕಾರ್ಯಾಚರಣೆ : ಕಾಫ಼ಿ ಡೇ ಸಿದ್ದಾರ್ಥ ಪ್ರಕರಣ ಮರುಕಳಿಸುವ ಆತಂಕದಲ್ಲಿ ಮಲೆನಾಡಿಗರು..!!!!!

ಶುಕ್ರವಾರ ಸಂಜೆ ಸಾಗರದಿಂದನಾಪತ್ತೆಯಾಗಿದ್ದ ಸಾಗರದ ಪ್ರಖ್ಯಾತ ಟ್ರಾವೆಲ್ಸ್ ಕಂಪನಿ ಮಾಲೀಕರಾದ ಪ್ರಕಾಶ್ ರವರ ಕಾರು, ಮೊಬೈಲ್ ಮತ್ತು ಕನ್ನಡಕ ಹೊಸನಗರ ಸಮೀಪದ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿರುವ  ಹಿನ್ನಲೆಯಲ್ಲಿ ಪ್ರಕಾಶ್ ರವರ ಪತ್ತೆಗಾಗಿ ಅಗ್ನಿಶಾಮಕ ದಳ ತನ್ನ ಶೋಧಕಾರ್ಯವನ್ನು ಎರಡನೇ ದಿನಕ್ಕೆ ಮುಂದುವರೆಸಿದೆ. ಸೊರಬದಿಂದ ಒಬಿಎಂ ಬೋಟ್ ನ್ನು ತರಿಸಲಾಗಿದ್ದು ನಾಲ್ವರು ಬೋಟ್ ನಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯ ಮೀನುಗಾರರು ತೆಪ್ಪ ತಂದು ಅದರಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿಯೇ ಅತೀ ಉದ್ದದ ಸೇತುವೆಯಾದ ಪಟಗುಪ್ಪ ಸೇತುವೆ ಇತ್ತೀಚೆಗಷ್ಟೇ…

Read More

ರಾಜ್ಯ ಗೃಹಮಂತ್ರಿಗಳ ಸಾಮ್ರಾಜ್ಯದಲ್ಲಿ ಇದೆಂತಹ ಪರಿಸ್ಥಿತಿ…!!

ರಿಪ್ಪನ್‌ಪೇಟೆ: ಕೋಡೂರು ಮತ್ತು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಂತಪುರ – ಗರ್ತಿಕರೆ ಸಂಪರ್ಕಿಸುವ ಸುಮಾರು 10 ಕಿ.ಮೀ.ಉದ್ದದ ಜಿಲ್ಲಾ ಮುಖ್ಯರಸ್ತೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ರೈತನಾಗರೀಕರು ಓಡಾಡದಂತಾಗಿದ್ದರೂ ಕೂಡಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಸಚಿವರ ಕಣ್ಣಿಗೆ ಇನ್ನೂ ಬಿದ್ದಿಲ್ಲವೊ..! ಎಂಬ ಅನುಮಾನ ಇಲ್ಲಿನ ಜನರನ್ನು ಕಾಡುವಂತಾಗಿದೆ. 1995 ರಲ್ಲಿ ನಬಾರ್ಡ್ ಯೋಜನೆಯಡಿ ಡಾಂಬರೀಕರಣಗೊಂಡ ಶಾಂತಪುರ-ಗರ್ತಿಕೆರೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ರಸ್ತೆಯಲ್ಲಿ ಹೊಂಡಗಳಿದೆಯೋ ಅಥವಾ ಹೊಂಡಗಳಲ್ಲಿ ರಸ್ತೆ…

Read More

ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಸಾವು : ವಿಧಿಯ ಕ್ರೂರತನಕ್ಕೆ ಬಲಿಯಾದ ಪುಟ್ಟ ಕಂದಮ್ಮ

ಸಾಗರ : ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದಲ್ಲಿ ಶನಿವಾರ ಸಂಜೆ ನಡೆದಿದೆ. ಶನಿವಾರ ಸಂಜೆ ಸುಮಾರು 5-00 ಗಂಟೆಯ ಸುಮಾರಿಗೆ ಸಾಗರ ನಗರಸಭೆ ವ್ಯಾಪ್ತಿಯ ಅಣಲೇಕೊಪ್ಪದಲ್ಲಿ ವಾಸವಾಗಿದ್ದ ಮೂರ್ತಿಹಾಗೂ ರಾಜೇಶ್ವರಿ ದಂಪತಿಯ ಎರಡನೆ ಮಗು ಆಟವಾಡುವಾಗ ಆಯಾ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕ್ರಿಶಾ (5) ಮೃತಳಾದ ದುರ್ದೈವಿ.  ಮೂರ್ತಿಹಾಗೂ ರಾಜೇಶ್ವರಿ ದಂಪತಿಗಳುಮೂಲತಃ ಸಾಗರ ತಾಲೂಕಿನ ಹೆಗ್ಗೋಡು ಗ್ರಾ.ಪಂ ವ್ಯಾಪ್ತಿಯ ಹೈತೂರಿನ ಕ್ವಾಗೇರಿರವರಗಿದ್ದಾರೆ. ಮೂರ್ತಿ…

Read More

ಸಾಹಿತ್ಯ ಪರಿಷತ್ತಿನ ಸಂಘಟನೆಗೆ ಒತ್ತು ನೀಡಲು ತೀರ್ಮಾನ :

