Headlines

ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೊಬ್ಬನಿಗೆ ಮಂಗನ ಖಾಯಿಲೆ (KFD) ಧೃಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಗುತ್ತಿಯಡೆಹಳ್ಳಿ  ಬಳಿಯ ಹಳ್ಳಿ ಬೈಲು ಗ್ರಾಮದ 54 ವರ್ಷದ ವ್ಯಕ್ತಿಗೆ ಕೆಎಫ್ಡಿ ಪಾಸಿಟಿವ್ ದೃಢಪಟ್ಟಿದೆ. ನಾಲ್ಕೈದು ದಿನದಿಂದ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಮಂಗನ ಖಾಯಿಲೆ ಇರುವುದು ಪತ್ತೆಯಾಗಿದೆ. ಜ್ವರ ಲಕ್ಷಣ ಇಲ್ಲದಿದ್ದರೂ ಎರಡು ದಿನ ಅವರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ನಿಗಾದಲ್ಲಿಡಲಾಗಿತ್ತು. ಅವರ ಮನೆಯ ಉಳಿದ ಸದಸ್ಯರಿಗೆ ಯಾವುದೇ ಲಕ್ಷಣಗಳಿಲ್ಲ. ಆ ಊರಿನ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದರು.

Read More

ಕಾಂಗ್ರೆಸ್ ಪಕ್ಷ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದೆ – ರಾಹುಲ್‌ ಗಾಂಧಿ|thirthahalli

ತೀರ್ಥಹಳ್ಳಿ : ಕಾಂಗ್ರೆಸ್‌ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ.ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ.ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು. ಮಂಗಳವಾರ ಪಟ್ಟಣದ ಬಾಳೇಬೈಲಿನಲ್ಲಿ ನೆಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ ಎಂದು ಕೇಳುತ್ತಿದ್ದಾರೆ….

Read More

ಸಾಗರ: ನಿಗೂಢವಾಗಿ ಕಣ್ಮರೆಯಾಗಿದ್ದ “”ಪ್ರಕಾಶ್ ಟ್ರಾವೆಲ್ಸ್” ಮಾಲೀಕ ಶವವಾಗಿ ಪತ್ತೆ! ನಿಜಕ್ಕೂ ಇದು ಆತ್ಮಹತ್ಯೆಯೇ…? “ಪಟಗುಪ್ಪೆ” ಸುತ್ತಾ, ಈಗ ಅನುಮಾನದ ಹುತ್ತ…!

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ರವರ ಅಳಿಯ ಕಾಫೀ ಡೇ ಸಿದ್ಧಾರ್ಥ್ ಆತ್ಮಹತ್ಯೆಯ ಪ್ರಕರಣದಂತೆಯೇ ಸಾಗರದ ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ರವರ ನಿಗೂಢ ನಾಪತ್ತೆ ಪ್ರಕರಣವೂ ಸಹ ನೋಡಲು ಒಂದೇ ರೀತಿಯಾಗಿ ಕಾಣುತ್ತಿದೆ! ಯಾಕಂದ್ರೇ, ಎಲ್ ಎನ್ ಟಿ ಇನ್ನಿತರೆ ತೀರಾ ಟಾರ್ಚರ್ ಕೊಡುವ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮಾಡಿಕೊಂಡಿದ್ದ ಸಿದ್ಧಾರ್ಥ್ ರವರು ದಿಕ್ಕೇ ಕಾಣದಂತಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು, ಇದೇ ಪ್ರಕರಣದಂತೆಯೆ ಪ್ರಕಾಶ್ ರವರು ಸಹ ಸಾಲ ಸೋಲಕ್ಕೆ ಅಂಜಿ…

Read More

ರಿಪ್ಪನ್‌ಪೇಟೆ : ಆಟೋ ಅಪಘಾತದಲ್ಲಿ ಮೃತಪಟ್ಟಿದ್ದ ಶ್ರೀನಿವಾಸ್ ಮನೆಗೆ ಭೇಟಿ‌ ನೀಡಿದ ಶಾಸಕ ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಬರೀಶನಗರದ ಆಟೋ ಶ್ರೀನಿವಾಸ್ ರವರ ಮನೆಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಭೇಟಿ ನೀಡಿದರು. ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಸ್ಥರಿಗೆ ಧೈರ್ಯ ತುಂಬಿ‌,ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದರು. ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ : ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರು ಪೂಜೆ ಸಲ್ಲಿಸಿದರು. ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಸರ್ಕಾರದಿಂದ 3 ಲಕ್ಷ ಅನುದಾನ…

Read More

24 ಗಂಟೆಯಲ್ಲಿ ಕಿಡ್ನಾಪ್ ಪ್ರಕರಣ ಬೇಧಿಸಿದ ಪೊಲೀಸರು : ಭದ್ರಾವತಿಯಲ್ಲಿ ಅಪಹರಣ – ಸಾಗರದಲ್ಲಿ ಆರೋಪಿಗಳು|crime news

