ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ : ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…