Headlines

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಹೃದಯ ಸಂಬಂಧಿ ಮಗು ರವಾನೆ!!!|zero traffic

ಶಿವಮೊಗ್ಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೂರು ದಿನದ ಹಸುಗೂಸು ಮಗುವನ್ನು ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ  ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಮಾಡುವ ಅವಶ್ಯಕತೆ ಇದ್ದ ಕಾರಣ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮಗುವಿಗೆ…

Read More

ಬೈಕ್ ಅಪಘಾತ – ಕಾಲೇಜು ವಿದ್ಯಾರ್ಥಿ ಸಾವು|Accident

ಬೈಕೊಂದು ಅಪಘಾತಕ್ಕೀಡಾಗಿ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕೈರಾ ಸಮೀಪ ನಡೆದಿರುವುದು ವರದಿಯಾಗಿದೆ. ಸಾಗರದ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿ ಎಲ್ಡ್ರನ್ ಫೆರ್ನಾಂಡಿಸ್ (17) ಮೃತ ಬಾಲಕ. ಆನಂದಪುರ ಸಮೀಪದ ಯಡೆಹಳ್ಳಿಯ ನಿವಾಸಿಯಾಗಿದ್ದ ಎಲ್ಡ್ರನ್ ಫೆರ್ನಾಂಡಿಸ್ ರಾಷ್ಟ್ರೀಯ ಹೆದ್ದಾರಿ 206 ಸಮೀಪ ಗುರುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತ ಹೇಗೆ ಸಂಭವಿಸಿದ ಎಂಬುದು ತಿಳಿದುಬಂದಿಲ್ಲ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ…

Read More

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ|arrested

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ ಶಿವಮೊಗ್ಗ ಮೂಲದ ಐಸಿಸ್ ಉಗ್ರ ಆರೋಪಿ ಅರಾಫತ್ ಅಲಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿದೆ. 2020ರಿಂದ ತಲೆಮರೆಸಿಕೊಂಡಿದ್ದ ಅರಾಫತ್ ಅಲಿಯನ್ನು ಬಂಧಿಸುವಲ್ಲಿ ಎನ್‌ಐಎ ಸಫಲವಾಗಿದೆ. ಅರಾಫತ್ ಅಲಿ ಕೀನ್ಯಾದ ನೈರೋಬಿಯಿಂದ ಬರುತ್ತಿದ್ದಾಗ ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಈ ಮೂಲಕ ವಿದೇಶಿ ಮೂಲದ ಮಾಡ್ಯೂಲ್‌ಗಳ ಪಿತೂರಿಯನ್ನು ಎನ್‌ಐಎ ಭೇದಿಸಿದಂತಾಗಿದೆ. ಈ ಬೆಳವಣಿಗೆಯಿಂದ ಎನ್‌ಐಎ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಐಸಿಸ್ ಪ್ರಚಾರ ಚಟುವಟಿಕೆಯಲ್ಲಿ…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ, ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಉತ್ತಮ ಕ್ರೀಡಾಪಟುವಾಗಿದ್ದ ಬಿ.ಕೆ. ಹರೀಶ್ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಟ್ಟಣದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಹರೀಶ್ ಅವರು ಜನಪ್ರಿಯ ವ್ಯಕ್ತಿತ್ವವಾಗಿದ್ದರು. ಕ್ರೀಡಾಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಯುವಕರಿಗೆ ಪ್ರೇರಣೆಯಾಗಿದ್ದರು. ಮೃತರು ಪತ್ನಿ, ರಾಕೇಶ್ ಫರ್ಟಿಲೈಸರ್ ಸಂಸ್ಥೆಯ ಮಾಲೀಕರಾದ ಪುತ್ರ ರಾಕೇಶ್, ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯೆಯಾಗಿರುವ ಸೊಸೆ…

Read More

ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.  • ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.     • ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ…

Read More

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಬುಲೆಟ್ ಬೈಕ್‌ ನಲ್ಲಿ ಅವಿತು ಕುಳಿತ ಬುಸ್ ಬುಸ್ ನಾಗಪ್ಪ|snake

ಶಿವಮೊಗ್ಗದ ದುರ್ಗಿಗುಡಿ ಸಮೀಪ ಇರುವ ವೈಭವಲಕ್ಷ್ಮೀ ವೈನ್ ಸ್ಟೋರ್ ಬಳಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿತ್ತು ಇಲ್ಲಿನ , ದಿ  ಫ್ಯಾಕ್ಟರಿ ಔಟ್​ ಲೆಟ್ ಬಳಿ ನಿಲ್ಲಿಸಲಾಗಿದ್ದ ಬುಲೆಟ್​ವೊಂದರಲ್ಲಿ ನಾಗರ ಹಾವೊಂದು ಸೇರಿಕೊಂಡಿತ್ತು. ನೋಡನೋಡುತ್ತಿದ್ದಂತೆ ಬುಲೆಟ್​ನ ಹೆಡ್​ಲೈಟ್​ವೊಳಗೆ ಸೇರಿಕೊಂಡಿದ್ದ ನಾಗರ ಹಾವನ್ನ ನೋಡಿದ ಜನರು ಸ್ನೇಕ್ ಕಿರಣ್ ಗೆ ಫೋನಾಯಿಸಿದ್ದಾರೆ. ತಕ್ಷಣ ಅವರು ಸಹ ಸ್ಥಳಕ್ಕೆ ಬಂದಿದ್ಧಾರೆ. ಹೆಡ್​ಲೈಟ್​ ಬಿಚ್ಚಿ ಹಾವನ್ನ ಹಿಡಿಯಬೇಕು ಎನ್ನುವಷ್ಟರಲ್ಲಿ ಹೆಡ್​ಲೈಟ್ ಮೇಲೆ ಬಂದು, ಹೆಡೆಯೆತ್ತಿದ ನಾಗರಾಜ ಸುತ್ತಮುತ್ತ ನೋಡುತ್ತಾ ಬುಸುಗುಡಲು ಆರಂಭಿಸಿದ್ದ.  ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ…

Read More

ಹೊಸನಗರ ತಾಲೂಕ್ ತಹಶೀಲ್ದಾರ್ ವಿ ಎಸ್ ರಾಜೀವ್ ವರ್ಗಾವಣೆ – ಜಿಲ್ಲೆಯ ಮೂವರು ತಹಶೀಲ್ದಾರ್ ವರ್ಗಾವಣೆ|transfer

ಹೊಸನಗರ ತಾಲೂಕಿನ ತಹಶೀಲ್ದಾರ್ ವಿ ಎಸ್ ರಾಜೀವ್ ರವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ರಾಜೀವ್ ಸೇರಿದಂತೆ  ಶಿವಮೊಗ್ಗ ಜಿಲ್ಲೆಯ ಮೂವರು ತಹಶೀಲ್ದಾರ್ ಗಳು ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ, ಹೊಸನಗರ ಮತ್ತು ಶಿವಮೊಗ್ಗ ತಹಶೀಲ್ದಾರ್ ವರ್ಗಾವಣೆಗೊಂಡಿದ್ದಾರೆ. ಭದ್ರಾವತಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ ಉಡುಪಿಯ ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದರೆ, ಹೊಸನಗರ ತಾಲೂಕಿನ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ. ಶಿವಮೊಗ್ಗ ತಾಲೂಕು…

Read More

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ…

Read More