ಶಿವಮೊಗ್ಗಕ್ಕೆ 72 ಪ್ರಯಾಣಿಕರ ಹೊತ್ತು ತಂದ ಮೊದಲ ವಿಮಾನ|airport

ಶಿವಮೊಗ್ಗಕ್ಕೆ ಜನರನ್ನು ಹೊತ್ತು ಬಂತು ಮೊದಲ ವಿಮಾನ ಶಿವಮೊಗ್ಗ : ಸೋಗಾನೆಯಲ್ಲಿನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಂಡಿಗೋ ಎಟಿಆರ್ ವಿಮಾನ ಬಂದಿಳಿದಿದೆ.  ಇಂಡಿಗೋ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ,ಶಾಸಕರಾದ ಬೇಳೂರು ಗೋಪಾಲಕೃಷ್ಣ,ಚನ್ನಬಸಪ್ಪ ,ಬಿ ವೈ ವಿಜಯೋಂದ್ರ, ಆರಗ ಜ್ಞಾನೇಂದ್ರ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ. ಸೇರಿ ಒಟ್ಟು 72 ಮಂದಿ ಆಗಮಿಸಿದರು. ಇಂಡಿಗೋ ಸಂಸ್ಥೆಯ ಎಟಿಎಅರ್ ವಿಮಾನ ಬೆಳಗ್ಗೆ 11 ಗಂಟೆ ಹೊತ್ತಿಗೆ ಲ್ಯಾಂಡ್ ಆಯಿತು. ಜನರನ್ನು ಹೊತ್ತು ಬಂದಿದ್ದ…

Read More

ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆ..!!|deadbody

ತೀರ್ಥಹಳ್ಳಿ : ಪಟ್ಟಣದ ಹೊಸ ಕೋರ್ಟ್ ಬಳಿ  ಲಾರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. 4 ದಿನಗಳ ಹಿಂದೆಯೇ ಲಾರಿಯಲ್ಲೇ ಹೃದಯಾಘಾತದಿಂದ  ಸಾವನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯಿಂದ ಲಾರಿಯಲ್ಲಿ ಲೋಡ್ ತುಂಬಿಸಿಕೊಂಡು ಬಂದು ತೀರ್ಥಹಳ್ಳಿಯಲ್ಲಿ ಇಳಿಸಿ ರಾತ್ರಿ ಊಟ ಮಾಡಿ ಲಾರಿಯಲ್ಲಿ ಮಲಗಿದ್ದಾಗ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಅಂದಾಜು 50 ವರ್ಷದ ವ್ಯಕ್ತಿ ಎನ್ನಲಾಗುತಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜೆಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.  ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ – ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ…

Read More

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ ಹೊಸನಗರ : ಮಾರುತಿ ಓಮಿನಿ‌ ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತವಾದ ಘಟನೆ ಕರಿನಗೊಳ್ಳಿ ಸಮೀಪದಲ್ಲಿ ನಡೆದಿದೆ. ಕಾರಿನಲ್ಲಿದ್ದ 4 ಮಕ್ಕಳು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗುತ್ತಿದೆ. ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ನ ಮುಂಭಾಗದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಮಾರುತಿ ಓಮ್ನಿ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಹೊಸನಗರ ಕಡೆಗೆ…

Read More

ಬಾವಿಯಲ್ಲಿ ಕೆಲಸ ಮಾಡುತ್ತಿರುವಾಗ ಬೋಡ್ರಸ್ ಕಲ್ಲು ತಲೆ ಮೇಲೆ ಬಿದ್ದು ವ್ಯಕ್ತಿ ಸಾವು|crime news