ಹೊಸನಗರ : ಹೊಸನಗರ ತಾಲೂಕಿನಲ್ಲಿ ಸಾಹಿತ್ಯ ಪರಿಷತ್ತಿನ ಸಂಘಟನೆಗೆ ಒತ್ತು ನೀಡಲು ಕಸಾಪ ತಾಲೂಕು ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ತೀರ್ಮಾನಿಸಿದೆ. ಜನವರಿ 21 ನೇ ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ತಾಲೂಕು ಅಧ್ಯಕ್ಷ ತ.ಮ. ನರಸಿಂಹ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಈ ತೀರ್ಮಾನ ಕೈಗೊಂಡಿದೆ.  ಜಿಲ್ಲಾಧ್ಯಕ್ಷ  ಡಿ ಮಂಜುನಾಥ್ ರವರ ನಿರ್ದೇಶನದಂತೆ ಪರಿಷತ್ತಿನ ಸಂಘಟನೆಗೆ ಪೂರಕವಾಗಿ ಹೋಬಳಿ ಸಮಿತಿಗಳ ರಚನೆ, ಮತ್ತು ಸಂಪನ್ಮೂಲ ಕ್ರೂಢೀಕರಣ, ಹಾಗೂ ದತ್ತಿನಿಧಿ ಕಾರ್ಯಕ್ರಮ ಮತ್ತು ಸದಸ್ಯತ್ವ…

Read More

ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಕೊರೊನಾ ಸೋಂಕು ನಿವಾರಣೆಗಾಗಿ ಶ್ರೀ ಸತ್ಯನಾರಾಯಣ ಪೂಜೆ.

ರಿಪ್ಪನ್ ಪೇಟೆ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ನಿವಾರಣೆಯಾಗಿ ದೇಶದ ಜನತೆ ಉತ್ತಮ ಆರೋಗ್ಯವನ್ನು ಹೊಂದಲಿ ಎಂದು ಪಟ್ಟಣದ ಕಾಲಭೈರವೇಶ್ವರ  ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು  ಸರಳವಾಗಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗ ಸಂಘದ ಅಧ್ಯಕ್ಷ ಅಧ್ಯಕ್ಷೆ ವಾಣಿ ಗೋವಿಂದಪ್ಪ ಗೌಡ ಮಾಧ್ಯಮದವರೊಂದಿಗೆ ಮಾತನಾಡಿ ಕೋವಿಡ್ 19 ರ ಕಾರಣದಿಂದ ದೇಶದಲ್ಲಿ ಕೋಟ್ಯಂತರ ಜನರು ಸೋಂಕಿನಿಂದ ಬಳಲುವಂತಾ ಯಿತು. ಹಾಗೆಯೇ ಲಕ್ಷಾಂತರ ಜನರು ಮರಣವನ್ನು ಹೊಂದಿದರು….

Read More

ಅನಾರೋಗ್ಯ ಹಿನ್ನಲೆ : SSLC ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸನಗರ ಪಟ್ಟಣದ ಮಾರಿಗುಡ್ಡದಲ್ಲಿ ಮನೆಯೊಂದರಲ್ಲಿ ವಾಸವಾಗಿರುವ ತಾಲೂಕಿನ ಅರೋಡಿ ಕೊಡಸೆಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳಾ ರವರ ಪುತ್ರಿ ಶಮಾ ಎಲ್ ಬಂಡಿ (15) ತನ್ನ ತಾಯಿಯನ್ನು ಮಾರ್ನಿಂಗ್ ಕ್ಲಾಸ್ ಡ್ಯೂಟಿಗೆ ಕಳುಹಿಸಿ ಮನೆಗೆ ಬಂದು ನೇಣಿಗೆ ಶರಣಾದ ದುರಂತ ಘಟನೆ ಇಂದು ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಶಮಾ ಪಟ್ಟಣದ ಶ್ರೀರಾಮಕೃಷ್ಣ ವಿದ್ಯಾಲಯದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು ಕಳೆದ ಕೆಲ ಸಮಯದಿಂದ ಆಕೆ ಅನಾರೋಗ್ಯ ಪೀಡಿತಳಾಗಿದ್ದಳು ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿಯ…

Read More

ಪ್ರಕಾಶ್ ಬಸ್ ನ ಮಾಲೀಕರ ಮೊಬೈಲ್ ಹಾಗೂ ಕಾರು ಪಟಗುಪ್ಪ ಸೇತುವೆ ಬಳಿ ಪತ್ತೆ : ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಬಸ್ ಮಾಲೀಕನ ನಡೆ

ಹೊಸನಗರ ಸಮೀಪದ ಪಟಗುಪ್ಪೆ ಸೇತುವೆಯ ಬಳಿ ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿರುವುದು ಹಲವು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರು ಶುಕ್ರವಾರ ಸಂಜೆಯಿಂದಲೇ ಮನೆಯಿಂದ ನಾಪತ್ತೆಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಟಗುಪ್ಪ ಸೇತುವೆಯ ಬಳಿ ನೂರಾರು ಜನರು ಸೇರಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದವರು ಹಾಜರಿದ್ದು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ಪೋಲೀಸರು ಸ್ಥಳಕ್ಕಾಗಮಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More