Headlines

ವ್ಯಸನ ಮುಕ್ತ ಸಮಾಜಕ್ಕಾಗಿ 450 ಕಿಲೋ ಮೀಟರ್ ಪಾದಯಾತ್ರೆ : ಅಥಣಿಯಿಂದ ಹೊಂಬುಜಾ ಕ್ಷೇತ್ರಕ್ಕೆ ಕಾಲ್ನಡಿಗೆಯಲ್ಲಿ ಬಂದ ಭಕ್ತರ ದಂಡು

ರಿಪ್ಪನ್ ಪೇಟೆ : ಸದೃಢ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಪಣತೊಡಬೇಕು ಎಂಬ ಆಶಯದೊಂದಿಗೆ ಆ ನಿಟ್ಟಿನಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆ ಮೂಲಕ ಜನಜಾಗೃತಿ ಗೊಳಿಸುತ್ತಿರುವುದು  ವಿಶೇಷ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ- ಐನಾಪುರ ಗ್ರಾಮದ ಶ್ರೀ ಕ್ಷೇತ್ರ ಹೊಂಬುಜ ಪದ್ಮಾವತಿ ಪಾದಯಾತ್ರ  ಸಂಘವು   ಈ ಕಾರ್ಯದಲ್ಲಿ ತೊಡಗಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಶ್ರೀ ಕ್ಷೇತ್ರ ಹೊಂಬುಜಕ್ಕೆ  ಸುಮಾರು 450  ಕಿಲೋ ಮೀಟರ್ ಪಾದಯಾತ್ರೆ ಯಲ್ಲಿ ಬಂದು ದರ್ಶನ  ಪಡೆಯುತ್ತಿದ್ದಾರೆ. ಪದ್ಮಾವತಿ ಪಾದಯಾತ್ರಾ…

Read More

ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ : ಮಹಿಳೆ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ಬೈಪಾಸ್ ರಸ್ತೆಯ ಯಮಹಾ ಶೋರೂಂ ಬಳಿ ಲಾರಿಯೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ   ಲಾರಿಯಿಂದ ಮುಂದೆ ಹೋಗುತ್ತಿದ್ದ ಬೈಕ್​ಗೆ ಗುದ್ದಿದ ಪರಿಣಾಮ ಬೈಕ್​ ಸವಾರರು ಅಲ್ಲಿಯೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಮೇಲೆ ಹರಿದಿದೆ. ಘಟನೆಯಲ್ಲಿ ಸಯ್ಯದ್ ಸೈಫುಲ್ಲಾ ಗಾಯಗೊಂಡರೆ, ಅವರ ಪತ್ನಿ ಸಾಜಿದಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಸ್​ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ವಶಕ್ಕೆ…

Read More

ಡಾಕ್ಟರ್ ನಾಗರಾಜ್ ಚಡಗ ನಿಧನಕ್ಕೆ ಹೊಸನಗರ ತಾಲೂಕು ಜೆಡಿಎಸ್ ಸಂತಾಪ

ಹೊಸನಗರ : ವೈದ್ಯರು ಹೊಸ ನಗರ ಪುರಸಭೆಯ ಮಾಜಿ ಅಧ್ಯಕ್ಷರು ಜೆಡಿಎಸ್ ಪಕ್ಷದ ಮುಖಂಡರಾಗಿದ್ದ ಡಾ ನಾಗರಾಜ ಚಡಗ ರವರ ನಿಧನಕ್ಕೆ ತಾಲೂಕು ಜೆಡಿಎಸ್ ಪಕ್ಷ ತುರ್ತು ಸಭೆ ಸೇರಿ ಮೃತರ ಆತ್ಮಕ್ಕೆ ಸಂತಾಪ ಸೂಚಿಸಿ ಶಾಂತಿ ಕೋರಿದರು.  ತುರ್ತು ಸಭೆಯಲ್ಲಿ ಜೆಡಿಎಸ್ ಪಕ್ಷದ ತಾಲೂಕ್ ಅಧ್ಯಕ್ಷ ವರ್ತೇಶ್, ಜೆಡಿಎಸ್ ಮುಖಂಡರಾದ ಅರ್ ಎ ಚಾಬುಸಾಬ್ , ಎಂ ವಿ ಜಯರಾಮ, ಯಡೂರು ರಾಜರಾಮ್,  ಸುಮತಿ ಪೂಜಾರಿ, ಭಾಗ್ಯ ಗೋಪಾಲಕೃಷ್ಣ ಮೂಡಬಾಗಿಲು ರಮಾನಂದ ಎಚ್ ಆರ್ ಪ್ರಕಾಶ್…

