ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read More

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು  ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 17 ಬಿ.ಇಡಿ ಕಾಲೇಜುಗಳ 911 ಪ್ರ-ಶಿಕ್ಷಣಾರ್ಥಿಗಳು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು 5 ತಿಂಗಳೇ ಕಳೆದಿದ್ದರೂ, ಇನ್ನೂ ಫಲಿತಾಂಶ ಬಾರದ ಕಾರಣ ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರಕ್ಕೀಡಾಗಿದೆ. 2022-23ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳು ಕಳೆದ ಜನವರಿ 10ರಂದು ಮುಕ್ತಾಯವಾಗಿದೆ.ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಈ ಮಧ್ಯೆ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ…

Read More

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ ರಿಪ್ಪನ್‌ಪೇಟೆ : ತಳಲೆ ಸೊಸೈಟಿಯ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಬುಧವಾರ ಬೆಳಗಿನಜಾವ ಮೃತಪಟ್ಟಿದ್ದಾರೆ. ತಳಲೆ ಪ್ರಾಥಮಿಕ ಸಹಕಾರ ಸಂಘದ ಮಾಜಿ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ :

ಹೊಸನಗರ ವಿಧಾನಸಭಾ ಕ್ಷೇತ್ರವು ತಾಲ್ಲೂಕಿನಲ್ಲಿ 2001 ರ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ ನಂತರದ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ಸಮಯದಲ್ಲಿ ಹೊಸನಗರ ಕ್ಷೇತ್ರವನ್ನು ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ಸೇರಿಸಿ ಹೊಸನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಾಗಿತ್ತು. ಇಂದು ಹೊಸನಗರ ತಾಲ್ಲೂಕಿನ ಎಲ್ಲ ಪಕ್ಷದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡು ಮಾಜಿ ಶಾಸಕ ಬಿ.ಸ್ವಾಮಿರಾವ್‌ ರವರ ನೇತೃತ್ವದಲ್ಲಿ ಹಳೇ ಕೋರ್ಟ್ ರಸ್ತೆಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಹೊಸನಗರದ ತಹಶೀಲ್ದಾರ್‌ ಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು….

Read More

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್

Anandapura | ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸರ ಮೇಲೆ ಯುವಕರಿಂದ ಹಲ್ಲೆ..!! ವೀಡಿಯೋ ವೈರಲ್ ಇತ್ತೀಚೆಗೆ ಜನಸಾಮಾನ್ಯರನ್ನು ರಕ್ಷಣೆ ಮಾಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆಯೇ ಕೆಲವು ಪುಂಡರು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಆನಂದಪುರದ(Anandapura) ಗೌತಮಪುರ ಮಾರಿಕಾಂಬಾ ಜಾತ್ರೆಯಲ್ಲಿ ನಡೆದಿದೆ. ಜಾತ್ರೆಯಲ್ಲಿ ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಎಂಬುವವರ…

Read More

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಹೃದಯ ಸಂಬಂಧಿ ಮಗು ರವಾನೆ!!!|zero traffic

ಶಿವಮೊಗ್ಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೂರು ದಿನದ ಹಸುಗೂಸು ಮಗುವನ್ನು ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ  ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಮಾಡುವ ಅವಶ್ಯಕತೆ ಇದ್ದ ಕಾರಣ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮಗುವಿಗೆ…

Read More

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ | GKB

ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ ಸಚಿವ ಮಧು ಬಂಗಾರಪ್ಪ ರವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ‌. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ….

Read More

ಮೋದಿ ಜನ್ಮದಿನಾಚರಣೆಯ ಪ್ರಯಕ್ತ ಅಕ್ಟೋಬರ್ 1ರಂದು ಹೊಂಬುಜದಲ್ಲಿ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ

ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಅಂಗವಾಗಿ ಹೊಂಬುಜ ದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮೋದಿ ಜನ್ಮ ದಿನಾಚರಣೆ ಅಂಗವಾಗಿ  ಬಿಜೆಪಿ ರೈತ ಮೋರ್ಚ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು ಈಗಾಗಲೇ ಹುಂಚ ಬಳಿಯಲ್ಲಿರುವ ಬಿಲ್ಲೇಶ್ವರ ಕುಮದ್ವತಿ ಉಗಮ ಸ್ಥಾನದ ಬಳಿಯ ಪುಷ್ಕರಣೆಯ ಅಮೃತ ಸರೋವರ ಸ್ವಚ್ಚತಾ ಅಂದೋಲನ ಮತ್ತು ರಕ್ತದಾನ ಶಿಬಿರ, ಅರೋಗ್ಯ ತಪಾಸಣೆ, ಎಸ್‌ಸಿ ಎಸ್ ಟಿ ಜನಾಂಗದ 50 ಅಯ್ದ ಬಡಮಕ್ಕಳಿಗೆ…

Read More

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಕೇಸ್ : ಸಿಎಂ ಬೊಮ್ಮಾಯಿ ಘೋಷಣೆ

ಭಾಷೆ ನೆಪದಲ್ಲಿ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಗೂಂಡಾ ಕಾಯ್ದೆ, ದೇಶದ್ರೋಹದ ಕೇಸ್ ದಾಖಲಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಕೃತ್ಯ ಖಂಡಿಸಿ ವಿಧಾನಸಭೆಯಲ್ಲಿ ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಗಿದೆ. ಎಂಇಎಸ್ ವಿರುದ್ಧ ಸರ್ವಾನುಮತದ ಖಂಡನಾ ನಿರ್ಣಯ ಕೂಡ ಅಂಗೀಕರಿಸಲಾಗಿದೆ. ಸುವರ್ಣ ಸೌಧದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಣಿ ಚೆನ್ನಮ್ಮನ ಪ್ರತಿಮೆ ನಿರ್ಮಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಎಂಇಎಸ್ ಬ್ಯಾನ್ ಮಾಡಲು ಆಗದಿದ್ದರೂ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು…

Read More

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ……! ಪಲಿತಾಂಶ ನೋಡುವ ವೆಬ್‌ಸೈಟ್ ವಿವರಕ್ಕಾಗಿ ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಏಪ್ರಿಲ್ 22ರಿಂದ ಆರಂಭವಾಗಿ ಮೇ 18 ರವರೆಗೆ ನಡೆದ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ಪ್ರಕಟಿಸಿದ್ದಾರೆ. ಕರ್ನಾಟಕ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22ಕ್ಕೆ ಆರಂಭವಾಗಿ ಮೇ18ಕ್ಕೆ ಮುಕ್ತಾಯವಾಗಿದ್ದು ರಾಜ್ಯದ ವಿವಿಧೆಡೆಯಲ್ಲಿ ಮೌಲ್ಯಮಾಪನ ಸುಗಮವಾಗಿ ನಡೆದಿದ್ದು. ನಾಳೆ ದ್ವಿತೀಯ ಪಿಯುಸಿ…

Read More