Headlines

ಪ್ರಧಾನಿ ನರೇಂದ್ರ ಮೋದಿ 72ನೇ ಜನ್ಮದಿನ : ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ನೆರೆವೇರಿಸಲಾಯಿತು.  ರಿಪ್ಪನ್‌ಪೇಟೆ-ಹುಂಚ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ಮಾತನಾಡಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ಮೋದಿಯವರ ರಾಷ್ಟ್ರಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್…

Read More

ರಿಪ್ಪನ್‌ಪೇಟೆ : ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಉಡುಪಿಯಲ್ಲಿ ಪತ್ತೆ : ಸುಖಾಂತ್ಯಗೊಂಡ ನಾಪತ್ತೆ ಪ್ರಕರಣ

ರಿಪ್ಪನ್‌ಪೇಟೆ : ಇತ್ತೀಚೆಗೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ  ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರದ ನಿವಾಸಿ ಸೌಂದರ್ಯ ತನ್ನ ಇಬ್ಬರು ಮಕ್ಕಳೊಂದಿಗೆ ಉಡುಪಿಯ ಸಾಂತ್ವಾನ ಕೇಂದ್ರದಲ್ಲಿ ಪತ್ತೆಯಾಗಿದ್ದಾರೆ. ಕಳೆದ ಹತ್ತು ವರ್ಷದ ಹಿಂದೆ ಹೆದ್ದಾರಿಪುರ ಗ್ರಾಮದ ಶಶಿಕುಮಾರ್ ಎಂಬಾತನೊಂದಿಗೆ ಸೌಂದರ್ಯ ವಿವಾಹವಾಗಿದ್ದರು . ಶಶಿ ಕುಮಾರ್ ಪತ್ನಿಗೆ ಮಾನಸಿಕ ಕಿರುಕುಳ ದೈಹಿಕ ಹಲ್ಲೆ ನಡೆಸುತ್ತಿದ್ದ ಕಾರಣ ಪತಿಯ ನಡೆಗೆ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದಾರೆ. ನಿನ್ನೆ ಮೂವರು ಪತ್ತೆಯಾಗಿ ಉಡುಪಿ ಸಾಂತ್ವಾನ ಕೇಂದ್ರದಲ್ಲಿದ್ದಾರೆ….

Read More

ತುಮಕೂರು ಮೂಲದ ಯುವಕ ಶಿವಮೊಗ್ಗ ನಗರದ ಲಾಡ್ಜ್ ನಲ್ಲಿ ಆತ್ಮಹತ್ಯೆ :

ಶಿವಮೊಗ್ಗ  ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ಒಂದರಲ್ಲಿ ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮ ಹತ್ಯೆ ಮಾಡಿಕೊಂಡ ಯುವಕ ತುಮಕೂರು ಜಿಲ್ಲೆ ಕೆರೆಸೂರಗೊಂಡನ ಹಳ್ಳಿಯ ಮಂಜು ನಾಥ್ (26) ಎಂದು ತಿಳಿದು ಬಂದಿದೆ. ಡೆತ್‌ನೋಟ್‌ ಪತ್ತೆ:  ಈತ ಅಕ್ಕ ಸುಧಾಳನ್ನು ಕೊಲೆಗೈದಿದ್ದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಸುಧಾ ತನ್ನ ಗಂಡನನ್ನು ಅವಳ ಸ್ನೇಹಿತರ ಜತೆ ಸೇರಿ ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಳು. ಈ ಕೋಪದಲ್ಲಿ ಸುಧಾಳನ್ನು ಕೊಲೆ…

Read More

ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು

ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04  ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ  ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು  ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.  ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…

Read More

ಪೋಕ್ಸೋ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡ ಯುವಕ :

 ಪೋಕ್ಸೋ‌ ಪ್ರಕರಣದಲ್ಲಿ ತನ್ನ ಪರ ತೀರ್ಪು ಬರುವ ಮುನ್ನವೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಮದನ ಕುಮಾರ್ (25) ಎಂಬಾತ ನಿನ್ನೆ ತನ್ನ ಗ್ರಾಮದಲ್ಲಿ ನೇಣಿಗೆ ಶರಣಾಗಿದ್ದಾನೆ. ಮದನ್ ಕುಮಾರ್ ವಿರುದ್ದ ಅದೇ ಗ್ರಾಮದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಎಂಬ ಆರೋಪದ ಮೇಲೆ ಪೋಕ್ಸೋ ಪ್ರಕರಣ ಕಳೆದ ಐದಾರು ವರ್ಷದ ಹಿಂದೆ ದಾಖಲಾಗಿತ್ತು. ನಂತರ ಮದನ ಕುಮಾರ್​ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ. ಪ್ರಕರಣದಲ್ಲಿ…

