Headlines

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಬೆಂಗಾವಲು ಜೀಪ್ ಅಪಘಾತ :

ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ಜೀಪ್ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು.  ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

Read More

ಶಿವಮೊಗ್ಗ ಗುಂಪು ಘರ್ಷಣೆ : ಓರ್ವನಿಗೆ ಚಾಕು ಇರಿತ – ಭದ್ರಾವತಿ ನಗರದಲ್ಲೂ 144 ಸೆಕ್ಷನ್ ಜಾರಿ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ವಿಷಮ ಪರಿಸ್ಥಿತಿ ಭುಗಿಲೆದ್ದಿದೆ. ಓರ್ವನಿಗೆ ಚೂರಿ ಇರಿಯಲಾಗಿದೆ ಎನ್ನಲಾಗುತ್ತಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅನೇಕ ಗೊಂದಲಗಳಿವೆ. ಇದರಿಂದ ಸ್ವಾತಂತ್ರ್ಯದ ಸಂಭ್ರಮಾಚರಣೆ ಎಲ್ಲವೂ ನೆಗೆದುಬಿದ್ದು ಹೋಗಿದೆ.ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಮೊಡ ಕವಿದಿದೆ

Read More

ಸಾವರ್ಕರ್ ಭಾವಚಿತ್ರ ತೆರವು ವಿವಾದ : ಶಿವಮೊಗ್ಗ ನಗರ ಉದ್ವಿಗ್ನ- ಎರಡು ದಿನ 144 ಸೆಕ್ಷನ್ ಜಾರಿ

ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ…

Read More

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 351ನೇ ಆರಾಧನ ಮಹೋತ್ಸವ

ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 351ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಮದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ ಮಹಾಮಂಗಳಾರತಿ ಜರುಗಿತು. ನಂತರ ಸಾಮೂಹಿಕ ಅನ್ನಸಂತರ್ಪಣೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ದಂಡು ಹರಿದು ಬಂದಿತು.

Read More

ರಿಪ್ಪನ್ ಪೇಟೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಸಂಭ್ರಮ : ಸಂಭ್ರಮದ ಯಶಸ್ವಿಗೆ ಸಕಲ ಸಿದ್ಧತೆ : ಮಂಜುಳಾ ಕೇತಾರ್ಜಿ ರಾವ್

ರಿಪ್ಪನ್ ಪೇಟೆ : ಆಜಾದ್ ಕಿ ಅಮೃತ್ ಮಹೋತ್ಸವ ಅಂಗವಾಗಿ ರಿಪ್ಪನ್ ಪೇಟೆಯ ಗ್ರಾಮಾಡಳಿತ ಸಕಲಸಿದ್ಧತೆಯನ್ನು ಮಾಡಿದ್ದು 3000ಕ್ಕೂ ಅಧಿಕ ಜನರು ಈ ಸಂಭ್ರಮಕ್ಕೆ ಸಾಕ್ಷಿಗಳಾಗಲಿದ್ದಾರೆ ಎಂದು ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತರ್ಜಿ ರಾವ್ ಹೇಳಿದರು.  ಇಂದು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಅವರು ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಆಜಾದ್ ಕೀ ಅಮೃತ್ ಮಹೋತ್ಸವವನ್ನು ಸಡಗರದಿಂದ ಆಚರಿಸಲು ದೇಶಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಸಿದ್ಧತೆಯನ್ನು ನಡೆಸುತ್ತಿದ್ದಾರೆ ಹಾಗೆಯೇ ನಮ್ಮ ರಿಪ್ಪನ್ ಪೇಟೆ ಗ್ರಾಮ…

Read More

ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ನೀವೆ ಹಿಂಗೆ ಎಡವಟ್ಟು ಮಾಡಿದ್ರೆ ಹೆಂಗೆ???? ಇದು ನಿಮ್ಮ ಅವಿವೇಕಿತನವೋ???? ಅಸಡ್ಡೆಯೋ????

ತೀರ್ಥಹಳ್ಳಿ: ದೇಶಾದ್ಯಂತ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶದ ಹಬ್ಬವಾಗಿ ಆಚರಿಸುತ್ತಿದ್ದು ಇಂದಿನಿಂದ ಆಗಸ್ಟ್ ಹದಿನೈದರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದಾರೆ.ದೇಶಪ್ರೇಮಿಗಳು ತ್ರಿವರ್ಣ ಧ್ವಜಕ್ಕೆ ಪೂಜೆ ನೆರವೇರಿಸಿ ಮನೆಯ ಮುಂಭಾಗ ಹಾಗೂ ಮನೆಯ ಮೇಲೆ ಬಾವುಟವನ್ನು ಹಾರಿಸಿ ನಮಸ್ಕರಿಸುತ್ತಿದ್ದಾರೆ. ಆದರೆ ಕೆಲವು ಸರ್ಕಾರಿ ಅಧಿಕಾರಿಗಳು  ತ್ರಿವರ್ಣಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರಾ ಎಂಬ ಪ್ರೆಶ್ನೆ ಮೂಡುತ್ತಿದೆ. ಕಾರಣ ತೀರ್ಥಹಳ್ಳಿ ಕ್ಷೇತ್ರದ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೆರವೇರಿಸಿದ ಧ್ವಜಾರೋಹಣದಲ್ಲಿ ಎಡವಟ್ಟು ಎದ್ದು ಕಾಣಿಸುತ್ತಿದ್ದು ಎಲ್ಲಾ ಕಡೆ ಟ್ರೊಲ್ ಆಗುತ್ತಿದೆ….

