ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ : ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ  ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…

Read More

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ | Neharu cricketers

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಹೊಸನಗರ ರಸ್ತೆಯ ಆರ್ ಸಿಸಿ ಕ್ರೀಡಾಂಗಣದಲ್ಲಿ ನೆಹರು ಕ್ರಿಕೆಟರ್ಸ್ ಆಯೋಜಿಸಿದ್ದ ಹೊನಲು ಬೆಳಕಿನ 30 ಗಜದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯೂ ಜೀವನದ ಒಂದು ಭಾಗವಾಗಿದ್ದು ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುತ್ತದೆ. ನೀತಿ ನಿಯಮಗಳ ಸಂವಹನೆಯೊಂದಿಗೆ ಶಿಸ್ತಿನ ಅರಿವು ಉಂಟಾಗುತ್ತದೆ….

Read More

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್​ಡೌನ್​ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು‌ ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ  ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…

Read More

ಕೋಳಿ ಕದಿಯುತ್ತಿದ್ದ ಎನ್ನುವ ಕಾರಣಕ್ಕೆ ಮೃಗವಧೆ ರಾಜು ಎಂಬಾತನನ್ನು ಬಡಿದು ಕೊಂದು ಬಿಟ್ರಾ ದುಷ್ಕರ್ಮಿಗಳು..!!!!!!!????

ಅಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬಡಿದು ಕೊಂದಿರುವಂತಹ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ.  ಮೃಗವಧೆಯ ರಾಜು ಹೇಗೆ ಸಾವನ್ನಪ್ಪಿರುವ ವಿಚಾರ ಇದೀಗ ಹೊರಕ್ಕೆ ಬಂದಿದೆ. ಆ ಊರು ಹಾಗೂ ಅಲ್ಲಿನ ಸ್ಥಳಿಯರು ಹೇಳುವ ಪ್ರಕಾರ ಆತ ಅಡಿಕೆ ಗೊನೆ ತೆಗೆಯುವವನಾಗಿದ್ದು ಹಾಗೂ ಮದ್ಯ ವ್ಯಸನಿಯಾಗಿದ್ದ. ಕಳೆದ ಮೂರು ದಿನಗಳಿಂದ ರಾಜು ಮನೆಯಲ್ಲಿರಲಿಲ್ಲ.  ಕೋಳಿಯಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಶಿಶಿರ, ಶಿವು ಮತ್ತು ವಿಜಯೇಂದ್ರ ಎಂಬ ಆರೋಪಿಗಳು ಹಲ್ಲೆ…

Read More

ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು

ಧರ್ಮಸ್ಥಳ ಕ್ಷೇತ್ರ ನಿಂದನೆ ಸಲ್ಲದು ; ಹೊಂಬುಜ ಶ್ರೀಗಳು ರಿಪ್ಪನ್‌ಪೇಟೆ : ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮೇಲೆ ನಿರಂತರ ದೋಷಾರೋಪಣೆ ಮಾಡುವ ಮೂಲಕ ನಿಂದಿಸಿ ವಿಕೃತ ಸಂತೋಷವನ್ನು ಅನುಭವಿಸುತ್ತಿರುವ ಸಮಾಜ ಘಾತಕ ಶಕ್ತಿಗಳ ಮೇಲೆ ಸರ್ಕಾರ ಮತ್ತು ನ್ಯಾಯಾಲಯವು ಕಠಿಣ ಕ್ರಮ ಜರುಗಿಸಬೇಕೆಂದು ಹೊಂಬುಜ ಜೈನ ಮಠದ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಶ್ರೀಗಳು, ಕೋಟ್ಯಂತರ ಜನರ ಶ್ರದ್ಧಾ ಕೇಂದ್ರದ ಮೇಲೆ ಮಾನಹಾನಿ ಮಾಡುವ ಕಾಯಕವನ್ನು…

Read More

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು

Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು ಶಿವಮೊಗ್ಗ: ಬೈಕ್ ಗೆ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಂಡ್ಲಿ ಪಂಪ್ ಹೌಸ್ ಬಳಿ ನಡೆದಿದೆ.  ಸೈಯದ್ ಸಫನ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಸೈಫನ್ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಮನೆಗೆ ಹೋಗುತ್ತಿದ್ದನು. ಈ ವೇಳೆ ಟ್ರ್ಯಾಕ್ಟರ್ ಸವಾರ ಜಲ್ಲಿ ಕಲ್ಲು ಲೋಡ್ ಮಾಡಿಕೊಂಡು ಬರುತ್ತಿದ್ದನು. ನಿರ್ಲಕ್ಷದಿಂದ ಹಾಗೂ ಅತಿ ವೇಗದಲ್ಲಿ ಬರುತ್ತಿದ್ದ…