ಅಪ್ರಾಪ್ತ ಬಾಲಕನನ್ನ ಅಪಹರಿಸಿ ಹಣದ ಬೇಡಿಕೆ ಇಟ್ಟ ಪ್ರಕರಣವನ್ನ 24 ಗಂಟೆಯಲ್ಲಿ ಬೇಧಿಸಿದ ಭದ್ರಾವತಿ ನ್ಯೂ ಟೌನ್ ಪೊಲೀಸರು ಐವರು ಆರೋಪಿಯನ್ನ ಬಂಧಿಸಿದ್ದಾರೆ. ಓರ್ವನ ಬಂಧನಕ್ಕಾಗಿ ಭರ್ಜರಿ ಬಲೆಯನ್ನೇ ಹೆಣೆದಿದ್ದಾರೆ. ಘಟನೆಯ ಹಿನ್ನಲೆ: ಭದ್ರಾವತಿ ಅಂಡರ್ ಬ್ರಿಡ್ಜ್ ಬಳಿಯಿರುವ ಎಲ್ಐಸಿ ಕಚೇರಿ ಬಳಿ ಎಳನೀರು ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕನ ಬಳಿ ಬಂದ ಅಪರಿಚತನೋರ್ವ ನನ್ನ ಬಳಿ ಹಣ ಖಾಲಿಯಾಗಿದೆ. ಫೋನ್ ಪೇ ನೂ ಇಲ್ಲ. ನಾಲ್ಕು ಎಳನೀರು ಕೊಚ್ಚಿಕೊಂಡು 100 ಮೀಟರ್ ದೂರದಲ್ಲಿರುವ ವ್ಯಾನ್ ನಲ್ಲಿರುವ ಸ್ನೇಹಿತನ…

Read More

ಕರಿಮನೆ ಗ್ರಾಪಂ ಅಕ್ರಮ ಮರಕಡಿತಲೆ ಪ್ರಕರಣ – ಗ್ರಾಮಸ್ಥರಿಂದ ಅಹೋರಾತ್ರಿ ಧರಣಿ|ಅಧಿಕಾರಿಗಳ ವಿರುದ್ದ ಆರಗ ಜ್ಞಾನೇಂದ್ರ ಗರಂ|protest

ಹೊಸನಗರ :  ಕರಿಮನೆ ಗ್ರಾಮದ ಅಕೇಶಿಯ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ತಾಲೂಕಿನ ನಗರ ಹೋಬಳಿ ಕರಿಮನೆ ಗ್ರಾಮದಲ್ಲಿ ನಡೆದ ಅಕೇಶಿಯಾ ಮರಗಳ ಅಕ್ರಮ ಕಡಿತಲೆ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ನಡೆಸುತಿದ್ದ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮದ ಸರ್ವೆ ನಂಬರ್ 106ರಲ್ಲಿ ಗ್ರಾಮ ಪಂಚಾಯಿತಿ ಅರಣ್ಯೀಕರಣ…

Read More

RIPPONPETE | ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ

ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ ರಿಪ್ಪನ್ ಪೇಟೆ : ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದ ರಿಪ್ಪನ್‌ಪೇಟೆ ಪಟ್ಟಣದ ವಿದ್ಯಾರ್ಥಿನಿ ಡಾ. ಹರ್ಷಿತ ಎ ರವರಿಗೆ ಪಟ್ಟಣದ ಬ್ರಾಹ್ಮಣ ಮಹಾಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪಟ್ಟಣದ ಶ್ರೀ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್ ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್…

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

Hosanagara | ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು

ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು ಹೊಸನಗರ(Hosanagara) : ಅಕ್ರಮವಾಗಿ ಮರ ಕಡಿತಲೆ ಮಾಡಿ ನಾಟಾ ಮಾಡಿ ಸಾಗಿಸಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪದಲ್ಲಿ ಜೋಸ್ ಮ್ಯಾಥ್ಯೂಸ್‌ ಎಂಬುವವರ ಖಾತೆ ಜಮೀನಿನಲ್ಲಿದ್ದ ಹೊನ್ನೆ ಜಾತಿಯ ಮರವನ್ನು ಕಡಿತಲೆ ಮಾಡಿ ಸಾಗಿಸಲಾಗಿತ್ತು. ತನಿಖೆ ನಡೆಸಿದ ಅಧಿಕಾರಿಗಳು ತಾಲೂಕಿನ ಜಯನಗರದ ಖಾಸಿಂ ಸಾಬ್‌ ಎಂಬಾತನ ಮನೆಯಲ್ಲಿ 24 ಘನ ಅಡಿ ನಾಟಾ ಸಂಗ್ರಹಿಸಿಟ್ಟಿದ್ದನ್ನು ಪತ್ತೆ…

Read More

ಆಗುಂಬೆ ಪೊಲೀಸರ ಭರ್ಜರಿ ಭೇಟೆ : ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ

ಆಗುಂಬೆ :  ಪೊಲೀಸರ ಕಾರ್ಯಾಚರಣೆಯಲ್ಲಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಲಾಗಿದೆ.  ರಾತ್ರಿ ವೇಳೆ ಗಸ್ತಿನಲ್ಲಿದ್ದ ಎಸ್ ಐ ಶಿವಕುಮಾರ್ ಅವರ ತಂಡ ತಪಾಸಣೆ ವೇಳೆ ಹನ್ನೊಂದು ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿ ಒಂದು  ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ತುಮಕೂರು ಧಾರವಾಡ ಮಂಗಳೂರು ಮಂಡ್ಯ ಈ ಜಿಲ್ಲೆಗಳಲ್ಲಿ ಒಟ್ಟು ಹನ್ನೊಂದು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.  ಕಾರ್ಯಾಚರಣೆಯಲ್ಲಿ ಆಗುಂಬೆಯ ಪಿ ಎಸ್ ಐ ಶಿವಕುಮಾರ್ ,  ಸಿಬ್ಬಂದಿಗಳಾದ ದೇವದಾಸ್ ನಾಯಕ್, ವೀರೆಂದ್ರ,…

Read More
Exit mobile version