ಕ್ರೈಸ್ತ ಸಮುದಾಯದ ಮೇಲೆ ಅಪಪ್ರಚಾರ ಸಲ್ಲ : ಬಿ ರಾಜಶೇಖರ್
ಶಿವಮೊಗ್ಗ : ಕ್ರೈಸ್ತ ಸಮುದಾಯವನ್ನ ನಿಯಂತ್ರಿಸಲು ಮತಾಂತರ ಕಾಯ್ದೆ ಜಾರಿಗೊಳಿಸಬೇಕೆಂಬ ಚರ್ಚೆ ಆಗುತ್ತಿದ್ದು ಕ್ರಿಶ್ಚಿಯನ್ ಮಿಷನರಿಗಳು ಬಲವಂತವಾಗಿ ಎಲ್ಲೂ ಮತಾಂತರ ಮಾಡುತ್ತಿಲ್ಲವೆಂದು ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸ್ಪಷ್ಟಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಿ.ರಾಜಶೇಖರ್ ಮಾತನಾಡಿ, ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗೂಳಿಹಟ್ಟಿ ಮಾತನಾಡಿ, ಕ್ರೈಸ್ತ ಮಿಷನರಿಗಳಿಂದ ವ್ಯಾಪಕ ಮತಾಂತರಗೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಅತ್ಯಾಚಾರದ ಪ್ರಕರಣಗಳನ್ನ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಕುರಿತು ಸದನದಲ್ಲಿ ಮತಾಂತರ ಕಾಯ್ದೆ ಜಾರಿಗೆ…