Read More

ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ : ವಿಡಿಯೋ ಸಹಿತ ಬಿಜೆಪಿಗೆ ಭದ್ರಾವತಿ ಶಾಸಕ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆ ದಿನವಾದ ಸೋಮವಾರ ಸಂಜೆ ಸಾವರ್ಕರ್​ ಫ್ಲೆಕ್ಸ್​ ತೆರವು ವಿವಾದದಲ್ಲಿ ಪ್ರೇಮ್​ಸಿಂಗ್​ ಎಂಬಾತನಿಗೆ ಮುಸ್ಲಿಂ ಯುವಕರು ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಪ್ರಕ್ಷ್ಯಬ್ಧ ಸ್ಥಿತಿ ನಿರ್ಮಾಣಗೊಂಡಿದೆ. ಇದರ ಬೆನ್ನಲ್ಲೇ ಅಂದರೆ ಮಂಗಳವಾರ ಭದ್ರಾವತಿಯಲ್ಲಿ ಹಿಂದು ಯುವಕ ಸುನೀಲ್​ ಎಂಬಾತನ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ನಡೆದಿತ್ತು. ಇದು ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ, ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಸುನೀಲ್​ ಮೇಲಿನ ಹಲ್ಲೆ ಪ್ರಕರಣ ಕುರಿತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಭದ್ರಾವತಿ…

Read More

ಹೊಸನಗರದ ಖ್ಯಾತ ವೈದ್ಯರು ಹಾಗೂ ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ ನಿಧನ

ಹೊಸನಗರದ ಖ್ಯಾತ ವೈದ್ಯರು ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ (83) ವಯೋಸಹಜದಿಂದ ನಿಧನರಾಗಿದ್ದಾರೆ. ಪಟ್ಟಣದ ಶಿವಪ್ಪನಾಯಕ ರಸ್ತೆಯ ವೈದ್ಯ ಫ್ಯಾಮಿಲಿ ಎಂದೇ ಗುರುತಿಸಿಕೊಂಡಿದ್ದ ಡಾಕ್ಟರ್ ಚಡಗ ಕುಟುಂಬದ ನಾಗರಾಜ ಚಡಗ ಅವರು ಇಂದು ಸಂಜೆ 5.30 ರ ವೇಳೆಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಪುತ್ರ ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ. ಡಾಕ್ಟರ್ ನಾಗರಾಜ ಚಡಗ ರವರು 1986 ರಿಂದ 1990 ರವರೆಗೆ ಹೊಸನಗರ ಪುರಸಭೆ ಅಧ್ಯಕ್ಷರಾಗಿ ಹಾಗೂ ಪರಿವರ್ತಿತ ಮಂಡಲ ಪ್ರಧಾನರಾಗಿ…

Read More

ರಿಪ್ಪನ್‌ಪೇಟೆ : ಗುಡ್ ಶೆಪರ್ಡ್ ಚರ್ಚ್ ಬಳಿ ಪಾದಚಾರಿಗೆ ಇನ್ನೋವಾ ಕಾರು ಡಿಕ್ಕಿ

ರಿಪ್ಪನ್‌ಪೇಟೆ : ಬಸ್ ಇಳಿದು ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ಪಾದಚಾರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಎದುರು ನಡೆದಿದೆ. ಸಮೀಪದ ದೂನ ಗ್ರಾಮದ ನಿವಾಸಿ ಥೋಮಸ್ (60) ಗಂಭೀರ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾನೆ. ನಡೆದಿದ್ದೇನು…??? ದೂನ ಗ್ರಾಮದಿಂದ ಖಾಸಗಿ ಬಸ್ ನಲ್ಲಿ ರಿಪ್ಪನ್‌ಪೇಟೆ ಗುಡ್ ಶೆಪರ್ಡ್ ಚರ್ಚ್ ಬಳಿ ಬಂದಿಳಿದ ಥೋಮಸ್ ಬಸ್ ನ ಹಿಂಬದಿಯಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿದ್ದಾಗ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ ಇನ್ನೋವಾ(KA…

