ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ : ಶಾಸಕ ಹರತಾಳು ಹಾಲಪ್ಪ ಸಂತಸ
ರಿಪ್ಪನ್ಪೇಟೆ : ರಾಜ್ಯದ ಬಹು ಜನರ ಬೇಡಿಕೆಯಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇದ ಕಾಯ್ದೆಯ 2011 ರ ಕಾಲಂ 2(ಡಿ ) ತಿದ್ದುಪಡಿ ತಂದಿರುವುದು ಬಹಳ ಸಂತಸವಾಗಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹೆಚ್ ಹಾಲಪ್ಪ ಹರತಾಳು ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸಚಿವ ಸಂಪುಟದ ಪರಿಷತ್ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. 192ಎ ಕಾಲಂ ಸ್ಥಗಿತಗೊಳಿಸಿರುವಂಥದ್ದು ಬಹಳ ಖುಷಿಯ ವಿಚಾರ. ಕಾರಣ ಒಂದು…