Read More

ಶಿವಮೊಗ್ಗದ ಶಾಪಿಂಗ್ ಮಾಲ್​ನಲ್ಲಿ ಸಾರ್ವಕರ್​ ಭಾವಚಿತ್ರ ವಿವಾದ!!! ಪೊಲೀಸರಿಂದ ಎಂಡಿ ಶರೀಫ್​ ವಶಕ್ಕೆ! ಠಾಣೆಯ ಎದುರು ರಾತ್ರೋರಾತ್ರಿ ನಡೀತು ಪ್ರತಿಭಟನೆ

ಶಿವಮೊಗ್ಗ: ಸಿಟಿ ಸೆಂಟ್ರಲ್​ ಮಾಲ್ : ನಿನ್ನೆ ಮಾಲ್​ನಲ್ಲಿ ವೀರ ಸಾರ್ವಕರ್​ ಫೋಟೋ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ತುಂಗಾ ನಗರ ಪೊಲೀಸ್ ಠಾಣೆಯ ಎದುರು ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆ ಸಂಬಂಧ ಕೇಸ್​ ದಾಖಲಿಸಿದ್ದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕೆಲವು ಕಾರ್ಯಕರ್ತರು ಠಾಣೆ ಎದುರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಅಧಿಕ ಕಾಲ ಸ್ಥಳದಲ್ಲಿ…

Read More

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಳಲಿ ಮಠದಲ್ಲಿ ‘ಹರ್ ಘರ್ ತಿರಂಗಾ” — ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳಿಂದ ಧ್ವಜಾರೋಹಣ

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ಹರ್ ಘರ್ ತಿರಂಗಾ’ ಕಾರ್ಯಕ್ರಮದ ಅಂಗವಾಗಿ ಮಳಲಿ  ಮಠದ  ಡಾ. ಶ್ರೀ ಗುರು ನಾಗಭೂಷಣ  ಶಿವಾಚಾರ್ಯ  ಮಹಾಸ್ವಾಮಿಗಳು ಧ್ವಜಾರೋಹಣ  ನೆರವೇರಿಸಿದರು. ನಂತರ ಮಾಧ್ಯಮದವರೊಂದಿಗೆ  ಮಾತನಾಡಿ  ರಾಷ್ಟ್ರ ಧ್ವಜವು  ಪ್ರತಿಯೊಂದು ರಾಷ್ಟ್ರದ  ನಾಗರಿಕರ ಐಕ್ಯತೆಯ  ಸಂಕೇತವಾಗಿದೆ. ಹಾಗೆಯೇ ದೇಶದ ಪ್ರತಿಯೊಬ್ಬರು ರಾಷ್ಟ್ರ ಧ್ವಜ ವನ್ನು ಗೌರವಿಸ ಬೇಕು. ಹಾಗೆಯೇ  ನಮ್ಮ ದೇಶ  ಸ್ವಾತಂತ್ರ್ಯದ  ಅಮೃತ ಮಹೋತ್ಸಹ ವವನ್ನು ಆಚರಿಸುತ್ತಿದೆ. ಈ ಬಾರಿಯ ಸ್ವಾತಂತ್ರ್ಯತ್ಸ ವ ನಾಡಿನ ಸಕಲರಿಗೂ  ಒಳಿತನ್ನು ಮಾಡಲಿ ಎಂದು…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.   ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…

Read More

ಶಿವಮೊಗ್ಗದ ಶಾಪಿಂಗ್ ಮಾಲ್​ ನಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ವಿವಾದ : ಬಿಗುವಿನ ವಾತಾವರಣ

ಶಿವಮೊಗ್ಗ : ನಗರದ ಸಿಟಿ ಸೆಂಟ್ರಲ್​ ಮಾಲ್​ ವಿವಾದವೊಂದಕ್ಕೆ ಸಾಕ್ಷಿಯಾಗಿ ಹಲವು ಸನ್ನಿವೇಶಗಳನ್ನು ಕಂಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಾಡಿದ್ದ ಅಲಂಕಾರದ ನಡುವೆ ವೀರ ಸಾರ್ವಕರ್​ ಫೋಟೋಹಾಕಿದ್ದನ್ನ ಪ್ರಶ್ನಿಸಿ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ಹೊರಹಾಕಿ ಪ್ರತಿಭಟಿಸಿದರೆ, ಬಿಜೆಪಿ ಕಾರ್ಯಕರ್ತರು ವೀರ ಹೋರಾಟಗಾರರಿಗೆ ಎಸ್​ಡಿಪಿಐ ಅವಮಾನ ಮಾಡಿದೆ ಎಂದು ಆಕ್ರೋಶ ಹೊರಹಾಕಿ ಮಾಲ್​ನ ಎದುರಲ್ಲೆ ಪ್ರತಿಭಟನೆ ನಡೆಸಿತು. ಮನೆಮನೆಗೂ ತಿರಂಗಾ ಅಭಿಯಾನದ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ನಗರ ಪ್ರತಿಷ್ಟಿತ ಕಟ್ಟಡಗಳು ಹಾಗೂ ಸಾರ್ವಜನಿಕ…

Read More