Headlines

ರಿಪ್ಪನ್ ಪೇಟೆ : ನಿಂತಿದ್ದ ಟಿಪ್ಪರ್ ಗೆ ಆಟೋ ಡಿಕ್ಕಿ ,ಚಾಲಕನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಹಳೂರಿನಲ್ಲಿ  ನಿಲ್ಲಿಸಿದ್ದ ಟಿಪ್ಪರ್ ಗೆ ಹಿಂಬದಿಯಿಂದ ಬಂದ  ಪ್ಯಾಸೇಂಜರ್ ಆಟೋ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ರಿಪ್ಪನ್ ಪೇಟೆ ವಾಸಿ ಕಿರಣ್  ತೀವ್ರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಹೊಸನಗರ-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿ ಗವಟೂರು ಹೊಳೆ ಸಮೀಪ ಮಧ್ಯ ರಸ್ತೆಯಲ್ಲಿ ಯಾವುದೇ ಇಂಡಿಕೇಟರ್ ಹಾಕದೇ ನಿಲ್ಲಿಸಿದ್ದ ಟಿಪ್ಪರ್ ಗೆ ರಿಪ್ಪನ್ ಪೇಟೆ ಕಡೆಯಿಂದ ಜೇನಿ ಕಡೆಗೆ ಹೋಗುತ್ತಿದ್ದ ಪ್ಯಾಸೇಂಜರ್ ಆಟೋ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ : ಬಿ ಕೆ ಸಂಗಮೇಶ್

ಭದ್ರಾವತಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ. ಅಮೂಲ್ಯ ಸೇವೆಸಲ್ಲಿಸುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿಂದು ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.   ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ…

Read More

ಶಿವಮೊಗ್ಗ: ಪ್ರಧಾನಿ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಕಟು ಪದ ಬಳಕೆ: ಬಿಜೆಪಿ ಐಟಿ ಸೆಲ್ ನಿಂದ ದೂರು

ಶಿವಮೊಗ್ಗ : ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಬಗ್ಗೆ ಫೇಸ್‌ಬುಕ್‌  ಖಾತೆಯಲ್ಲಿ ಕಟು ಪದಗಳಲ್ಲಿ ನಿಂದಿಸಿದ ಮೋಹನ್ ಕುಮಾರ್ ಎಂಬುವವರನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಜರುಗಿಸಿಬೇಕೆಂದು ನಗರದ ದೊಡ್ಡಪೇಟೆ ಠಾಣೆಯಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ ದೂರು ನೀಡಲಾಯಿತು. ಸಾಮಾಜಿಕ ಜಾಲಾತಾಣದಲ್ಲಿ ಪ್ರಧಾನಿಯವರ ಬಗ್ಗೆ ಕಟು ಪದಗಳನ್ನು ಬಳಸಿದ್ದಾರೆ, ಈ ಕೂಡಲೇ ಮೋಹನ್ ಕುಮಾರ್ ಎಂಬಾತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು  ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಲ್ಯಾಣಿ,ಜಿಲ್ಲಾ ಸಹ…

Read More

ಭದ್ರಾವತಿ ನಗರಸಭೆ: ಜೆಡಿಎಸ್​​ ಅಭ್ಯರ್ಥಿಗೆ ಭರ್ಜರಿ ಗೆಲುವು, ಠೇವಣಿ ಕಳೆದುಕೊಂಡ ಬಿಜೆಪಿ

ಭದ್ರಾವತಿ : ಇಲ್ಲಿನ ನಗರಸಭೆ 29ನೇ ವಾರ್ಡ್‌ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲ್ ಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 450 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಗೆಲುವಿನಿಂದ ಭದ್ರಾವತಿ ನಗರಸಭೆ ಯಲ್ಲಿ ಜೆಡಿಎಸ್ ಸ್ಥಾನ 12ಕ್ಕೆ ಏರಿಕೆಯಾಗಿದೆ. ಇನ್ನು ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಜೆಡಿಎಸ್​ನ ನಾಗರತ್ನ ಅನಿಲ್‌ ಕುಮಾರ್ 1,282 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನ ಲೋಹಿತಾ ನಂಜಪ್ಪ 832 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ…

Read More

ನಿಗದಿತ ಅವಧಿಯ ಒಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುತ್ತೆ: ಸಚಿವ ಸಿ.ಸಿ.ಪಾಟೀಲ್

ಶಿವಮೊಗ್ಗ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್ ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ…

Read More

ಜಾನಪದ ಸಮೂಹ ಗಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ :

ಹೊಸನಗರ : ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕ್ರತಿಕ ಮೇಳದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಿಕ್ಷಕರ ಸಮೂಹವು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಇದೇ ತಿಂಗಳು 15,16,17 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ 75ನೇ ಆಜಾದ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ  ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಸಾಧನೆಗೈದ ತಾಲೂಕಿನ ಪ್ರತಿಭಾವಂತ ಶಿಕ್ಷಕರುಗಳಾದ ತೀರ್ಥಕುಮಾರ್ ,ದುಗ್ಗಪ್ಪ,ಮೋಹನ್ ಕುಮಾರ್ ಸಿ,ಪ್ರಕಾಶ್,ಮೋಹನ್ ಹೆಚ್ ಆರ್ ,ತಿಮ್ಮಪ್ಪ ಕಣಬಂದೂರು ,ದೊಡ್ಡಪ್ಪ,ಸೈಯದ್ ಇರ್ಫ಼ಾನ್ ,ಮನೋಹರ…

