ರಿಪ್ಪನ್ ಪೇಟೆ ಸುತ್ತಮುತ್ತ ತಪ್ಪದ ಕಾಡಾನೆ ಉಪಟಳ : ಮತ್ತೆ ಮತ್ತೆ ದಾಳಿ ಮಾಡಿ ರೈತರನ್ನು ಕಂಗೆಡಿಸಿರುವ ಕಾಡಾನೆಗಳು

ರಿಪ್ಪನ್‌ಪೇಟೆ: ಕಳೆದ ಕೆಲವು ತಿಂಗಳುಗಳಿಂದ ಹೆದ್ದಾರಿಪುರ, ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲಭಾಗದಲ್ಲಿ ತೋಟಗಳಿಗೆ ದಾಳಿಯಿಟ್ಟು ಜನರಿಗೆ ನಿದ್ರೆಗೆಡಿಸಿದ್ದ ಕಾಡಾನೆಗಳು ಈಗ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ಉಪಟಳ ನೀಡುತ್ತಿವೆ.  ಸೋಮವಾರ ರಾತ್ರಿ ನರ‍್ಲಿಗೆಯ ರೈತರೊಬ್ಬರ ಬಾಳೆ ತೋಟದಲ್ಲಿ ಪ್ರತ್ಯಕ್ಷವಾದ ಕಾಡಾನೆ ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದ ವಾಹನದತ್ತ ಕಾಡಾನೆ ಧಾವಿಸಿದ್ದು, ಸಿಬ್ಬಂದಿಗಳು ಬೆದರು ಗುಂಡುಗಳನ್ನು ಹಾರಿಸುವ  ಮೂಲಕ ಆನೆಯನ್ನು ಓಡಿಸಿದ್ದಾರೆ. ಬೆದರಿಸಿರುವ ಕಾರಣದಿಂದ ಮುಂದೆ ಸಾಗಿ ಚಾಣಬೈಲು ಗ್ರಾಮದ ದಿನೇಶ್‌ರವರ ತೋಟಕ್ಕೆ…

Read More

ತೀರ್ಥಹಳ್ಳಿ:: ಸಂಘ ಪರಿವಾರದಿಂದ ಯಶಸ್ವಿ ರಕ್ತದಾನ ಶಿಬಿರ

ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಸಂಘ ಪರಿವಾರಗಳು ತೀರ್ಥಹಳ್ಳಿ ಇವರು ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ತೀರ್ಥಹಳ್ಳಿಯ ರೋಟರಿ ರಕ್ತನಿಧಿಯಲ್ಲಿ ಇಂದು ನಡೆಯಿತು. ಸಂಘ ಪರಿವಾರದ ಸದಸ್ಯರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ  ರೋಟರಿ ರಕ್ತನಿಧಿ ತೀರ್ಥಹಳ್ಳಿಯ ಟೆಕ್ನೀಶಿಯನ್ ಅರುಣ್ ಕೆರೋಡಿ  ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ “ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದರೆ ಸೇವೆ, ಸಂಘದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಒಂದು ದಿನವನ್ನು ಸೇವೆಗೆ ಮುಡಿಪಾಗಿಡುತ್ತಾರೆ ಅದರಲ್ಲಿ ಸ್ವಚ್ಚತಾ…

Read More

ಹೊಸನಗರ : ಮಾರುತಿಪುರ ಗ್ರಾಪಂ ಮಾಜಿ ಅಧ್ಯಕ್ಷರಾದ ಓಂಕೇಶ್ ಗೌಡ್ರು ನಿಧನ :

ಹೊಸನಗರ : ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ ಓಂಕೇಶ್ ಗೌಡ್ರು ಸಂಪಳ್ಳಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.  ದೀರ್ಘಕಾಲದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಓಂಕೇಶ್ ಇಂದು ಬೆಳಿಗ್ಗೆ ಹೃದಯಘಾತದಿಂದ ನಿಧನರಾಗಿದ್ದು. ಶ್ರೀಯುತರು 20 ವರ್ಷಕ್ಕೂ ಹೆಚ್ಚು ಕಾಲ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿ,ಸತತ 2 ಬಾರಿ ಮಾರುತಿಪುರ ಪಂಚಾಯತ್ ಸಂಪಳ್ಳಿ ಕ್ಷೇತ್ರದಿಂದ ಸದಸ್ಯರಾಗಿ, ಪಂಚಾಯತ್ ಅಧ್ಯಕ್ಷರು ಆಯ್ಕೆಯಾಗಿದ್ದರು. ಓಂಕೇಶ  ಗೌಡ್ರು  ಸಂಪಳ್ಳಿ ಅವರ ಅಕಾಲಿಕ ನಿಧನಕ್ಕೆ  ಸಂಬಂಧಿಕರು,ಸ್ನೇಹಿತರೂ…

Read More

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ಹಳೂರು ನಿವಾಸಿ ನಾಗೇಶ್ (35) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಳಗಿನಜಾವ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ನಾಗೇಶ್ ಮೃತಪಟ್ಟಿದ್ದಾರೆ. ಮೃತರು ಪತ್ನಿ , ಒರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ…

Read More

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ – ಮಾಜಿ ಸಚಿವರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ಇಂದು ಮಾಜಿ ಸಚಿವ ಹರತಾಳು ಹಾಲಪ್ಪರವರ 63ನೇ ಹುಟ್ಟುಹಬ್ಬ –  ಹರತಾಳು ಹಾಲಪ್ಪ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ…

Read More

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ – ಬಿಇಒ ಕಚೇರಿ ಮುಂದೆ ಧರಣಿ

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ ಹೊಸನಗರ : ತಾಲ್ಲೂಕಿನ ಮೂಡುಗೊಪ್ಪ – ನಗರ ವ್ಯಾಪ್ತಿಯ ದುಬಾರ್‌ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಶೆಟ್ಟಿಯವರ ನೇತೃತ್ವದಲ್ಲಿ ಸುಮಾರು 16 ಕಿ.ಮೀ. ಕಾಲ್ನಡಿಗೆಯಲ್ಲಿ ಹೊಸನಗರ…

Read More

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್ A 35-year-old man was brutally attacked by a group of assailants in Bhadravathi over an old rivalry. The victim suffered severe injuries to both hands and is undergoing treatment in hospital. Police have launched an investigation. ಶಿವಮೊಗ್ಗ: ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು…

Read More

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…

Read More

ಹೊಸನಗರ , ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊಸನಗರ ತಾಲೂಕಿನ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ  ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ.  ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು.  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣ…

Read More

Sed tincidunt erat sit amet molestie dignissim

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Exit mobile version