Headlines

ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ನಿಧನ :

ಕೋಣಂದೂರು : ಇಲ್ಲಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇಂದು ಕಾರ್ಯನಿಮಿತ್ತ ಕಾರ್ ನಲ್ಲಿ ಶಿವಮೊಗ್ಗಕ್ಕೆ ತೆರಳಿ ವಾಪಾಸ್ ಗರ್ತಿಕೆರೆಯ ನಿವಾಸಕ್ಕೆ ಹಿಂದಿರುಗುವಾಗ ಆಯನೂರ್ ಬಳಿ ಹಠಾತ್ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಕಾರಿನ ಚಾಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಅಷ್ಟರಲ್ಲೆ ಅವರ ಪ್ರಾಣಪಕ್ಷಿ ಹಾರಿಹೋಗಿದೆ.ಮೃತದೇಹವನ್ನು ಆಂಬುಲೆನ್ಸ್ ಮೂಲಕ ಗರ್ತಿಕೆರೆಯ ಸ್ವ ಗೃಹಕ್ಕೆ ತರಲಾಗುತ್ತಿದೆ. ಕೋಣಂದೂರು ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿ ಮೂಡಿಸಿದ್ದ ಗಣೇಶ್ ಮೂರ್ತಿಯವರ ಅಗಲಿಕೆ ಅವರ ಅಸಂಖ್ಯಾತ…

Read More

ಸಾಗರ : ನೂತನ ಸಚಿವರಾದ ಸಾಗರದ ಅಳಿಯಂದರಿಗೆ ತಾಲೂಕ್ ಬಿಜೆಪಿ ಯಿಂದ ಸನ್ಮಾನ

ಸಾಗರ : ನಗರದ ಗಾಂಧಿ ಮೈದಾನದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರು ಹಾಗೂ ಸಾಗರದ ಅಳಿಯಂದಿರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕ ಹರತಾಳು ಹಾಲಪ್ಪ ನವರ ನೇತ್ರತ್ವದಲ್ಲಿ ನಡೆದ ಸಚಿವರಿಗೆ ಅಭಿನಂದನಾ ಕಾರ್ಯಕ್ರವು ಒಂದು ಭಾವಪೂರ್ಣ ಸಮಾರಂಭವಾಗಿತ್ತು. ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ…

Read More

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More

ಹುಂಚಾ : ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನ ಉದ್ಘಾಟನೆ

ಹುಂಚಾ : ಇಲ್ಲಿನ ಸಮೀಪದ ಕುಪ್ಪಟಹಳ್ಳಿ ಗ್ರಾಮದ ಸಮುದಾಯ ಭವನವನ್ನು ಮಾಜಿ ತಾಪಂ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಯವರು ಗ್ರಾಮಸ್ಥರ ಒತ್ತಾಯದ ಮೇರೆಗೆ ಉದ್ಘಾಟಿಸಿದರು. ಈ ಹಿಂದೆ ಗ್ರಾಮಸ್ಥರ ಮನವಿ ಮೇರೆಗೆ ಕುಪ್ಪಟಹಳ್ಳಿ ಗ್ರಾಮದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲು ಹಾಗೂ ಸಭೆ ನಡೆಸಲು ಅನುಕೂಲವಾಗುವಂತೆ ತಾಪಂ ಅಧ್ಯಕ್ಷರಾಗಿದ್ದ ವೀರೇಶ್ ಆಲವಳ್ಳಿ ರವರು ತಾಪಂ  ಅನುದಾನದಲ್ಲಿ ಸಮುದಾಯ ಭವನ ನಿರ್ಮಿಸಿಕೊಟ್ಟಿದ್ದರು.ಆದರೆ ಕರೋನಾ ಕಾರಣದಿಂದ ಉದ್ಘಾಟನೆ ಮಾಡಲು ಆಗಿರಲಿಲ್ಲಾ ಗ್ರಾಮಸ್ಥರ ಒತ್ತಾಯದ ಮೇರೆಗೆ ಇಂದು ವೀರೇಶ್ ಆಲುವಳ್ಳಿ ರವರು ಸಮುದಾಯ…

Read More

ಆಗುಂಬೆ ಘಾಟಿ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದು ಪ್ರಯಾಣಿಕರಿಗೆ ತೊಂದರೆ !

ತೀರ್ಥಹಳ್ಳಿ ::  ತಾಲೂಕಿನ ಆಗುಂಬೆ ಘಾಟಿ ಕೆಳಭಾಗದಿಂದ  ಮೂರನೇ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದು ಬೆಳಗ್ಗಿನಿಂದ ಸರಿ ಸುಮಾರು ಇನ್ನೂರಕ್ಕೂ ಹೆಚ್ಚು ವಾಹನಗಳು ಘಾಟಿಯಲ್ಲಿಯೇ ಜಾಮ್  ಆಗಿದ್ದು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಅರಣ್ಯ ಇಲಾಖೆ ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದವರು ಈ ಬಗ್ಗೆ ಗಮನಹರಿಸಬೇಕು ಎಂಬುದಾಗಿ ವಾಹನ ಸವಾರರು ಮನವಿ ಮಾಡಿಕೊಂಡಿದ್ದು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಈ ರೀತಿ ರಸ್ತೆ ಬದಿಯಲ್ಲಿರುವ ಬೀಳುವ  ಮರಗಳನ್ನು ಮುಂಜಾಗ್ರತಾ ಕ್ರಮವಾಗಿ ತೆರವುಗೊಳಿಸಿದರೆ ಸೂಕ್ತ…

