ಅಭಿವೃದ್ಧಿಯನ್ನು ಸಹಿಸದೆ ಪುಕ್ಕಟೆ ಪ್ರಚಾರಕ್ಕಾಗಿ ಪರಿತಪಿಸುತ್ತಿರುವ ಬೇಳೂರು : ಬಿಜೆಪಿ ಅರೋಪ
ರಿಪ್ಪನ್ಪೇಟೆ;-ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೇಸ್ ಪಕ್ಷದ ವಕ್ತಾರ ಗೋಪಾಲಕೃಷ್ಣ ಬೇಳೂರು ಹಾಲಿ ಶಾಸಕ ಹರತಾಳು ಹಾಲಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಪುಕ್ಕಟೆ ಪ್ರಚಾರಕ್ಕಾಗಿ ತಮ್ಮ ಬೆಂಬಲಿಗರೊAದಿಗೆ ಸುಳ್ಳು ಹಾಗೂ ನಿರಾಧಾರ ಅರೋಪ ಮಾಡುತ್ತಿದ್ದಾರೆಂದು ಕೆರೆಹಳ್ಳಿ-ಹುಂಚಾ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ ಅರೋಪಿಸಿದರು. ರಿಪ್ಪನ್ಪೇಟೆ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇತ್ತೀಚೆಗೆ ಸುರಿದ ಭಾರಿಮಳೆಯಿಂದಾಗಿ ಕೆರೆಹಳ್ಳಿ ಹೋಬಳಿಯ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ-ಮಳವಳ್ಳಿ ಕನ್ನೇಹೊಂಡದ ನೀರು ನುಗ್ಗಿ ರಸ್ತೆ ಕೊಚ್ಚಿಹೋಗಿ ಸಾರ್ವಜನಿಕರು ಓಡಾಡದಂತಾಗಿರುವ ಬಗ್ಗೆ…


