Headlines

ಬೀದಿ ನಾಯಿಗಳ ಮಾರಣಹೋಮ:: 150ಕ್ಕೂ ಹೆಚ್ಚು ನಾಯಿಗಳ ಜೀವಂತ ಸಮಾಧಿ

ಶಿವಮೊಗ್ಗ: ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗ್ರಾಮ ಪಂಚಾಯಿತಿಯ ಕಂಬದಾಳು-ಹೊಸೂರು ವ್ಯಾಪ್ತಿಯ ರಂಗನಾಥಪುರದಲ್ಲಿ ನಡೆದಿದೆ.  ತಮ್ಮಡಿಹಳ್ಳಿ ಎಂಪಿಎಂ‌ ಅರಣ್ಯದ ಎಸ್‌ಎಲ್ ನಂಬರ್ 863, 864, 865, 858ರ ಪ್ರದೇಶದಲ್ಲಿ ನಾಯಿಗಳು ಪತ್ತೆಯಾಗಿದ್ದು, ಐದು ದಿನಗಳ ಹಿಂದೆ ನಾಯಿಗಳನ್ನು ಹೂತಿಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಬೀದಿ ನಾಯಿಗಳನ್ನು ಹಿಡಿದು ಜೀವಂತವಾಗಿ ಹೂತಿಡುವ ವೇಳೆ ನಾಯಿಗಳ ಚೀರಾಟ ಕೇಳಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಎನಿಮಲ್ ರೆಸ್ಕ್ಯೂ ಕ್ಲಬ್​ಗೆ ಗ್ರಾಮದ ಯುವಕರು…

Read More

ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಾಸಕ ಬಸವನಗೌಡ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ..!

 ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯದ ಬುದ್ಧಿಜೀವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರ ಪ್ರತಿಕೃತಿ ದಹಿಸುವ ಮೂಲಕ ಯುವಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಬಿಹೆಚ್ ರಸ್ತೆಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಅವರ ಪ್ರತಿಕೃತಿ ದಹಿಸಿ ಯುವ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಮತ್ತು ಬುದ್ದಿ ಜೀವಿಗಳ ಬಗ್ಗೆ ಅಸಂಬದ್ದವಾಗಿ,ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹುಚ್ಚ…

Read More

ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯಸರ ಕಿತ್ತ ಆರೋಪಿಯ ಸೆರೆ – ಲಕ್ಷಾಂತರ ಮೌಲ್ಯದ ಮಾಲು ವಶ

police arrested Pratap B, the accused who threatened a woman at knife-point and snatched her mangalsutra in Jedikatte, Shivamogga. Stolen gold ornaments worth ₹1.50 lakh and the bike used in the crime were recovered. ಶಿವಮೊಗ್ಗ: ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮಾಂಗಲ್ಯಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಕಳ್ಳತನವಾದ ಲಕ್ಷಾಂತರ ರೂಪಾಯಿ…

Read More

ಅಂಕದ ಜೊತೆ ಬಾಂಧವ್ಯಕ್ಕೂ ಮಹತ್ವ ಕೊಡಿ – ಜಿ ಎಸ್ ನಟೇಶ್|gfgc

ಅಂಕದ ಜೊತೆ ಬಾಂಧವ್ಯಕ್ಕೂ ಮಹತ್ವ ಕೊಡಿ – ಜಿ ಎಸ್ ನಟೇಶ್ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಉತ್ತಮ ಅಂಕ ಮತ್ತು ಉದ್ಯೊಗ ಗಳಿಕೆಯಷ್ಟೇ ಜೀವನ ಎಂದು ಭಾವಿಸಬಾರದು.ಸಂಬಂಧ, ಬಾಂಧವ್ಯಗಳಿಗೆ ಮಹತ್ವ ನೀಡಬೇಕು ಎಂದು ಶಿವಮೊಗ್ಗದ ನಿವೃತ್ತ ಉಪನ್ಯಾಸಕ ಜಿ.ಎಸ್. ನಟೇಶ್ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಶೈಕ್ಷಣಿಕ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧವು ಆತ್ಮೀಯರಂತೆ ಇರಬೇಕಾದ ಅನಿವಾರ್ಯತೆ ಇದೆ….

Read More

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಸಮರ್ಪಕವಾದ ಸೂಚನಾ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಣ್ಣ ಮಗು ಸೇರಿದಂತೆ ಕೊಪ್ಪ ಮೂಲದ ಐವರು ಪ್ರಯಾಣಿಸುತಿದ್ದರು. ಕಾರಿನಲ್ಲಿದ್ದ ವಯೋವೃದ್ದೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅವೈಜ್ಞಾನಿಕ ಡಿವೈಡರ್…

Read More

ಅಪ್ಪು ನಮನ ಕಾರ್ಯಕ್ರಮದಲ್ಲಿ ಇಡೀ ಊರೂರಿಗೆ ಬಾಡೂಟ ಬಡಿಸಿ ಅಭಿಮಾನ ಮೆರೆದ ಚನ್ನಶೆಟ್ಟಿಕೊಪ್ಪ ಗ್ರಾಮಸ್ಥರು :