Read More

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆಗೆ SJKPS ಮತ್ತು ಪ್ರೆಸ್​ ಟ್ರಸ್ಟ್​ ಖಂಡನೆ

ಪತ್ರಕರ್ತ ಮುದಾಸಿರ್ ಅಹಮದ್ ಮೇಲೆ ದುಷ್ಕರ್ಮಿಗಳ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯವನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತೀವ್ರವಾಗಿ ಖಂಡಿಸಿವೆ. ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಸಮಾಜ ಘಾತುಕ ಚಟುವಟಿಕೆಗಳ ಬಗ್ಗೆ ಸುದ್ದಿ ಮಾಡುತ್ತಿದ್ದ ಒಬ್ಬ ಪತ್ರಕರ್ತನ ಮೇಲಿನ ಹಲ್ಲೆಗೆ ಬೇರೆಯದೇ ಆಯಾಮ ಇರುವ ಅನುಮಾನ ಇದ್ದು,…

Read More

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಬಿ ಜಿ ನಾಗರಾಜ್|congress

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಕಾಂಗ್ರೆಸ್ ಪಟಗುಪ್ಪೆಯಲ್ಲಿ ಶರಾವತಿ ಹಿನ್ನೀರು ಹಬ್ಬ ಆಚರಣೆಗೆ ಕಾಂಗ್ರೆಸ್ ಪಕ್ಷದ ವಿರೋಧ ಹೊಸನಗರ : ಶಾಸಕ ಎಚ್. ಹಾಲಪ್ಪ ಹರತಾಳು ಅಧ್ಯಕ್ಷತೆಯಲ್ಲಿ ಮಾ.೪ರಂದು ತಾಲೂಕಿನ ಪಟಗುಪ್ಪೆಯಲ್ಲಿ ಏರ್ಪಡಿಸಿರುವ ಶರಾವತಿ ಹಿನ್ನೀರು ಹಬ್ಬ ಎನ್ನುವ ಕರ‍್ಯಕ್ರಮದ ಆಯೋಜನೆಯು ಆಯೋಜಕರ ವಿಕೃತ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ ಆರೋಪಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಶರಾವತಿ ಮುಳುಗಡೆ ಎನ್ನುವುದು ಈ…

Read More

ಮನೆಯಲ್ಲಿಯೇ ಗಾಂಜಾ ಬೆಳೆದ ಮೆಡಿಕಲ್ ವಿದ್ಯಾರ್ಥಿಗಳು – ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್|crime news

ಕರ್ನಾಟಕ ರಾಜ್ಯದ ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ.  ಈ ನಡುವೆ , ಶಿವಮೊಗ್ಗದಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಕಂಡುಬಂದಂತೆ ವ್ಯಕ್ತಿಯೊಬ್ಬ, ಖುದ್ದು ತನ್ನ ಮನೆಯಲ್ಲಿ ಗಾಂಜಾ ಕೃಷಿ ಆರಂಭಿಸಿದ್ದರ ಬಗ್ಗೆ ವರದಿಯಾಗಿದೆ. ವಿದೇಶಿ ಹೂವುಗಳನ್ನ ಬೆಳಸಲು ನೆಟ್ ಹಾಕಿ ಫಾರ್ಮಿಂಗ್ ಮಾಡುವ ಹಾಗೆ, ಈತ ಮನೆಯಲ್ಲಿಯೇ ನೆಟ್ ಬಳಸಿ , ಫ್ಯಾನು ಲೈಟು ಅಳವಡಿಸಿ ಗಾಂಜಾವನ್ನು ಪಾಟ್​ಗಳಲ್ಲಿ ಬೆಳೆಯುತ್ತಿದ್ದ. ಸದ್ಯ ಈ ಬಗ್ಗೆ ಮಾಹಿತಿ…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

ವಾಹನವೊಂದರ ಬ್ರೇಕ್ ಫೇಲ್ ಆದ ಕಾರಣ ಉಳಿದ ಎಲ್ಲಾ ವಾಹನ ಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ. ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಕಳೆದ ಅರ್ಧಗಂಟೆಗೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಇತ್ತ ಅದರ ನಡುವೆಯೇ ಆಂಬ್ಯುಲೆನ್ಸ್ ಗಳು ಸಹ ಓಡಾಟ ನಡೆಸಲು ಪರದಾಟ ನಡೆಸುತ್ತಿವೆ. ಸ್ಥಳದಲ್ಲಿ ಪೊಲೀಸರು ಇದ್ದು ವಾಹನ…

Read More