Read More

ಬೈಕ್ ಅಪಘಾತ : ಅಪಘಾತವಾದ ಬೈಕ್‌ ಮೈಮೇಲೆ ಬಿದ್ದು ಸವಾರ ಸಾವು

ತೀರ್ಥಹಳ್ಳಿ : ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಬೈಕ್ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಇಂದು ಬೆಳಗಿನ ಜಾವ ಈ ಅಪಘಾತವಾಗಿದೆ. ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು 37 ವರ್ಷದ ರವಿನಾಯ್ಕ್ ಎಂದು ಗುರುತಿಸಲಾಗಿದ್ದು, ನಳೀನ್ ಕೊಪ್ಪ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ರಸ್ತೆ…

Read More

ರಿಪ್ಪನ್‌ಪೇಟೆಯಲ್ಲಿ ವಿಜ್ರಂಭಣೆಯಿಂದ ಜರುಗಿದ 75ನೇ ಸ್ವಾತಂತ್ರ ಅಮೃತ ಮಹೋತ್ಸವ :

ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ೭೫ನೆ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಆಗಸ್ಟ್ ೧೩ ರಿಂದ ಹರ್‌ಗರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಂಡ ಜನತೆ ೧೫ ರ ಸೋಮವಾರ ಅಧಿಕೃತ ಧ್ವಜಸ್ತಂಭಗಳಲ್ಲಿ ಧ್ವಜಾರೋಹಣ ನೇರವೇರಿಸುವುದರೊಂದಿಗೆ ರಾಷ್ಟ ಗೌರವ ಸಲ್ಲಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ,ವೊ ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ…

Read More

ರಿಪ್ಪನ್‌ಪೇಟೆ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಈಶ್ವರ್ ಶೆಟ್ಟಿ ಆಯ್ಕೆ :

ರಿಪ್ಪನ್ ಪೇಟೆ : ಇಲ್ಲಿಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷರಾಗಿ ಆರ್.ಈ. ಈಶ್ವರ್ ಶೆಟ್ಟಿ ಆಯ್ಕೆ ಆಗಿದ್ದಾರೆ. ರಿಪ್ಪನ್ ಪೇಟೆಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮುಜರಾಯಿ ಇಲಾಖೆಯ ದೇವಸ್ಥಾನವಾಗಿದ್ದು, ದೇವಸ್ಥಾನದ ಧರ್ಮದರ್ಶಿ ಸಮಿತಿಗೆ ಸೇರಲು ಆಕಾಂಕ್ಷಿಗಳಾಗಿ ಸುಮಾರು 82 ಜನ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಭಾರಿ ಪೈಪೋಟಿ ನಡೆದಿದ್ದು, ಇತ್ತೀಚಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಧರ್ಮದರ್ಶಿ ಸಮಿತಿ 9 ಜನರ ಸಮಿತಿ ಆಯ್ಕೆ ಮಾಡಿತ್ತು. ಈ ಆಯ್ಕೆಯಂತೆ ಮಾನ್ಯ ಜಿಲ್ಲಾಧಿಕಾರಿಗಳು ಇತ್ತೀಚಿಗೆ…

Read More

ಶಿವಮೊಗ್ಗ ಚೂರಿ ಇರಿತ ಪ್ರಕರಣ : ಆರೋಪಿಗಳ ಬಂಧನ – ಒಬ್ಬನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ  ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್‌ ಸಿಂಗ್‌, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ  ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಪ್ರೇಮ್‌ ಸಿಂಗ್‌ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್…

Read More