ಉರುಳಿಗೆ ಸಿಲುಕಿ ಚಿರತೆ ಸಾವು|leopard

ಉರುಳಿಗೆ ಸಿಲುಕಿ ಚಿರತೆ ಸಾವು ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಅಗರದಹಳ್ಳಿಯಲ್ಲಿ ನಡೆದಿದೆ. ಚಿರತೆ (Leopard) ಭದ್ರಾ ಅಭಯಾರಣ್ಯದ ವಲಯದಿಂದ ಹೊರಬಂದು ಅಗರದಹಳ್ಳಿಯ ಕಾಲುವೆ ಕೆಳಗೆ ಸೇರಿಕೊಂಡಿತ್ತು. ಇದನ್ನು ಸೆರೆ ಹಿಡಿಯಲು ಭದ್ರಾ ಕಣಿವಮ್ಮ ದೇವಸ್ಥಾನದ ಬಳಿ ಕಳೆದ ಒಂದು ತಿಂಗಳಿಂದ ಬೋನು ಇಟ್ಟಿದ್ದರೂ ಚಿರತೆ(leopard) ಸೆರೆ ಸಿಕ್ಕಿರಲಿಲ್ಲ. ಆದರೆ ತಡರಾತ್ರಿ ಕಾಲುವೆಯಿಂದ ಅಡಿಕೆ ತೋಟಕ್ಕೆ ಹೋಗವಾಗ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿದೆ. ಚಿರತೆಯ ಸಾವಿನ ಕುರಿತು…

Read More

ಎಲ್ಲಾ ಐದು ಗ್ಯಾರಂಟಿಗಳನ್ನು ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ : ಗ್ಯಾರೆಂಟಿ ಪಡೆಯಲು ಏನು ಮಾಡಬೇಕು? ಯಾರಿಗೆಲ್ಲ ಸಿಗಲಿದೆ ಉಚಿತ ಯೋಜನೆ!!! ಇಲ್ಲಿದೆ ಸಂಪೂರ್ಣ ಮಾಹಿತಿ|congress

ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರೆಂಟಿಯನ್ನು ಜಾರಿಗೊಳಿಸುವ ಘೋಷಣೆ ಮಾಡಿದೆ. ಮಹತ್ವದ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಸರ್ಕಾರ, 5 ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದೆ. ಐದು ಯೋಜನೆಗಳು ಮಹಿಳೆಯರ ಬಸ್ ಪ್ರಯಾಣ ಜೂನ್ 11 ರಿಂದ ಆರಂಭಗೊಂಡರೆ, ಇತರ ನಾಲ್ಕು ಯೋಜನೆಗಳು ಜುಲೈ 1 ರಿಂದ ಆರಂಭಗೊಳ್ಳುತ್ತಿದೆ. ಗ್ಯಾರೆಂಟಿ ಯೋಜನೆ ಜಾರಿ ಕುರಿತು ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಗ್ಯಾರೆಂಟಿ ಯೋಜನೆ ಪಡೆಯಲು ಅರ್ಹರು ಯಾವ ದಾಖಲೆ ನೀಡಬೇಕು…

Read More

ಕಾರ್ ಮೆಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ ಮಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ:  ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧದಿಂದ  ಚುಚ್ಚಿ  ಹೊಸಳ್ಳಿಯ ಕಾರ್ ಮೆಕ್ಯಾನಿಕ್‌ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. ಜಿಕ್ರುಲ್ಲಾ (೨೮) ಎಂಬಾತನನ್ನು ಕೊಲೆಗೈದಿದ್ದ  ಮಿಳಘಟ್ಟದ ಶಹಬಾಜ್ ಶರೀಫ್ (೨೦) ಟೆಂಪೋ ಸ್ಟ್ಯಾಂಡ್ ಬಳಿಯ  ವಸೀಂ ಅಕ್ರಂ  ಅಲಿಯಾಸ್  ಉಂಗ್ಲಿ (೨೦),  ಬುದ್ಧನಗರದ ವಸೀಂ ಅಕ್ರಂ ಅಲಿಯಾಸ್  ಕಾಲಾ ವಸೀಂ (೨೦)   ಮತ್ತು  ಮುರಾದ್‌ನಗರದ…

Read More

ಹೊಸನಗರ ಸಮೀಪ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ : ಚಾಲಕನಿಗೆ ಗಂಭೀರ ಗಾಯ|Accident

ಇನ್ನೊವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ನಡೆದು ಕಾರು ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ನಗರ ಹೋಬಳಿ ಮತ್ತಿ ಮನೆ ಸಮೀಪ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನೊವಾ ಕಾರಿನ ಚಾಲಕ ಸಿದ್ದರಾಜು ಎಂಬುವರ ಕಾಲಿಗೆ, ಹೊಟ್ಟೆಗೆ ಹಾಗೂ ಕಿವಿಗೆ  ಗಂಭೀರವಾಗಿ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.  ಕಾರು ಮೈಸೂರಿನಿಂದ ಸಿಗಂದೂರು ಕಡೆಗೆ ತೆರಳುತಿದ್ದು…

Read More

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ…

Read More

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್ : ಯುವಕ ಸಾವು….