Read More

ಮೀಸಲಾತಿ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಹುಟ್ಟು ಹಾಕುವ ಪ್ರಯತ್ನ ಸಹಿಸುವುದಿಲ್ಲ : ವೀರೇಶ್ ಆಲುವಳ್ಳಿ

ರಿಪ್ಪನ್‌ಪೇಟೆ: ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ಪಂಚಮಸಾಲಿ ಲಿಂಗಾಯಿತ ಜಾತಿಗೆ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕಿನ ವ್ಯಾಪ್ತಿಯಲ್ಲಿ ಜಾಗೃತ ಸಭೆ ನಡೆಸಿ ತಾಲೂಕಿನ ವ್ಯಾಪ್ತಿಯ ವೀರಶೈವ ಸಮಾಜದಲ್ಲಿ ಒಡಕು ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿದ್ದಾರೆಂದು ಹೊಸನಗರ ತಾಲ್ಲೂಕು ವೀರಶೈವ ಜಾಗೃತಿ ವೇದಿಕೆಯ ಮುಖಂಡ,ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಆರೋಪಿಸಿದ್ದಾರೆ.  ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಮಾಜದ ಎಲ್ಲಾ ಬಾಂಧವರು ಹೊಂದಿಕೊಂಡು ಹೋಗಬೇಕಾಗಿದೆ.ವೀರಶೈವರು ಹಾಗೂ…

Read More

ಮಲೆನಾಡು ಭಾಗದ ನೆಟ್ ವರ್ಕ್ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ: ಶಾಸಕ ಹರತಾಳು ಹಾಲಪ್ಪ

ಸಾಗರ :: ಮಲೆನಾಡು ಭಾಗದಲ್ಲಿ ಉಂಟಾಗಿರುವ ನೆಟ್ ವರ್ಕ್ ಸಮಸ್ಯೆಯಿಂದ ಅನೇಕ ಜನರಿಗೆ ಆನ್ ಲೈನ್ ಮೂಲಕ ಮಾಡುವ ಕೆಲಸಗಳಿಗೆ ತೊಂದರೆ ಆಗುತ್ತಿದ್ದು ಮತ್ತು ರಾಜ್ಯದಲ್ಲಿ ತಹಸೀಲ್ದಾರ್ ಕನ್ವರ್ಟೆಡ್ ನಿವೇಶನಗಳ ಸಮಸ್ಯೆಗಳ ಕುರಿತು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಇವರ ಗಮನಕ್ಕೆ ತಂದಿದ್ದು ಶೀಘ್ರದಲ್ಲೇ ಇದನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ ಇದರಿಂದ  ಅನೇಕ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಹರತಾಳು ಹಾಲಪ್ಪ  ತಿಳಿಸಿದರು ಅವರು ಇಂದು ಸಾಗರ ನಗರಸಭೆ ಹಮ್ಮಿಕೊಂಡಿದ್ದ 2021 ನೇ ಸಾಲಿನ 15ನೇಹಣಕಾಸು ಅನುದಾನದಲ್ಲಿ…

Read More

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

ವಸತಿ ಗೃಹಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು 7.61ಕೋಟಿ ರೂ ಕ್ರಿಯಾ ಯೋಜನೆಗೆ ಅನುಮೋದನೆ : ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಗೋಪಿಶೆಟ್ಟಿಕೊಪ್ಪ ಮತ್ತು ಗೋವಿಂದಾಪುರದಲ್ಲಿ ನಿರ್ಮಿಸಲಾಗುತ್ತಿರುವ ಜಿ ಪ್ಲಸ್ 2 ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ನಗರೋತ್ಥಾನ (ಹಂತ 3) ಅನುದಾನದಲ್ಲಿ 100ಕೋಟಿ ರೂ. ಮಂಜೂರಾಗಿದ್ದು, 92.39 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬಾಕಿ ಉಳಿದಿರುವ ಮೊತ್ತವನ್ನು ಮಾರ್ಗಸೂಚಿ ಪ್ರಕಾರ ವೆಚ್ಚ ಮಾಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ…

Read More

ಸೊರಬ: ತೀ ನಾ ಶ್ರೀನಿವಾಸ್ ಹೇಳಿಕೆಗೆ ಬಿಜೆಪಿ ಖಂಡನೆ

ಸೊರಬ: ಕಾಂಗ್ರೆಸ್ ಮುಖಂಡ ತೀನಾ ಶ್ರೀನಿವಾಸ್ ರವರು ನೀಡಿರುವ ಸೊರಬದಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಹೇಳಿಕೆಯನ್ನು ಖಂಡಿಸಿ ಸೊರಬ ಬಿಜೆಪಿ ಮುಖಂಡರು ಇಂದು ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.  ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಗರ್ ಹುಕುಂ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ ಚನ್ನಾಪುರ ಅವರು ಸಾಗರದ ಕಾಂಗ್ರೆಸ್ ಮುಖಂಡರಾದ ತೀ ನಾ ಶ್ರೀನಿವಾಸ್ ರವರು ಸೊರಬ ತಾಲ್ಲೂಕಿನ ಬಗರ್ ಹುಕುಂ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಹರಿಸಿ ಬಿಡುತ್ತೇನೆ ಎಂಬ ವಿಚಾರವಾಗಿ  ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗುಡ್ಡೇಕೊಪ್ಪ ಹಾಯಾ ಬೆಟ್ಟದಕೂರ್ಲಿ ಸಿದ್ದಿಹಳ್ಳಿ …

Read More