ಶಿವಮೊಗ್ಗ-ಆಯನೂರು ಹೆದ್ದಾರಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ|Robbery
ಮಾರಿ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ಹಾಡಹಗಲೇ ನಗ – ನಗದು ಅಪಹರಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ಶಿವವಮೊಗ್ಗ-ಸಾಗರ ಹೆದ್ದಾರಿಯಲ್ಲಿ ಬರುವ ಟ್ರೀಪಾರ್ಕ್ನ ಸಮೀಪ ದರೋಡೆಯೊಂದು (Dacoity) ನಡೆದಿರುವ ಬಗ್ಗೆ ವರದಿಯಾಗಿದೆ. ತರಿಕೆರೆಯ ವಸಂತ್ ಎಂಬವರು ಕಾರಿನಲ್ಲಿ ಮಾರಿಜಾತ್ರೆಗೆ ಹೋಗುತ್ತಿದ್ದ ವೇಳೆ ಅವರನ್ನು ಟ್ರೀಪಾರ್ಕ್ ಬಳಿ ಅಡ್ಡಗಟ್ಟಲಾಗಿದೆ. ಕಾರಿನಲ್ಲಿ ಹೋಗುತ್ತಿದ್ದವರನ್ನ ತಡೆದು ಕುತ್ತಿಗೆಗೆ ಮಚ್ಚು ಹಿಡಿದು ಕ್ಯಾಶ್ ಹಾಗೂ ಚಿನ್ನವನ್ನು ದೋಚಿ ಹೋಗಿದ್ದಾರೆ. ಮೂತ್ರ ವಿಸರ್ಜನೆಗೆ ಎಂದು ಕಾರು ನಿಲ್ಲಿಸಿದ್ದ…