ಸಾಗರ : ಬಾವಿಯೊಳಗೆ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬೋಡ್ರಸ್‌ ಕಲ್ಲು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ 9 ನೇ ತಿರುವಿನಲ್ಲಿ ಘಟನೆ ನಡೆದಿದೆ. ರಾಮನಗರದ ಮೋಹನ (58) ಸಾವು ಕಂಡ ದುರ್ದೈವಿ.  ಅರಳಿಕಟ್ಟೆ ಬಳಿಯ ಮನೆಯ ಬಾವಿಯಲ್ಲಿ ಅವರು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಮೇಲಿನಿಂದ ಆಕಸ್ಮಿಕವಾಗಿ ತಲೆ ಮೇಲೆ ಕಲ್ಲು ಬಿದ್ದಿದ್ದು, ಬಾವಿಯಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು Shivamogga Tobacco Control Cell booked 51 COTPA violations during a special enforcement drive at the city bus stand, collected ₹4,500 in fines, and removed illegal tobacco advertisements. ಶಿವಮೊಗ್ಗ: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಪ್ರಮುಖ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸುವವರ ವಿರುದ್ಧ ವಿಶೇಷ ದಾಳಿ ನಡೆಸಲಾಯಿತು….

Read More

ಕುಮಾರಸ್ವಾಮಿ ನಾಲ್ಕು ದಿನ ಆರ್​​ಎಸ್​​​ಎಸ್​​ ಶಾಖೆಗೆ ಬಂದು ಆಮೇಲೆ ಟೀಕಿಸಲಿ: ನಳಿನ್ ಕುಮಾರ್ ಕಟೀಲ್

ಶಿವಮೊಗ್ಗ: ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗೆ ಒಂದು ವಾರ ಬರುವಂತೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಆಹ್ವಾನಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೇ ಸಂಘ- ಸಂಸ್ಥೆಯನ್ನು ಟೀಕೆ ಮಾಡುವ ಮುನ್ನ ಮೊದಲು ಅದರ ಬಗ್ಗೆ ತಿಳಿದುಕೊಳ್ಳಬೇಕು ಎಂದರು. ಕುಮಾರಸ್ವಾಮಿ ನಾಲ್ಕು ದಿನ ಶಾಖೆಗೆ ಬರಲಿ, ಆಮೇಲೆ ಸಂಘದ ಬಗ್ಗೆ ಟೀಕೆ ಮಾಡಲಿ. ಅವರು ಅಧಿಕಾರದಲ್ಲಿದ್ದಾಗ ಅವರ ಕುಟುಂಬದವರಿಗೆ ಸಹಾಯ ಮಾಡಿಕೊಂಡು ಬಂದವರು. ಅವರಿಗೆ ರಾಷ್ಟ್ರಭಕ್ತಿ, ದೇಶದ ಪರಿಕಲ್ಪನೆ, ಚಿಂತನೆಗಳಿಲ್ಲ. ಪಾರ್ಟಿಯನ್ನೇ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ|accident

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬಟ್ಟೆಮಲ್ಲಪ್ಪ -ಹೊಸನಗರ ರಸ್ತೆಯ ಬ್ರಹ್ಮೇಶ್ವರ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಅಪ್ಪಳಿಸಿದೆ. ಶಿಕಾರಿಪುರ ಮೂಲದ ಕುಟುಂಬ ಮಾರುತಿ ಸುಜ಼ೂಕಿ ಗ್ರಾಂಡ್ ವಿಟಾರ ಕಾರಿನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನ ಏರ್ ಬ್ಯಾಗ್ ತೆರೆದಿದ್ದರಿಂದ ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ ಹೊಸನಗರ…

Read More

ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು  ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ. ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ: ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ್  ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರಣ್ಣ ಹೆಬ್ಬಾಳ್ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಗುರಣ್ಣ ಹೆಬ್ಬಾಳ್ ರವರು ಬೆಂಗಳೂರಿನ‌ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದಾರೆ. ಅಗಸ್ಟ್ 2023 ರಿಂದ ಹೊಸನಗರದ ಸರ್ಕಲ್ ಇನ್ಸ್…

Read More