Read More

ಸೊರಬ:ವಿದ್ಯುತ್ ತಗುಲಿ ಮಹಿಳೆ ಸಾವು ಪ್ರಕರಣ,ಕುಟುಂಬಕ್ಕೆ ಸಾಂತ್ವಾನ

ಸೊರಬ: ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಮೀಪದ ಕತ್ವಾಯಿ ಗ್ರಾಮದಲ್ಲಿ ನಡೆದಿತ್ತು.ಇಂದು ಅವರ ಮನೆಗೆ ಬಿಜೆಪಿ ಮುಖಂಡ ಕಡಸೂರು ಶಿವಕುಮಾರ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ಕುಟುಂಬದವರಿಗೆ ಸಾಂತ್ವಾನ ಹೇಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿದ ಅವರು ಕುಟುಂಬದವರಲ್ಲಿ ಮುಂದಿನ ದಿನಗಳಲ್ಲಿ ಜೊತೆಯಲ್ಲಿರುತ್ತೇವೆ ಎಂದು ಧೈರ್ಯ ತುಂಬಿದರು.  ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಸಲೀಂ, ಮುಖಂಡರಾದ ದಿನೇಶ್ ಹೆಚ್ ನಾಯ್ಕ, ಕನದಾಸ ಕಲ್ಲಂಬಿ, ಪಕ್ಕೀರಪ್ಪ ದ್ಯಾಮಪ್ಪ ಆನಂದಣ್ಣ ಮತ್ತಿತರರು ಇದ್ದರು. ಮಂಗಳವಾರ ನಡೆದಿತ್ತು…

Read More

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ :

ಬೆಂಗಳೂರು: ಕೊರೊನಾ ಆತಂಕದ ಮಧ್ಯೆ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅಳೆದು ತೂಗಿ ಅನುಮತಿ ನೀಡಿದೆ. ಕಳೆದ ಬಾರಿಗಿಂತ ಈ ಬಾರಿ ಕೊಂಚ ಸಡಿಲಿಕೆ ಹೆಚ್ಚಿಸಿ, ಸರಳ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಮನೋರಂಜನೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ನಿರ್ಬಂಧ ಹೇರಿದೆ. ಮನೆ, ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಗಲ್ಲಿಗೊಂದರಂತೆ ಗಣೇಶ ಕೂರಿಸುವುದಕ್ಕೆ ಅನುಮತಿ ನೀಡಿಲ್ಲ. ಕೊರೊನಾ ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಗಣೇಶೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುವ ಸಾಧ್ಯತೆಯಿದೆ. ಗಣೇಶೋತ್ಸವಕ್ಕೆ ಸರ್ಕಾರದ ಷರತ್ತುಗಳೇನು..? -ಮೆರವಣಿಗೆ ಮಾಡುವುದಕ್ಕೆ…

Read More

ಆಹ್ವಾನ ಸಿಗದಿದ್ದಕ್ಕೆ ಕಾರ್ಯಕ್ರಮದಲ್ಲೇ ಕಾಂಗ್ರೆಸ್​ MLC ಪ್ರತಿಭಟನೆ : ಕೈ ಮುಗಿದು ವೇದಿಕೆಗೆ ಕರೆದ ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್​ಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಅರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ-ಚಿತ್ರದುರ್ಗ ರಸ್ತೆ ಮೇಲ್ದರ್ಜೆಗೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ತುಂಗಾ ನದಿಗೆ ನೂತನ ಸೇತುವೆ ಕಾಮಗಾರಿ ಸೇರಿ ಒಟ್ಟು 580.98 ಕೋಟಿ ರೂ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಚಾಲನೆ ನೀಡಲು ಆಗಮಿಸಿದ್ದರು. ಈ ವೇಳೆ ಹೊಳೆಹೊನ್ನೂರು ರಸ್ತೆಯಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದ…

Read More

ಮಾಜಿ ಸಿಎಂ ಬಿಎಸ್​ವೈ ಒಡೆತನದ ಕಾಲೇಜು ಬಸ್​ಗಳಲ್ಲಿ ಡೀಸೆಲ್​ ಕದ್ದಿದ್ದ ಕಳ್ಳರ ಬಂಧನ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಒಡೆತನದ ಖಾಸಗಿ ಕಾಲೇಜಿನ ನಾಲ್ಕು ಬಸ್ಸುಗಳಲ್ಲಿ 580 ಲೀಟರ್ ಡೀಸೆಲ್​ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಪ್ರಕರಣ ಬೆನ್ನತ್ತಿದ್ದ ವಿನೋಬಾನಗರ ಪೊಲೀಸರು ಟಿಪ್ಪುನಗರದ ಸೈಯದ್ ತಬರೇಕ್ (24)ಹಾಗೂ ಸೈಯದ್ ಜಾಫರ್ (24) ಎಂಬಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 90 ಲೀಟರ್ ಡೀಸೆಲ್​ ಹಾಗೂ ಕಳ್ಳತನಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. *ಘಟನೆ ವಿವರ :* ಶಿವಮೊಗ್ಗದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್​ಮೆಂಟ್ ಬಳಿ…

Read More