ಶಾಲೆಯಿಂದ ಮನೆಗೆ ತೆರಳುತಿದ್ದ ಮಗು ಕಾರು ಡಿಕ್ಕಿಯಾಗಿ ಸಾವು : ಆನಂದಪುರ ಸಮೀಪದಲ್ಲೊಂದು ಹೃದಯವಿದ್ರಾವಕ ಘಟನೆ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚೆನ್ನ ಕೊಪ್ಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಗುವಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಚೆನ್ನಕೊಪ್ಪ ಗ್ರಾಮದಲ್ಲಿ ಶಾಲೆ ಮುಗಿದ ನಂತರ ವಿದ್ಯಾರ್ಥಿ ಮನೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಅಭಿಷೇಕ್ (6 ) ವರ್ಷ ಸಾವಿಗೀಡಾದ ಪುಟಾಣಿ ವಿದ್ಯಾರ್ಥಿಯಾಗಿದ್ದಾನೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ವಿದ್ಯಾರ್ಥಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಗುವಿಗೆ ಗಂಭೀರ ಗಾಯಗಳಾಗಿವೆ ಕೂಡಲೇ ಸ್ಥಳೀಯರು ವಾಹನದಲ್ಲಿ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು…