Read More

ರಿಪ್ಪನ್‌ಪೇಟೆ : ಶಾಲೆಯ ಮೇಲೆ ಉರುಳಿಬಿದ್ದ ಬೃಹತ್ ಮರ – ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮಳವಳ್ಳಿ ಗ್ರಾಮದಲ್ಲಿ ಶಾಲಾ ಸಮಯದಲ್ಲೇ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲೆ ಭಾರಿ ಮರವೊಂದು ಉರುಳಿಬಿದ್ದರೂ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶಾಲೆಯ ಪಕ್ಕದಲ್ಲಿದ್ದ ದೊಡ್ಡಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಶಾಲೆಯ ಎರಡು ಛಾವಣಿ ಸಂಪೂರ್ಣ ಹಾನಿಯಾಗಿದೆ. ಇಂದು ಮೂಗೂಡ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವಿದ್ದ ಹಿನ್ನಲೆಯಲ್ಲಿ ಶಾಲೆಗೆ ಬಂದಿದ್ದ ಎಲ್ಲಾ ಮಕ್ಕಳನ್ನು ಬೆಳಿಗ್ಗೆ 9.30 ರ ಸಮಯಕ್ಕೆ ಮೂಗೂಡ್ತಿ…

Read More

ಇಬ್ಬರು ಮಕ್ಕಳೊಂದಿಗೆ ವಿವಾಹಿತ ಮಹಿಳೆ ನಾಪತ್ತೆ : ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಪ್ಪನ್ ಪೇಟೆ : ತಾಯಿಯೊಂದಿಗೆ ಇಬ್ಬರು ಮಕ್ಕಳು  ಸೆಪ್ಟೆಂಬರ್12  ರಿಂದ ನಾಪತ್ತೆಯಾಗಿದ್ದಾರೆಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ  ವಿದ್ಯಾನಗರದ ನಿವಾಸಿ ಸೌಂದರ್ಯ(26) ಅನ್ವಿತಾ(8)  ಶ್ರೀಜಿತ್( 6) ಎನ್ನಲಾಗಿದೆ. ಕಳೆದ ಹತ್ತು ವರ್ಷದ ಹಿಂದೆ ಶಶಿ ಕುಮಾರ್ ಎಂಬಾತನೊಂದಿಗೆ  ಸೌಂದರ್ಯಳ  ವಿವಾಹವಾಗಿತ್ತು.  ಶಶಿಕುಮಾರ್ ಪತ್ನಿಗೆ ಮಾನಸಿಕ ಕಿರುಕುಳ ದೈಹಿಕ ಹಲ್ಲೆ ನಡೆಸುತ್ತಿದ್ದ ಕಾರಣ ಪತಿಯ ನಡೆಗೆ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ  ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ…

Read More

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 15 ಲಕ್ಷದವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ :

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರವರ್ಗ-3 ರಡಿ 2(ಎ) ಯಿಂದ (ಎಫ್) ವರೆಗೆ ಬರುವ ಮರಾತ, ಮರಾಠ, ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ/ಕ್ಷತ್ರಿ ಮರಾಠ, ಕುಳವಾಡಿ ಜನರ ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜೀಬಾವು-ಜಲ ಭಾಗ್ಯ ಯೋಜನೆ(ಗಂಗಾ ಕಲ್ಯಾಣ ನೀರಾವರಿ ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ…

Read More

ಶಿವಮೊಗ್ಗ ಯುವಕರಿಂದ ಜಗತ್ತಿನ ಅತಿ ಎತ್ತರದ ರಸ್ತೆಯಲ್ಲಿ ಪುನೀತ್ ಪೋಟೋ – ಕನ್ನಡ ಧ್ವಜ ಹಾರಾಟ

ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ. ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು. ಅಪ್ಪು ಕೇವಲ…

Read More

ಕೋಳಿ ಫಾರಂಗೆ ನುಗ್ಗಿದ ಹೆಬ್ಬಾವು : ಉರಗತಜ್ಞ ಸ್ನೇಕ್ ಕಿರಣ್ ರಿಂದ ರಕ್ಷಣೆ

ಕೋಳಿಗಳನ್ನು ತಿನ್ನಲು ಕೋಳಿ ಫಾರಂಗೆ ನುಗ್ಗಿದ್ದ ಹೆಬ್ಬಾವನ್ನು ಸ್ನೇಕ್ ಕಿರಣ್ ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.‌ ಶಿವಮೊಗ್ಗ ತಾಲೂಕು ಗಾಜನೂರು ತುಂಗಾ ಅಣೆಕಟ್ಟೆ ಪಕ್ಕದ ಲಕ್ಷ್ಮೀ ಕೋಳಿ ಫಾರಂಗೆ ಬುಧವಾರ ಬೆಳಗ್ಗೆ, ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ಬಂದಿದೆ. ಕೋಳಿ‌ ಫಾರಂ ಪಕ್ಕದ ಅಡಿಕೆ ತೋಟದಲ್ಲಿ ಹೆಬ್ಬಾವು ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬಂದವರು ಹೆಬ್ಬಾವನ್ನು ಕಂಡು ಮಾಲೀಕರಿಗೆ ತಿಳಿಸಿದ್ದಾರೆ. ಮಾಲೀಕರಾದ ರಾಕೇಶ್ ಅವರು ತಕ್ಷಣ ಸ್ನೇಕ್ ಕಿರಣ್​ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದು ಅವರು, ಹೆಬ್ಬಾವನ್ನು ಸುರಕ್ಷಿತವಾಗಿ…

Read More