ಯುವಕನೊಬ್ಬ ಬೈಕಿನಲ್ಲಿ ತೆರಳುತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲಕ್ಕೆ ಕರೆದುಕೊಂಡು ಹೋಗುವಾಗ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ರಾಮಕೃಷ್ಣಪುರದ ಬಳಿಯ ಕಾಸರವಳ್ಳಿ ಗ್ರಾಮದ ಕೋಟೆ ತೋಟ ಬಳಿ ನಡೆದಿದೆ. ಬುಧವಾರ ಸಂಜೆ  ಬಂಡಿಗಡಿಯ ಚಾವಲ್ಮನೆ ರಂಜನ್ ಕೆ(32)ಎಂಬ ಯುವಕ ತೀರ್ಥಹಳ್ಳಿಯಿಂದ ಮದುವೆ ಕಾರ್ಯಕ್ರಮ ಮುಗಿಸಿ ಊರಿಗೆ ಹೋಗುತ್ತಿದ್ದ ವೇಳೆ ರಾಮಕೃಷ್ಣಪುರದ ಬಳಿ ಬೈಕ್ ನಿಯಂತ್ರಣ ತಪ್ಪಿದ ಕಾರಣ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯವಾಗಿತ್ತು.  ಸ್ಥಳೀಯ ಸಾರ್ವಜನಿಕ ಆಂಬುಲೆನ್ಸ್ ಮೂಲಕ…

Read More

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ ಸಾಗರ : ಇಲ್ಲಿನ ಎಂ ಎಲ್ ಹಳ್ಳಿಯಲ್ಲಿರುವ  ಶ್ರೀ ರಾಮಕೃಷ್ಣ ವಸತಿ ವಿದ್ಯಾಲಯದ ಮಕ್ಕಳು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ. ದಿನಾಂಕ 24.08.2024 ಮತ್ತು 25. 08. 2024 ರಂದು ನಡೆದ ಎಂ,ಎಲ್ ಹಳ್ಳಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಪ್ರಥಮ , ಬಾಲಕರ ಖೋ ಖೋ ಪ್ರಥಮ , ಬಾಲಕರ ಥ್ರೋಬಾಲ್ ಪ್ರಥಮ ,ಬಾಲಕರ ವಾಲಿಬಾಲ್ ಪ್ರಥಮ…

Read More

ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ತತ್ತರಿಸಿದ ಜನತೆ : ಅಂಗಡಿ ಮುಗ್ಗಟ್ಟುಗಳಿಗೆ ನುಗ್ಗಿದ ನೀರು

ರಿಪ್ಪನ್‌ಪೇಟೆ : ಭಾರಿ ಗುಡುಗು ಸಿಡಿಲು ಮಳೆಯಿಂದ ತತ್ತರಿಸಿದ ಪಟ್ಟಣದ ಜನತೆ,ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ. ಪಟ್ಟಣದ ಸುತ್ತಮುತ್ತಲಿನ ಅರಸಾಳು ,ಬೆನವಳ್ಳಿ,ದೂನ,ಬಾಳೂರು ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತ ವಾಗಿದೆ. ರಿಪ್ಪನ್‌ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ಹರಿದು ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ.ತೀರ್ಥಹಳ್ಳಿ ರಸ್ತೆಯಲ್ಲಿ ಪ್ರಭಾಕರ್ ಎಂಬುವವರ ಅಂಗಡಿಗೆ ನೀರು‌ ನುಗ್ಗಿದೆ. ರಸ್ತೆಯ ಮೇಲೆ ಹರಿಯುತ್ತಿರುವ ಭಾರಿ ಪ್ರಮಾಣದ ನೀರಿನಿಂದ ಸಂಚಾರ ಅಸ್ತವ್ಯಸ್ತವಾಗಿದ್ದು,ವಿದ್ಯುತ್ ವ್ಯತ್ಯಯ ಉಂಟಾಗಿದೆ….

Read More

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿ ಹಾಕಿ ವೃದ್ಧೆ ಮೇಲೆ ಹಲ್ಲೆ – ಸಾಗರ ತಾಲೂಕಿನ ಗೌತಮಪುರದಲ್ಲೊಂದು ಅಮಾನವೀಯ ಘಟನೆ  ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ  ವೃದ್ಧೆಯನ್ನು ಕಂಬಕ್ಕೆ ಕಟ್ಟಿ  ಹಲ್ಲೆ ನಡೆಸಿರುವ  ಘಟನೆ ಆನಂದಪುರ‌ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 67 ವರ್ಷದ ಹುಚ್ಚಮ್ಮ ಎಂಬವವರ ಮನೆಯ ಮುಂದೆ ನೆರೆಮನೆಯವರಾದ ಪ್ರೇಮಾ ಕಸ ತಂದು ಹಾಕಿದ್ದಳು. ಇದನ್ನು  ಪ್ರಶ್ನೆ ಮಾಡಿದಕ್ಕೆ   ಮಂಜುನಾಥ್ , ದರ್ಶನ್ ಹಾಗೂ ಪ್ರೇಮಾ  ಹುಚ್ಚಮ್ಮ ಗೆ ಕೆಟ್ಟದಾಗಿ…

Read More

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ ರಿಪ್ಪನ್‌ಪೇಟೆ : ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ…

Read More
Exit mobile version