Headlines

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ | Hosanagara

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ   ಹೊಸನಗರ ಸಾಗರ ರಸ್ತೆಯ ಅರಳಿಕೊಪ್ಪ ಗ್ರಾಮದ ಬಳಿಯಲ್ಲಿ ಭಾರಿ ಗಾತ್ರದ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯವಾದ ಘಟನೆ ನಡೆದಿದೆ. ಭಾನುವಾರ ಸಂಜೆ ಅರಳಿಕೊಪ್ಪ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾಗಿತ್ತು‌. ತಾಲೂಕ ಆಡಳಿತ ರಕ್ಷಣಾ ಇಲಾಖೆ ಮೆಸ್ಕಾಂ ಅರಣ್ಯ ಇಲಾಖೆ ಕಂದಾಯ ಇಲಾಖೆ ಇವರು ಸ್ಥಳಕ್ಕೆ ಧಾವಿಸಿ,  ಗ್ರಾಮಸ್ಥರ ನೆರವಿನಿಂದ…

Read More

ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi

 ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…

Read More

ಅಲ್ಪಸಂಖ್ಯಾತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮೋದಿ ಸೂಚನೆ ನೀಡಿದ್ದಾರೆ – ಬಿ ಎಸ್ ಯಡಿಯೂರಪ್ಪ|bsy

ಶಿವಮೊಗ್ಗ : ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆಯಿತು ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದ್ದು, ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ಚುನಾವಣೆ ಗೆಲ್ಲಲು ಬೇಕಾದ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾರ್ಗದರ್ಶನ ಮಾಡಿದರು. ಬಹಳ ಉತ್ಸಾಹದಿಂದ ವಾಪಸ್ ಬಂದಿದ್ದೇವೆ. ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ನಾವು ಬರಲೇಬೇಕು.ಮೋದಿ,…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ. ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ…

Read More

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ.ಶ್ರೀಕಾಂತ್ ಮರುಆಯ್ಕೆ

ಶಿವಮೊಗ್ಗ : ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿದ್ದ ಶ್ರೀಕಾಂತ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಅಪ್ಪಾಜಿಗೌಡ, ಶಾರದಾ ಪೂರ್ಯ ನಾಯಕ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ 3ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಯಶಸ್ವಿಯಾಗಿದ್ದರು. ವಿಧಾನಪರಿಷತ್ ಸದಸ್ಯರಾದ ಬೋರೇಗೌಡರ ಗೆಲುವಿಗೂ ಹೆಗಲಾಗಿದ್ದರು.  ಎರಡು ಬಾರಿ ಶಿವಮೊಗ್ಗ ನಗರದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಕೇವಲ ರಾಜಕಾರಣಿ ಮಾತ್ರವಾಗಿರದೆ ಸಮಾಜ ಸೇವಕರಾಗಿದ್ದಾರೆ. ಜಿಲ್ಲೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು…

Read More

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಆನಂದಪುರದ ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ವಿದ್ಯಾರ್ಥಿ ಪರಶುರಾಮ್ ನೇಣಿಗೆ ಶರಣಾದ ದುರ್ದೈವಿ. ಮನೆಯ ಹಿತ್ತಲಿನ ಕಂಬಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ…

Read More

ಪೊಲೀಸರ ಭರ್ಜರಿ ಭೇಟೆ – ದಾಖಲೆ ಇಲ್ಲದ 5.8 ಕೋಟಿ‌ ಮೌಲ್ಯದ 9.5 KG ಚಿನ್ನ ವಶ

ಶಿವಮೊಗ್ಗ ಪೊಲೀಸರು  ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್​ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.  ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್​ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ.  ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ  ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್​ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ.  ಇವತ್ತು ಬೆಳಗ್ಗೆ…

Read More

ತೀರ್ಥಹಳ್ಳಿಯಲ್ಲಿ ಈ ಬಾರಿ ಸಂಭ್ರಮದ ಅದ್ದೂರಿ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ

ತೀರ್ಥಹಳ್ಳಿ: ಮಲೆನಾಡಿನ ಸುಪ್ರಸಿದ್ದ ಜಾತ್ರೆಗಳಲ್ಲಿ ಒಂದಾಗಿರುವ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ಜನವರಿ 2,3,4 ರಂದು ನಡೆಯಲಿದ್ದು  ಈ ಬಾರಿ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆಜಾತ್ರೆಯನ್ನು ಸಂಭ್ರಮ ಹಾಗೂ ವೈಭವಯುತವಾಗಿ ಆಚರಿಸುವುದಾಗಿ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಂದಾಜು 12 ಲಕ್ಷ ರೂ ಮೊತ್ತದ ಬಜೆಟ್ ನೊಂದಿಗೆ  3 ದಿನಗಳ ಕಾಲ ನೆಡೆಯಲಿರುವ ಅದ್ದೂರಿ ಜಾತ್ರೆಗೆ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಸರ್ವರನ್ನು ಸ್ವಾಗತಿಸಿದ್ದಾರೆ.

Read More

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

ಸಾಗರ ಹೊಸನಗರ ತಾಲೂಕಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ತಾಲ್ಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನಲೆಯಲ್ಲಿ ಕ್ಷೇತ್ರದ ಮನೆ, ರಸ್ತೆಗಳು ಹಾನಿಗೊಂಡಿವೆ‌.ಸದರಿ ಪ್ರದೇಶಗಳಿಗೆ ತತ್ತಕ್ಷಣ ಭೇಟಿ ನೀಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ವಿದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಶಾಸಕರ ಆಪ್ತ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ…

Read More
Exit mobile version