ಜೈನ ಮುನಿವರ್ಯರ ತತ್ವ ಪಾಲನೆ ಇಂದಿನ ಯುವಸಮೂಹಕ್ಕೆ ಸ್ಪೂರ್ತಿದಾಯಕವಾಗಿರಲಿ – ಡಾ. ಡಿ ವೀರೇಂದ್ರ ಹೆಗ್ಗಡೆ|hombuja
ಅಹಿಂಸಾ ತತ್ವವನ್ನು ಬೋಧನೆ ಮಾಡಿ ಅಹಿಂಸಾ ತತ್ವದಲ್ಲೇ ಧರ್ಮವನ್ನು ಕಟ್ಟಿ ಇಡೀ ಪ್ರಪಂಚಕ್ಕೆ ಸಾತ್ವಿಕ ತತ್ವ ಉಪದೇಶಗಳನ್ನು ನೀಡಿದ ಕೀರ್ತಿ ಜೈನ ಧರ್ಮಕ್ಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜ ಜೈನ ಮಠದಲ್ಲಿ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ ಜಿನ ದತ್ತರಾಯ ಸಭಾ ಮಂಟಪ ಅರ್ಹದ್ದಾಸ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪೂಜ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. 12…