ಕ್ರೈಸ್ತ ಸಮುದಾಯದ ಮೇಲೆ ಅಪಪ್ರಚಾರ ಸಲ್ಲ : ಬಿ ರಾಜಶೇಖರ್

ಶಿವಮೊಗ್ಗ :  ಕ್ರೈಸ್ತ ಸಮುದಾಯವನ್ನ ನಿಯಂತ್ರಿಸಲು ಮತಾಂತರ ಕಾಯ್ದೆ ಜಾರಿಗೊಳಿಸಬೇಕೆಂಬ ಚರ್ಚೆ ಆಗುತ್ತಿದ್ದು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಎಲ್ಲೂ ಮತಾಂತರ ಮಾಡುತ್ತಿಲ್ಲವೆಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸ್ಪಷ್ಟಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಿ.ರಾಜಶೇಖರ್ ಮಾತನಾಡಿ, ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಮಾತನಾಡಿ, ಕ್ರೈಸ್ತ ಮಿಷನರಿಗಳಿಂದ ವ್ಯಾಪಕ ಮತಾಂತರಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಅತ್ಯಾಚಾರದ ಪ್ರಕರಣಗಳನ್ನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಸದನದಲ್ಲಿ ಮತಾಂತರ ಕಾಯ್ದೆ ಜಾರಿಗೆ…

Read More

ಹಾಲುಗುಡ್ಡೆ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ ನಿಧನ|rpet

ನಿಧನ ವಾರ್ತೆ  ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) 84 ವರ್ಷ  ಅವರು ವಯೊಸಹಜದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.   ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಹಾಲುಗುಡ್ಡೆಯಲ್ಲಿರುವ ಮೃತರ ಸ್ವಂತ ಜಮೀನಿನಲ್ಲಿ ಇಂದು ಸಂಜೆ ನೆರವೇರಿತು.

Read More

ಲಂಚ ಪಡೆಯುತ್ತಿದ್ದ ವೇಳೆ ಗ್ರಾಪಂ ಅಧ್ಯಕ್ಷೆ ಮೇಲೆ ಎಸಿಬಿ ದಾಳಿ

ಶಿವಮೊಗ್ಗ : ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್‌ ಅಧ್ಯಕ್ಷೆಯೊಬ್ಬರ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ (47) ಎಸಿಬಿ ಬಲೆಗೆ ಬಿದ್ದವರು. ಮುದ್ದಿನಕೊಪ್ಪ ಗ್ರಾಮದ ನಿವಾಸಿಯೊಬ್ಬರು ಗುತ್ತಿಗೆದಾರರೊಬ್ಬರ ಪರವಾಗಿ ಕಟ್ಟಡ ಕಾಮಗಾರಿಯೊಂದನ್ನು ಪೂರ್ಣಗೊಳಿಸಿದ್ದರು. 2020ರ ಜನವರಿಯಲ್ಲೇ ಕಾಮಗಾರಿ ಮುಕ್ತಾಯವಾಗಿತ್ತು. ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು 50 ಸಾವಿರ ರೂ. ಕೊಡುವಂತೆ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ ಬೇಡಿಕೆ…

Read More

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಜನರಿಗೆ ಭಾರತ್ ಬ್ರಾೃಂಡ್ ಅಕ್ಕಿ ಜೊತೆಗೆ ಬೇಳೆಕಾಳನ್ನು ಕೂಡ ವಿತರಿಸಲಿದ್ದಾರೆ ಎಂದು ಗ್ರಾಪಂ ಉಪಾಧ್ಯಕ್ಷ ಹಾಗೂ ತಾಲೂಕ್ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸುಧೀಂದ್ರ ಪೂಜಾರಿ ಹೇಳಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದಲ್ಲಿ ಭಾರತ್ ಬ್ರಾೃಂಡ್ ಅಕ್ಕಿ ವಿತರಣ ಕಾರ್ಯಕ್ರಮದ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್…

Read More

ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ

ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ: ಮೆಗ್ಗಾನ್‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ 26 ವರ್ಷದ ನೂರ್ ಅಪ್ ಶಾ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೃತ ಮಹಿಳೆಯ ಕುಟುಂಬ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನವಂಬರ್ 21ರಂದು ನೂರ್ ಅಪ್ ಶಾ ಅವರು ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅಪರೇಷನ್ ವೇಳೆ ವೈದ್ಯರು ಎಡವಟ್ಟಿಗೆ…

Read More

ಶಾಸಕ ಹರತಾಳು ಹಾಲಪ್ಪ ವರ್ಚಸ್ಸಿಗೆ ಧಕ್ಕೆ ತರಲು ಕಾಂಗ್ರೆಸ್ ಷಡ್ಯಂತ್ರ : ರಾಜೇಂದ್ರ ಆವಿನಹಳ್ಳಿ

ಸಾಗರ: ಎಲ್‌ಬಿ ಕಾಲೇಜಿನ ಆವರಣದಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ೫೬ನೇ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಗೂ ಶಾಸಕ ಹಾಲಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಲೇಜಿಗೆ ಜಮೀನು ನೀಡಿದ ಕುಟುಂಬದ ಎಚ್.ಎಂ.ಬಸವರಾಜ್‌ಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನದ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸ್ರಾಣಿ ನಡೆಸುತ್ತಿದ್ದ ಆಡಳಿತ ವಿರೋಧಿ ನಿಲುವಿನ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ನನ್ನನ್ನು ಪ್ರತಿಷ್ಠಾನದ ಸದಸ್ಯತ್ವದಿಂದಲೇ ವಜಾ ಮಾಡಲಾಗಿತ್ತು ಎಂದರು. ಸರ್ವಸದಸ್ಯರ ಸಭೆ ನಡೆಯುತ್ತಿದ್ದ ಮಾ. 17ರಂದು ಬೆಳಿಗ್ಗೆ ನಾನು…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ ವೀರಭದ್ರಪ್ಪ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ…

Read More

RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ

RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ ರಿಪ್ಪನ್‌ಪೇಟೆ : ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಬಂದಿದ್ದ ಐವರ ಗುಂಪನ್ನು ಅರಣ್ಯಾಧಿಕಾರಿ ಪವನ್ ಕುಮಾರ್ ಎನ್ ನೇತೃತ್ವದ ತಂಡ ದಿಡೀರ್ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ , ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗೆ ಬಲೆ ಬೀಸಿದ್ದಾರೆ‌ ಮಂಗಳವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಶಂಕಾಸ್ಪದ ಮಾಹಿತಿ ಲಭ್ಯವಾದ…

Read More

ಮಾ.14 ರಂದು ಬೃಹತ್ ಉದ್ಯೋಗ ಮೇಳ – ಖಾಸಗಿ‌ ಕಂಪನಿಗಳಿಂದ ನೇರ ಸಂದರ್ಶನ|job

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ…

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More