ಕರ್ನಾಟಕದ ಪವರ್ ಸ್ಟಾರ್ ಅಪ್ಪು ನಮ್ಮನ್ನ ಅಗಲಿ ಈಗಾಗಲೇ ಒಂದೂವರೆ ತಿಂಗಳು ಕಳೆದಿದೆ ಆದರೆ ಅವರ ಸಾಧನೆ ಸಾರ್ಥಕತೆ ಹಾಗೂ ಅವರ ದಾನ ಧರ್ಮದ ಕಾರ್ಯಗಳು ಎಂದು ಕೂಡ ನಮ್ಮ ಹೃದಯದಲ್ಲಿ ಅಚ್ಚಳಿಯದೆ ಉಳಿಯುತ್ತದೆ. ಕರ್ನಾಟಕದ ದೊಡ್ಮನೆ ಹುಡುಗನ ಹೆಸರಿನಲ್ಲಿ ಇದೀಗ ರಾಜ್ಯಾದ್ಯಂತ ಗಲ್ಲಿಗಲ್ಲಿಗಳಲ್ಲಿ ಸರ್ಕಲ್ ಸರ್ಕಲ್ ಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಅಪ್ಪು ಹೆಸರನ್ನು ನಾಮಕರಣ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಇದೀಗ ಚನ್ನಶೆಟ್ಟಿಕೊಪ್ಪ ವೃತ್ತಕ್ಕೆ ಪುನೀತ್…

Read More

ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾದ ಆಸ್ಟ್ರೇಲಿಯ ಕ್ರಿಕೆಟಿಗ ಮ್ಯಾಕ್ಸ್ ವೆಲ್

ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ ಚೆನ್ನೈ ಮೂಲದ ಹುಡುಗಿ ವಿನಿ ರಾಮನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಮ್ಯಾಕ್ಸ್‌ವೆಲ್ ಭಾರತೀಯ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. 2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾಕ್ಸ್‌ವೆಲ್ ಕಳೆದ ವಾರ ಆಸ್ಟ್ರೇಲಿಯಾದಲ್ಲಿ ಮುದುವೆಯಾಗಿದ್ದರು. ಇದೀಗ ವಿನಿ ರಾಮನ್ ಕುಟುಂಬ ಸದಸ್ಯರು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಆಯೋಜಿಸಿದ್ದರು.  ತಮಿಳುನಾಡಿನ ವರನ ರೀತಿ ಕಾಣಿಸಿಕೊಂಡ ಮ್ಯಾಕ್ಸ್‌ವೆಲ್ ಭಾರತೀಯ ಅಭಿಮಾನಿಗಳಿಗೆ ಮತ್ತಷ್ಚು ಹತ್ತಿರವಾಗಿದ್ದಾರೆ. ಶೇರ್ವಾನಿ, ಮದುವೆ ಹಾರ…

Read More

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕಛೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪ, ವಿಡಿಯೊ ವೈರಲ್!

Karnataka DGP Ramachandra Rao alleged viral office video sparks public outrage. Senior police officer controversy creates statewide discussion. ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ. ಡಿಜಿಪಿ ಹುದ್ದೆಯಲ್ಲಿರುವ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ವೈರಲ್ ಆಗಿವೆ ಎನ್ನಲಾಗಿದೆ. ಈ ಬೆಳವಣಿಗೆಗೆ ಸಾರ್ವಜನಿಕ…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More

ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಗುರು : ರಂಭಾಪುರಿ ಜಗದ್ಗುರುಗಳು| Malali matt

ಮಳಲಿಮಠದ ಕಾರ್ತಿಕ ದೀಪೋತ್ಸವ ಶ್ರೀಗಳ ಪಟ್ಟಾಧಿಕಾರ ರಜತ ಮಹೋತ್ಸವದಲ್ಲಿ ರಂಭಾಪುರಿ ಜಗದ್ಗುರುಗಳು  ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಗುರು  ರಿಪ್ಪನ್‌ಪೇಟೆ;-ಮನುಷ್ಯ ಜೀವನದಲ್ಲಿ ಅರ್ಥ ಅರಿವು ಆಯುಷ್ಯ ಬಹಳ ಮುಖ್ಯ. ಗುರುವೆಂದರೆ ವ್ಯಕ್ತಿಯಲ್ಲ. ಅದೊಂದು ಮಹಾನ್ ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಶ್ರೀ ಗುರು ಎಂದು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಸಮೀಪದ ಮಳಲಿ ಸಂಸ್ಥಾನಮಠದಲ್ಲಿ ಅಯೋಜಿಸಲಾದ ಕಾರ್ತಿಕ ದೀಪೋತ್ಸವ ಹಾಗೂ ಡಾ||ನಾಗಭೂಷಣ ಶ್ರೀಗಳವರ ಪಟ್ಟಾಧಿಕಾರದ ರಜತ ಮಹೋತ್ಸವ ಸಮಾರಂಭದ ದಿವ್ಯ…

Read More